Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾನವತೆಯ ಬೆಳಕು ಬೀರಿದ ಮಹಾಸಂತ ಕನಕದಾಸರು : ಪ್ರಾ. ಡಾ. ಎಸ್. ಎಸ್. ತೇರದಾಳ

 

ಬೆಳಗಾವಿ :
ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅವರು ಸಂತ ಕನಕದಾಸರ ಭಾವ ಚಿತ್ರಕ್ಕೆ ಪುಷ್ಪನಮನ ಮಾಡಿ ಮಾತನಾಡಿದರು. ಕೀರ್ತನಾ ಸಾಹಿತ್ಯದ ಅಶ್ವಿನಿ ದೇವತೆಯಾಗಿರುವ ಕನಕದಾಸರು ದಿವ್ಯವಾದ ಕೀರ್ತನೆಗಳು ಮತ್ತು ಅನುಪಮವಾದ ಸಾಹಿತ್ಯ ಕೃತಿಗಳನ್ನು ರಚಿಸುವುದರ ಮೂಲಕ ಸಾಹಿತ್ಯಲೋಕದಲ್ಲಿ ಇತರ ದಾಸರಿಗಿಂತ ವಿಭಿನ್ನವಾದರು. ತಮ್ಮ ಬರವಣಿಗೆಯಲ್ಲಿ ದೀನ-ದಲಿತ-ನಿರ್ಗತಿಕರ, ಶೋಷಿತರ ಧ್ವನಿಯನ್ನೇ ಸ್ಥಾಯಿಯಾಗಿ ಇಟ್ಟುಕೊಂಡರು.
ಸಮಸಮಾಜ ನಿರ್ಮಾಣಕ್ಕಾಗಿ, ಅನಾಥ ಪ್ರಜ್ಞೆಯಲ್ಲಿ ಬದುಕುತ್ತಿರುವ, ನಿರ್ಲಕ್ಷಿತ ಸಮುದಾಯದವರ ಬದುಕಿನಲ್ಲಿ ಬೆಳಕನ್ನು ತರಲು ತಮ್ಮ ಜೀವನವನ್ನು ಮುಡಿಪಿಟ್ಟರು. ತನ್ನ ಬದುಕಿನ ಪಯಣವೇ ಮಾದರಿಯಾಗುವಂತೆ ಅವರೆಲ್ಲರಿಗೂ ಬದುಕಿನಲ್ಲಿ ಆಶಾಕಿರಣವನ್ನು ತುಂಬಿ ಆತ್ಮಾಭಿಮಾನದಿಂದ ಬದುಕುವಂತೆ ಮಾಡಿದರು. ಸಮಾಜದಲ್ಲಿ ಬೇರು ಬಿಟ್ಟಿರುವ ಅಸಮಾನತೆ, ಕಂದಾಚಾರಗಳ, ಅನಾಚಾರಗಳ ವಿರುದ್ಧ ಸಮರ ಸಾರಿದರು. ಜನಸಾಮಾನ್ಯರಲ್ಲಿ ಅವುಗಳ ಕುರಿತು ಅರಿವು ಮೂಡಿಸಿದರು. ಕನಕದಾಸರ ವಿಚಾರಧಾರೆಗಳು ಮನುಕುಲದ ಉನ್ನತಿಗೆ ಕಾರಣವಾಗಿವೆ. ಮಾನವತೆಯ ಬೆಳಕು ಬೀರಿದ ಮಹಾಸಂತ ಕನಕದಾಸರು ಎಂದರು.

ಡಾ. ನಾರಾಯಣ ನಾಯ್ಕ ಅವರು ಕನಕದಾಸರು ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ನೀಡಿದ ಕೊಡುಗೆಗಳು ಮತ್ತು ತಿಮ್ಮಪ್ಪನಿಂದ ಕನಕನಾಗುವ ತನಕ ನಡೆಸಿದ ಹೋರಾಟದ ಪಲ್ಲಟಗಳನ್ನು ಸ್ಮರಿಸಿದರು.
ಡಾ. ಅರ್ಜುನ ಜಂಬಗಿ ನಿರೂಪಿಸಿ, ವಂದಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು,
ಮಹಾವಿದ್ಯಾಲಯದಲ್ಲಿ ಪದವಿ ವಿಷಯಗಳ ಮೌಲ್ಯಮಾಪನ ಮಾಡುತ್ತಿರುವ ರಾಚವಿಯ ಸಂಯೋಜಿತ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ