Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮನ್‌ ಕೀ ಬಾತ್‌ಗೆ ದಶಕದ ಸಂಭ್ರಮ

ನವದೆಹಲಿ: ಸಮಾಜದ ವಿವಿಧ ವಿಷಯಗಳ ಬಗ್ಗೆ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಜನರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ಗೆ ಇದೀಗ ದಶಕದ ಸಂಭ್ರಮ.

2014ರಲ್ಲಿ ಪ್ರಧಾನಿ ಮೋದಿ ಕೇಂದ್ರದಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ ವೇಳೆ ವಿಜಯದಶಮಿ ಅಂಗವಾಗಿ ಅ.3ರಂದು ಮೊದಲ ಮನ್‌ ಕೀ ಬಾತ್‌ನಲ್ಲಿ ಮಾತನಾಡಿದ್ದರು. ಇನ್ನೊಂದು ವಾರದಲ್ಲಿ (ಅ.3) ಮೊದಲ ಕಾರ್ಯಕ್ರಮಕ್ಕೆ 10 ವರ್ಷ ತುಂಬಲಿದೆ. ಇದುವರೆಗೂ ಒಟ್ಟು 114 ಕಾರ್ಯಕ್ರಮಗಳು ಪ್ರಸಾರವಾಗಿವೆ.

ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಸಾರವಾದ ಸೆಪ್ಟೆಂಬರ್‌ ಮಾಸಿಕದ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನಕರಾತ್ಮಕ ಸಂಭಾಷಣೆಗಳು ಮಾತ್ರ ಜನರ ಗಮನ ಸೆಳೆಯುತ್ತದೆ ಎನ್ನುವ ಮಾತನ್ನು ಮನ್‌ ಕೀ ಬಾತ್‌ ಸುಳ್ಳು ಮಾಡಿದೆ. ಈ ಸಂಚಿಕೆ ನನ್ನನ್ನು ಭಾವುಕವಾಗಿಸಿದೆ. ಹಳೆಯ ನೆನಪುಗಳ ಮಹಾಪೂರವೇ ಹರಿದು ಬರುತ್ತಿದೆ. ಮನ್‌ ಕೀ ಬಾತ್‌ 10 ವರ್ಷಗಳನ್ನು ಪೂರೈಸಿದೆ’ ಎಂದಿದ್ದಾರೆ.

‘ದಶಕದ ಹಿಂದೆ ಅಕ್ಟೋಬರ್‌ 3 ವಿಜಯದಶಮಿಯಂದು ಮನ್‌ ಕೀ ಬಾತ್‌ ಆರಂಭವಾಗಿತ್ತು. ಈ ಪಯಣವನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ. ಮಸಾಲೆ ಮಾತುಗಳು ನಕರಾತ್ಮಕ ಸಂಭಾಷಣೆಗಳು ಮಾತ್ರ ಜನರ ಗಮನ ಸೆಳೆಯುತ್ತದೆ ಎನ್ನುವ ಮಾತನ್ನು ಸುಳ್ಳಾಗಿಸಿ, ಜನರು ಸಕರಾತ್ಮಕ ಸಂದೇಶ, ಸ್ಫೂರ್ತಿದಾಯಕ ಮಾತುಗಳಿಗೆ ಎಷ್ಟು ಹಾತೊರೆಯುತ್ತಾರೆ ಎನ್ನುವುದು ಮನ್ ಕೀ ಬಾತ್‌ ಮೂಲಕ ಸಾಬೀತಾಗಿದೆ ಈ ಕಾರ್ಯಕ್ರಮ ದೇಶದ ಒಗ್ಗಟ್ಟಿನ ಬಲದ ಮತ್ತು ಭಾರತದ ಸ್ಪೂರ್ತಿಯ ಪ್ರತೀಕವಾಗಿ ಹೊರಹೊಮ್ಮಿದೆ.. ಈ ಕಾರ್ಯಕ್ರಮವನ್ನು 12 ವಿದೇಶಿ ಮತ್ತು 22 ಭಾರತೀಯ ಭಾಷೆಗಳಲ್ಲಿ ಆಲಿಸಬಹುದು’ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ