Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೂರವಾದ ಪ್ರೇಯಸಿಯ ಹತ್ಯೆ ಮಾಡಿ ತಾನು ಆತ್ಮಹತ್ಯೆಗೆ ಶರಣಾದ ಪ್ರಿಯಕರ

Advertisement
ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.


ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಪ್ರಿಯಕರನಿಂದ ಹತ್ಯೆಯಾದ ದುರ್ದೈವಿಯಾಗಿದ್ದು, ಆನಂದ ಸುತಾರ (30) ಆತ್ಮಹತ್ಯೆಗೆ ಶರಣಾದ ವಿವಾಹಿತನಾಗಿದ್ದಾನೆ.

ಘಟನೆಯ ವಿವರ :
ಆನಂದ-ರೇಶ್ಮಾ ಇವರಿಬ್ಬರು ಒಂದೇ ಗ್ರಾಮದವರಾಗಿದ್ದು ಇಬ್ಬರ ನಡುವೆ ಮೊದಲಿನಿಂದಲೂ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ ಇವರಿಬ್ಬರೂ ವಿವಾಹಿತರಾಗಿದ್ದು, ಇಬ್ಬರಿಗೂ ಮಕ್ಕಳಿದ್ದಾರೆ. ರೇಶ್ಮಾ ವಿವಾಹಿತೆ ಎಂದು ಗೊತ್ತಿದ್ದರೂ ಆನಂದ ಅವಳ ಜೊತೆ ಸಂಬಂಧವನ್ನು ಮುಂದುವರೆಸಿದ್ದ.

ಇವರಿಬ್ಬರೂ ಮೇಲಿಂದ ಮೇಲೆ ಭೇಟಿಯಾಗುತ್ತಿದ್ದರು ಮತ್ತು ಮೊಬೈಲ್ ನಲ್ಲಿ ದಿನನಿತ್ಯ ಮಾತಾಡುತ್ತಿದ್ದರು. ರೇಶ್ಮಾಳ ಮನೆಗೆ ಆನಂದ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ರೇಶ್ಮಾ ಮತ್ತು ಆನಂದ ಅವರ ಸಂಬಂಧದ ವಿಷಯ ರೇಶ್ಮಾಳ ಪತಿಗೆ ಕೆಲ ದಿನಗಳ ಹಿಂದೆ ತಿಳಿದಿದೆ

ಅವರು ಹಿರಿಯರ ಮೂಲಕ ನಂದಗಡ ಪೊಲೀಸ್ ಠಾಣೆಗೆ ತೆರಳಿ ಆನಂದ ವಿರುದ್ಧ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ನಂದಗಡ ಪೊಲೀಸರು ಅವರನ್ನು ಠಾಣೆಗೆ ಕರೆಸಿ ರೇಶ್ಮಾಳ ತಂಟೆಗೆ ಹೋಗದಂತೆ ತಿಳಿ ಹೇಳಿ ತಪ್ಪೊಪ್ಪಿಗೆ ಬರೆಸಿಕೊಂಡು ಕಳಿಸಿದ್ದರು. ಇದಾದ ಬಳಿಕ ಹಲವು ದಿನಗಳ ಕಾಲ ರೇಶ್ಮಾ-ಆನಂದ ಪರಸ್ಪರ ಮಾತಾಡಿರಲಿಲ್ಲ.

ತನ್ನ ಪ್ರೇಯಸಿ ತನ್ನಿಂದ ಅಂತರ ಕಾಯ್ದುಕೊಂಡಿದ್ದರಿಂದ ಮನನೊಂದಿದ್ದ ಆನಂದ ಶುಕ್ರವಾರ ಆಕೆಯ ಮನೆಗೆ ನುಗ್ಗಿ ಆಕೆಯ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಹಲವು ಬಾರಿ ಚಾಕುವಿನಿಂದ ಇರಿದು ಗಾಯಗೊಳಿಸಿ ಆಕೆಯನ್ನು ಸ್ಥಳದಲ್ಲೇ ಕೊಂದುಹಾಕಿದ್ಧಾನೆ.

ಪ್ರೇಯಸಿ ಮೃತಪಟ್ಟ ಬಳಿಕ ತಾವೂ ಚಾಕುವಿನಿಂದ ಇರಿದುಕೊಂಡಿದ್ದನು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆನಂದನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟರಿವುದಾಗಿ ಘಟನೆಯ ತನಿಖೆ ಕೈಗೊಂಡ ನಂದಗಡ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ