Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಳವಿ ಚೆನ್ನ ಬಸವೇಶ್ವರನಿಗೆ ಮಹಾರಥೋತ್ಸವ ಸಂಭ್ರಮ

 

ಜೊಯಿಡಾ :
ಹರ ಹರ ಮಹಾದೇವ, ಅಡಕೇಶ್ವರ, ಮಡಕೇಶ್ವರ ಉಳವಿ ಚೆನ್ನ ಬಸವೇಶ್ವರ ಎನ್ನುತ್ತಾ ತೇರನ್ನು ಎಳೆಯುವ ಮೂಲಕ ಶ್ರೀ ಕ್ಷೇತ್ರ ಉಳವಿ ಚನ್ನ ಬಸವೇಶ್ವರ ಮಹಾರಥೋತ್ಸವ ಶನಿವಾರ ಸಂಪನ್ನಗೊಂಡಿತು.

ಸಂಭ್ರಮ ಸಡಗರಗಳ ನಡುವೆ ಮಹಾರಥೋತ್ಸವ ನಡೆಯಿತು. ಲಕ್ಷಾಂತರ ಜನರು ಜಯ ಘೋಷ ಹಾಕುತ್ತಾ ವಿಶಾಲವಾದ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು.

ಬೆಳಗಾವಿ, ಬೈಲಹೂಂಗಲ,ವಿಜಯಪುರ, ಕಲಬುರ್ಗಿ, ಗದಗ, ಕೊಪ್ಪಳ, ಧಾರವಾಡ ಸೇರಿದಂತೆ ಬಸವಣ್ಣನ ಭಕ್ತರು ವಾರಗಳ ಮೊದಲೇ ಜಾತ್ರೆಗೆ ಬಂದು ಸೇರಿದ್ದರು. ಚಕ್ಕಡಿಗಳಲ್ಲಿ ಸಾವಿರಾರು ಭಕ್ತರು ಬಂದು ಚನ್ನ ಬಸವಣ್ಣನ ದರ್ಶನ ಪಡೆದರು. ಎತ್ತುಗಳನ್ನು ಶೃಂಗರಿಸಿ ದೇವರ ಮುಂದೆ ತಂದು ಪೂಜಿಸಿದರು. ಹರಕೆ ಪೂರೈಸಲು ಉರುಳುಗಾಯಿ ಬಿಟ್ಟರು. ದೀಡ ನಮಸ್ಕಾರ ಹಾಕಿದರು, ದಾಸೋಹ ನಡೆಸಿದರು. ಹಲವಾರು ವಿಧಗಳಿಂದ ದೇವರ ಸೇವೆ ಮಾಡಿದರು.ರಥಕ್ಕೆ ಉತ್ತತ್ತಿ,ಬಾಳೆಹಣ್ಣು ಹೊಡೆದು ಹರಕೆ ತೀರಿಸಿದರು.

ಈ ಸಲ ಅಂಗಡಿಗಳನ್ನು ನಿಯೋಜಿತ ಸ್ಥಳದಲ್ಲಿ ಹಾಕಿದ್ದರಿಂದ ರಥಬೀದಿಯಲ್ಲಿ ಥೇರನ್ನು ಎಳೆಯಲು ಜನಜಂಗುಳಿಯಿಲ್ಲದೆ ವ್ಯವಸ್ಥಿತವಾಗಿ ಸುಗಮವಾಗಿದ್ದು ಕಂಡುಬಂತು.

ದಿನಾಂಕ 16ನೇ ತಾರೀಕು ರಥಸಪ್ತಮಿಯಿಂದ ಪ್ರಾರಂಭ ವಾದ ಜಾತ್ರೆ ದಿನಾಂಕ 24ರ ಮಧ್ಯಾಹ್ನ ಮಘಾ ನಕ್ಷತ್ರದ ಶುಭಗಳಿಗೆಯಲ್ಲಿ ಸರಿಯಾಗಿ 4 ಘಂಟೆಗೆ ಲಕ್ಷಾಂತರ ಜನರು ಜಯಘೋಷಗಳೊಂದಿಗೆ ತೆರನ್ನೆಳೆದರು. ಚಕ್ಕಡಿಗಳಲ್ಲಿ ಬಂದ ಭಕ್ತರು ವಾರಗಳ ಕಾಲ ಬೀಡು ಬಿಡುತ್ತಾರೆ. ಈ ವರ್ಷ 1400 ಕ್ಕೂ ಹೆಚ್ಚು ಚಕ್ಕಡಿಗಳು ಬಂದಿದ್ದು 2800 ಕ್ಕೂ ಹೆಚ್ಚು ಎತ್ತುಗಳ ಆರೈಕೆಯಲ್ಲಿ ಪಶುಸಂಗೋಪನಾ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಡೆಪ್ಯೂಟಿ ಡೈರೆಕ್ಟರ್ ಮೋಹನ್ ಕುಮಾ‌ರ್ ಅಸಿಸ್ಟಂಟ್ ಡೈರೆಕ್ಟರ್ ಟಿ. ಎಸ್. ಮಂಜಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ವಿವಿಧ ಮಿಠಾಯಿ ಅಲಂಕಾರಿಕ ವಸ್ತುಗಳು, ಆಟಿಕೆ ಸಾಮಾನುಗಳು, ಬೆತ್ತದ ಸಾಮಗ್ರಿಗಳು ಅರಣ್ಯ ಇಲಾಖೆ ಇಂದ ಬೆತ್ತ ಮಾರಾಟ, ರೈತರ ಸಾಮಗ್ರಿಗಳು ಸೇರಿದಂತೆ ಅನೇಕ ಬಗೆಯ ಅಂಗಡಿಗಳು, ಹತ್ತಾರು ದಾಸೋಹಗಳು ಜನರ ನೆರವಿಗೆ ಬಂದವು.

ಮಹಾರಥೋತ್ಸವದಲ್ಲಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಗಂಗಾಧರ ಕಿತ್ತೂರ, ಉಪಾಧ್ಯಕ್ಷ ಸಂಜಯ ಕಿತ್ತೂರ, ಸದಸ್ಯ ಶಿವಾನಂದ ಕಿತ್ತೂರ, ವ್ಯವಸ್ಥಾಪಕ ಶಂಕರಯ್ಯ ಕಲ್ಮಠ ಶಾಸ್ತ್ರಿ, ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ಮೊಕಾಶಿ, ಅಧಿಕಾರಿಗಳು ಉಪಸ್ಥಿತರಿದ್ದರು.ಶಾಸಕ ಆ‌ರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳವೇಕ‌ರ್ ಶುಭಕೋರಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ