Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೈನ ಮುನಿ ಭೀಕರ ಹತ್ಯೆ ಖಂಡಿಸಿ ಬೃಹತ್ ಮೌನ ಮೆರವಣಿಗೆ

 

ಬೆಳಗಾವಿ :
ಚಿಕ್ಕೋಡಿ ತಾಲೂಕು ಹಿರೇಕೋಡಿ ನಂದಿ ಪರ್ವತ ಜೈನಮುನಿ ಕಾಮ ಕುಮಾರ ನಂದಿ ಮಹಾರಾಜರನ್ನು ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಖಂಡಿಸಿ ಸೋಮವಾರ ಚಿಕ್ಕೋಡಿಯಲ್ಲಿ ಜೈನ ಬಾಂಧವರು ಬೃಹತ್ ಪ್ರಮಾಣದಲ್ಲಿ ಸೇರಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ನಿಪ್ಪಾಣಿ, ಅಥಣಿ, ಕಾಗವಾಡ, ಚಿಕ್ಕೋಡಿ, ಹುಕ್ಕೇರಿ, ಕುಡಚಿ, ರಾಯಬಾಗ ಹಾಗೂ ನೆರೆಯ ಮಹಾರಾಷ್ಟ್ರದ ಜೈನ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜೈನ ಮುನಿಗಳ ಸಾವಿಗೆ ಮರುಕ ವ್ಯಕ್ತಪಡಿಸಿದರು.

ಚಿಕ್ಕೋಡಿಯ ಆರ್ .ಡಿ. ಕಾಲೇಜ್ ಮೈದಾನದಲ್ಲಿ ಸೇರಿದ ಜನ ಬಸ್ ನಿಲ್ದಾಣ, ಮಹಾವೀರ ಸರ್ಕಲ್ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ವರೂರಿನ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಹತ್ಯೆ ಮಾಡಿರುವ ಘಟನೆ ಖಂಡನೀಯ. ಇದೊಂದು ಹೇಯ ಕೃತ್ಯ. ಜೈನ ಮುನಿಗಳಿಗೆ ಮಾತ್ರವಲ್ಲ. ಸಮಾಜದ ಇತರ ಸ್ವಾಮಿಗಳ ಮೇಲೂ ಇಂತಹ ಘಟನೆ ಮರುಕಳಿಸಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.



ನಾಂದಣಿ ಜಿನಸೇನಾ ಭಟ್ಟಾಚಾರ್ಯ ಸ್ವಾಮೀಜಿ, ಕೊಲ್ಲಾಪುರದ ಲಕ್ಷ್ಮಿ ಸೇನಾ ಭಟ್ಟಾಚಾರ್ಯ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ವೀರ ಕುಮಾರ ಪಾಟೀಲ, ಮೋಹನ ಶಾಹ, ವರ್ಧಮಾನ ಸದಲಗೆ, ಸಂಜಯ ಪಾಟೀಲ, ಉತ್ತಮ ಪಾಟೀಲ ಸೇರಿದಂತೆ ಸಾವಿರಾರು ಜೈನ ಬಾಂಧವರು ಭಾಗವಹಿಸಿದ್ದರು.

ಬೈಲಹೊಂಗಲ: ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಬೈಲಹೊಂಗಲ ತಾಲ್ಲೂಕು ಜೈನ ಸಮಾಜ ಬಾಂಧವರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಿದರು.

ಪಟ್ಟಣದ ಇಂಚಲ ಕ್ರಾಸ್ ರೈತ ಭವನದನಲ್ಲಿ ಸೇರಿದ ಸಮಾಜದವರು ಬಸ್ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿದರು. ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರ ಹಾಕಿದರು. ಮುನಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಅವರು ಅಲ್ಪಾವಧಿಯಲ್ಲೇ ಆಶ್ರಮವನ್ನು ಉತ್ತಮವಾಗಿ ಬೆಳೆಸಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಸುವ ಮಹದಾಸೆ ಹೊಂದಿದ್ದರು. ಅಹಿಂಸಾ ಮಾರ್ಗದಲ್ಲಿ ನಡೆಯುವ ಜೈನ ಸಮುದಾಯದ ಮುನಿಗಳನ್ನು ಕ್ರೂರವಾಗಿ ಕೊಲೆ ಗೈದಿರುವುದು ಖಂಡನೀಯ. ಮುಂದೆ ಇಂತ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರವಹಿಸಬೇಕು. ಹತ್ಯೆ ಕೋರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಜೈನ ಸಮಾಜ ತಾಲ್ಲೂಕು ಘಟಕ ಅಧ್ಯಕ್ಷ ಅನುಪ್ಪ ಇಂಚಲ, ಉಪಾಧ್ಯಕ್ಷ ಡಾ.ಸುರೇಂದ್ರ ಕಲಘಟಗಿ, ಉದಯ ಬೆಳಗಾವಿ, ಧನರಾಜ ಭಂಡಾರಿ, ಶಾಲಾಚಂದ ಗೋಗಡ, ಬಸವರಾಜ ದೋತರದ, ಸಂತೋಷ ಭಾಂವಿ, ಅನಿಲ ಮ್ಯಾಕಲಮರ್ಡಿ, ಸುದರ್ಶನ ಉಪಾಧ್ಯೆ, ಜಿನಪ್ಪ ಮಲ್ಲಾಡಿ, ದೇವಾಲಾಪೂರ ಗ್ರಾಮದ ಶ್ರಾವಕ, ಶ್ರಾವಕಿಯರು, ಮ್ಯಾಕಲಮರ್ಡಿ, ಬುಡರಕಟ್ಟಿ, ಹಣಬರಟ್ಟಿ, ಇಂಚಲ, ಬಡ್ಲಿ, ಹಣ್ಣಿಕೇರಿ, ಅಮಟೂರ, ಪಟ್ಟಿಹಾಳ ಕೆ.ಬಿ., ಅಸುಂಡಿ, ಕಲಬಾಂವಿ, ತಿಗಡಿ, ಸಂಪಗಾಂವ, ಶ್ರೀಮಹಾವೀರ ಜೈನ ಅಲ್ಪ ಸಂಖ್ಯಾತರ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ