Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

17 ರಿಂದ ಬಡೇಕೊಳ್ಳಮಠದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ

ಬಡೆಕೊಳ್ಳಮಠ:
ಬೆಳಗಾವಿ ತಾಲೂಕಿನ ಶ್ರೀ ಪಾವನಕ್ಷೇತ್ರ ಬಡೇಕೊಳ್ಳಮಠದ ಪವಾಡ ಪುರುಷ ಶ್ರೀ ನಾಗೇಂದ್ರ ಮಹಾಸ್ವಾಮಿಗಳವರ ಮಹಾಶಿವರಾತ್ರಿಯ ಜಾತ್ರೆಯು ಪ್ರತಿ ವರ್ಷದಂತೆ ಐದು ದಿನಗಳ ಕಾರ್ಯಕ್ರಮಗಳೊಂದಿಗೆ ಶ್ರದ್ದೆ ಮತ್ತು ಸಡಗರದಿಂದ ಜರಗಲಿದೆ. ಈ ಜಾತ್ರಾ ನಿಮಿತ್ತ ಕಾರ್ಯಕ್ರಮಗಳನ್ನು ಆಯೋಜನೆಗೊಂಡಿದ್ದು, ಭಕ್ತ ವೃಂದವು ಆಗಮಿಸಿ ಪೂಜ್ಯ ಅಜ್ಜನವರ ಆರ್ಶಿವಾದ ಅನುಗ್ರಹಕ್ಕೆ ಪಾತ್ರರಾಗಿ ಕೃತಾರ್ಥರಾಗಬೇಕು.
ಶುಕ್ರವಾರ ದಿನಾಂಕ 17 ರಂದು ಸಾಯಂಕಾಲ 5 ಗಂಟೆಗೆ ಶ್ರೀ ಶಿವಯೋಗಿ ನಾಗೇಂದ್ರ ಮಹಾಸ್ವಾಮಿಗಳ ಸಂತಿಬಸ್ತವಾಡದ ಶ್ರೀ ಬಸವೇಶ್ವರ ದೇವಸ್ಥಾನದಿಂದ ಬರುವ ಧ್ವಜ, ಶಿಂದೋಳ್ಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಬಸವಗುರು ಸೇವಾ ಭಜನಾ ಸಂಘದ ನೇತ್ರತ್ವದಲ್ಲಿ ತರುವ ದ್ವಜ ಸೂತ್ರಗಳಿಂದ ಶ್ರೀ ಸದ್ಗುರು ನಾಗೇಂದ್ರ ಶಿವಯೋಗಿಗಳವರ ಮಠದ ಪರಂಪರೆಯ ಧರ್ಮ ಲಾಂಛನ ದ್ಯೋತಕ ವಾದ ಧ್ವಜಾರೋಹಣದೊಂದಿಗೆ ಜಾತ್ರೆಯ ಪ್ರಾರಂಭ.
ಶನಿವಾರ ದಿ. 18 ರಂದು ವಿಶ್ವಶಾಂತಿಗಾಗಿ ಶ್ರೀಮಠದಲ್ಲಿ ಮಹಾರುದ್ರಾಭಿಷೇಕ ನಂತರ ಮುಂ. 9.30 ಗಂಟೆಗೆ ಶ್ರೀ ಕಲ್ಲಯ್ಯ ಶಾಸ್ತ್ರಿ ಉದೋಶಿಮಠ ಹಿರೇ ಬಾಗೇವಾಡಿ ಹಾಗೂ ಸಂಗಡಿಗರು ಇವರ ನೇತ್ರತ್ವದಲ್ಲಿ ಹೋಮ. ಸಂಜೆ 4 ಗಂಟೆಗೆ ಪರಮಪೂಜ್ಯ ಶ್ರೀ ನಾಗೇಂದ್ರ ಸ್ವಾಮಿಗಳ ಪರಮ ಭಕ್ತರಾದ ರುದ್ರಗೌಡ ಪಾಟೀಲ, ಮಾಸ್ತಮರಡಿ ಇವರಿಂದ ನಿರ್ಮಿತವಾದ ಶ್ರೀ ನಾಗೇಂದ್ರ ಶಿವಾಲಯದಿಂದ ಪಲ್ಲಕ್ಕಿ, ಛತ್ರ ಚಾಮರ ಅಪ್ತಾಗಿರಿ, ಬೆತ್ತ ಮತ್ತು ಅಂಬಲಿ ಗುಗ್ಗರಿಗಳಿಂದೊಡಗೂಡಿ ಭಕ್ತ ಸಮೂಹದೊಂದಿಗೆ ಆಗಮಿಸಿದ ಹಾಗೂ ತಾರಿಹಾಳ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಿಂದ ಆಗಮಿಸಿದ ಪಲ್ಲಕ್ಕಿಗಳನ್ನು ಶ್ರೀಗಳು ಹಾಗೂ ಮಠದ ಭಕ್ತರಿಂದ ವಾದ್ಯ ಮೇಳದೊಂದಿಗೆ ಬರಮಾಡಿಕೊಳ್ಳುವುದು. ಮಾಸ್ತಮರ್ಡಿ ಹರಿಭಜನಾ ಮಂಡಳಿ ನೇತ್ರತ್ವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಹರಿಭಜನಾ ಮಂಡಳಿಗಳು ಪಾಲ್ಗೊಳ್ಳುವವು.
8-15 ಗಂಟೆಯಿಂದ ಶ್ರೀ ಗಿರಿಮಲ್ಲ ಮಹಾರಾಜ ಹಾಗೂ ಮಂಡಳಿ, ಸಾಂಬ್ರಾ ಇವರಿಂದ ಕೀರ್ತನೆ. ಮತ್ತು ಶ್ರೀ ಸಿದ್ದೇಶ್ವರ ಭಜನಾ ಸಂಘ ಹಿರೇಬಾಗೇವಾಡಿ ಇವರಿಂದ ಭಜನೆ.
ರವಿವಾರ ದಿನಾಂಕ: 19 ರಂದು ಬೆಳಿಗ್ಗೆ 8 ಗಂಟೆಯಿಂದ ಮಹಾರುದ್ರಾಭಿಷೇಕ, 11.30 ರಿಂದ ಶ್ರೀಗಳವರ ಪಾದಪೂಜೆ, ಮಧ್ಯಾಹ್ನ 1 ಗಂಟೆಗೆ ರಥೋತ್ಸವ ಮ. 2-30 ಕ್ಕೆ ಮಹಾಪ್ರಸಾದ ಸಂಜೆ 4 ಗಂಟೆಗೆ ಶ್ರೀ ಬಲಭೀಮ ಯುವಕ ಮಂಡಳ, ಯರಮಳ್ಳಿ ಇವರಿಂದ ಸೈಕಲ್ ವೃತ್ತಾಕಾರ ಚಲನೆಯ ಕಾರ್ಯಕ್ರಮಗಳು. ಸಾ. 6-30 ಗಂಟೆಗೆ ಹಿರೇಬಾಗೇವಾಡಿ ಶಾಲಾ ಬಾಲಕ-ಬಾಲಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು. ರಾತ್ರಿ 10-30 ಘಂಟೆಗೆ ಆನಂದ ಸೌಂಡ್ಸ್ ಹಿರೇಬಾಗೇವಾಡಿ ಇವರಿಂದ ರಸಮಂಜರಿ ಕಾರ್ಯಕ್ರಮಗಳು ಜರುಗಲಿವೆ.
ಸೋಮವಾರ 20 ರಂದು ಮುಂ.8 ರಿಂದ 2 ರವರೆಗೆ ವಿವಿಧ ಊರುಗಳ ಭಜನಾ ಮಂಡಳಿಗಳಿಂದ ಭಜನೆ ಹಾಗೂ ಕೀರ್ತನೆ ಕಾರ್ಯಕ್ರಮ, ಮಧ್ಯಾಹ್ನ 3 ಗಂಟೆಗೆ ಹಿರೇಬಾಗೇವಾಡಿ ಭಕ್ತಾದಿಗಳ ನೇತ್ರತ್ವದಲ್ಲಿ ಬಯಲು ಕುಸ್ತಿಗಳು, ರಾತ್ರಿ 10.30 ಕ್ಕೆ ಆನಂದ ಸೌಂಡ್ಸ್ ಹಿರೇಬಾಗೇವಾಡಿ ಇವರಿಂದ ನಗೆಹಬ್ಬ ಕಾರ್ಯಕ್ರಮ ಜರುಗಲಿವೆ.

ಮಂಗಳವಾರ 21 ರಂದು ಮದ್ಯಾಹ್ನ 2 ಗಂಟೆಗೆ ಪಲ್ಲಕ್ಕಿ ಬಿಳ್ಕೊಡುವ ಸಮಾರಂಭ, ಸಂಜೆ 4 ಗಂಟೆಗೆ ಧ್ವಜಾರೋಹಣದೊಂದಿಗೆ ಜಾತ್ರೆಯ ಮುಕ್ತಾಯವಾಗುತ್ತದೆ. ಈ ಜಾತ್ರೆಗೆ ಸದ್ಭಕ್ತರು ಆಗಮಿಸಿ ದರ್ಶನ ಆಶೀರ್ವಾದ ಪಡೆದುಕೊಂಡು ಪುನೀತರಾಗಬೇಕೆಂದು ಶ್ರೀ ಪರಮಪೂಜ್ಯ ನಾಗಯ್ಯ ಸ್ವಾಮಿಗಳು ಪಾವನಕ್ಷೇತ್ರ ಬಡೇಕೊಳ್ಳಮಠ, ತಾರಿಹಾಳ ತಾ:ಜಿ: ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9538110115
ಸಂಪರ್ಕಿಸಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ