Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಸವ ಕಾಲನಿಯಲ್ಲಿ ಮಹಾಶಿವರಾತ್ರಿ ಮಹೋತ್ಸವ ಕಾರ್ಯಕ್ರಮ

 

ಬೆಳಗಾವಿ :
ಬೆಳಗಾವಿ ಮಹಾನಗರದ ಬಸವ ಕಾಲನಿ ಬಸವಣ್ಣ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ದಿನಾಂಕ : ಶನಿವಾರ ೧೮-೨-೨೦೨೩ ಮತ್ತು ರವಿವಾರ ೧೯-೨-೨೦೨೩ ರಂದು ಜರುಗುವುದು. ದಿನಾಂಕ ೧೮ ರಂದು ಬೆಳಿಗ್ಗೆ ೭ ಗಂಟೆಗೆ ಶ್ರೀ ವಿಜಯ ಶಾಸ್ತಿçಗಳು ಹಾಗೂ ಶ್ರೀ ಶಂಕರಯ್ಯಾ ಸೀಮಿಮಠ ಇವರಿಂದ ಮಹಾರುದ್ರಾಭಿಷೇಕ ಜರುಗುವುದು, ಪ್ರವೀಣ ಪಾನಶೆಟ್ಟಿ ದಂಪತಿಗಳು ಈ ಕಾರ್ಯಕ್ರಮ ನೆರವೇರಿಸಿಕೊಡುವರು. ಸಾಯಂಕಾಲ ೫ ಗಂಟೆಗೆ ಬಸವ ಕಾಲನಿ ಮಹಿಳೆಯರಿಂದ ಲಲಿತ ಸಹಸ್ರನಾಮಾವಳಿ ಪಠಣ ಜರುಗುವುದು. ಸಾಯಂಕಾಲ ೬ ಗಂಟೆಗೆ ಶ್ರೀ ರಾಮಚಂದ್ರ ಏಡಕೆ ಅವರಿಂದ ಉಪನ್ಯಾಸ ಕಾರ್ಯಕ್ರಮ ಜರುಗುವುದು. ನಂತರ ಗುರುಕಾರುಣ್ಯ ನಾಟ್ಯಾಲಯದ ಪ್ರತೀಕ್ಷಾ ಹಿರೇಮಠ ಮತ್ತು ಸಂಗಡಿಗರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವವು. ಸಾವಿತ್ರಿ ಕಗ್ಗಣಗಿಮಠ ಅವರ ನೇತೃತ್ವದಲ್ಲಿ ಬಸವ ಕಾಲನಿ ಮಹಿಳೆಯರಿಂದ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯುವುದು. ರಾತ್ರಿ ೧೦ ಗಂಟೆಗೆ ಶ್ರೀ ಬಸವೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗುವುದು.
ರವಿವಾರ ದಿ: ೧೯-೨-೨೦೨೩ರಂದು ಬೆಳಿಗ್ಗೆ ಶ್ರೀ ಸುರೇಶ ಬಡೆಪ್ಪನವರ ಅವರಿಂದ ರುದ್ರಾಭಿಷೇಕ ಆಗುವುದು. ನಂತರ ೮-೩೦ಕ್ಕೆ ಬಸವಣ್ಣನವರ ಭಾವಚಿತ್ರದೊಂದಿಗೆ ಬಸವ ಕಾಲನಿಯಲ್ಲಿ ಪಲ್ಲಕ್ಕಿ ಉತ್ಸವ ಜರುಗುವುದು. ೧೧ ಗಂಟೆಗೆ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮಿಗಳು, ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮಿಗಳವರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗುವುದು. ಶಾಸಕರಾದ ಅನಿಲ ಬೆನಕೆ, ಸತೀಶ ಜಾರಕಿಹೊಳಿ, ಶ್ರೀಮತಿ ಲಕ್ಷಿö್ಮ ಹೆಬ್ಬಾಳಕರ್ ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ಡಾ. ರವಿ ಪಾಟೀಲ, ಕಿರಣ ಜಾಧವ, ಮುರುಘೇಂದ್ರಗೌಡ ಪಾಟೀಲ, ಶ್ರೀಮತಿ ರೂಪಾ ಸಂತೋಷ ಚಿಕ್ಕಲದಿನ್ನಿ, ಶ್ರೀಮತಿ ರೇಖಾ ಮೋಹನ ಹೂಗಾರ, ಶಿವಾನಂದ ಡಂಬಳ, ಯಲ್ಲೋಜಿ ಪಾಟೀಲ ಅವರು ಅತಿಥಿಗಳಾಗಿ ಆಗಮಿಸುವರು. ಮಧ್ಯಾಹ್ನ ೧ ಗಂಟೆಗೆ ಮಹಾಪ್ರಸಾದ ಜರುಗುವುದು. ಮೇಲಿನ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪುನೀತರಾಗಬೇಕೆಂದು ಬಸವಣ್ಣ ದೇವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ಆಯ್. ಗಾಣಿಗೇರ ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ