Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ : ಸಚಿವ ಡಾ. ಎಂ. ಸಿ. ಸುಧಾಕರ ಭರವಸೆ

 

ಬೆಳಗಾವಿ :
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,462 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ಮುಂದಿನ ದಿನಗಳಲ್ಲಿ ಅವರ ಬೇಡಿಕೆಗಳನ್ನ ಹಂತ ಹಂತವಾಗಿ ಈಡೇರಿಸಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಭರವಸೆ ನೀಡಿದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಅಭಿವೃದ್ಧಿಪಡಿಸುವುದು. ವಿಶ್ವವಿದ್ಯಾಲಯ ಅಧೀನ ಮಹಾವಿದ್ಯಾಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದು. ಹೊಸ ಶಿಕ್ಷಣ ನೀತಿಯನ್ನ ಹಲವು ಮಾರ್ಪಾಡುಗಳೊಂದಿಗೆ ಬದಲಾಯಿಸುವ ಯೋಚನೆ ಇದೆ ಎಂದು ತಿಳಿಸಿದರು.

ಅದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು, ಸಾರ್ವಜನಿಕರು, ಸಾಮಾಜಿಕ ಚಿಂತರುಕರು ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದ್ದು ಅವರ ಅಭಿಪ್ರಾಯಗಳನ್ನು ಆದರಿಸಿ ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು ಎಂದರು.

ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಪ್ರಣಾಳಿಕೆಯಲ್ಲಿರುವ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತ ಗೌಡ ಕಲ್ಮನಿ ಅವರು ಉನ್ನತ ಶಿಕ್ಷಣ ಸಚಿವರಿಗೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕರಿಗೆ ಸನ್ಮಾನ ಮಾಡಿದರು.

ಅತಿಥಿ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಫೀಟರ್, ಈರಣ್ಣ ಹಳ್ಳಿಕೇರಿ, ಬೆಳಗಾವಿ ಜಿಲ್ಲಾ ಪ್ರಮುಖರಾದ ಡಾ. ಅಡಿವೆಪ್ಪ ಇಟಗಿ, ಗಜಾನನ ಸಂಗೋಟಿ, ನೀಲಕಂಠ ಭೂಮಣ್ಣವರ, ಇರ್ಫಾನ್ ಸಿಲ್ಲೆದಾರ್ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ