Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂತ್ರಿ ಹೆಬ್ಬಾಳಕರ ಮಗನ ಕಾರು ಚಾಲಕನಿಗೆ ಚಾಕು ಇರಿತ..!

ಮಂತ್ರಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರ್ ಚಾಲಕನಿಗೆ ಚಾಕು ಇರಿತ..!

ಕುಚುಕುಗಳ ಮಧ್ಯೆ ಬಿರುಕು ಬಿಟ್ಟ ಮೈನಿಂಗ್ ಮಾಫಿಯಾ ದಂಧೆ..?

ಹಲ್ಲೆ ಮಾಡಿದವರು ಹೆಬ್ಬಾಳ್ಕರ್ ಕ್ಷೇತ್ರದವರೇ..?

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ
ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರನ ಕಾರು ಚಾಲಕನ ಮೇಲೆ ಇಬ್ಬರು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಇಂದು ಮಂಗಳವಾರ ಮಧ್ಯಾಹ್ನ ನಗರದ ಕ್ಲಬ್ ರಸ್ತೆಯ ಮಹಾವೀರ ಕ್ಯಾಂಟೀನ್ ಬಳಿ ನಡೆದಿದೆ.

ಮೃಣಾಲ್ ಕಾರು ಚಾಲಕ ಬೆಳಗುಂದಿ ಗ್ರಾಮದ ಬಸವಂತ ಗಣಪತ ಕಡೋಲಕರ ಹಲ್ಲೆಗೊಳಗಾದ ವ್ಯಕ್ತಿ. ದುಷ್ಕರ್ಮಿಗಳು ಚಾಕು ಇರಿದ ಕೂಡಲೇ ಗಾಯಾಳು ಬಸವಂತನನ್ನು VOTC ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನಿಗೆ ಚಾಕುವಿನಿಂದ ಎದೆ, ಭುಜ, ತೊಡೆ ಸೇರಿ ನಾಲ್ಕು ಕಡೆ ಹಲ್ಲೆ ಮಾಡಿ ಕೊಲೆ ಪ್ರಯತ್ನ ನಡೆಸಲಾಗಿದೆ.

ಬಲ್ಲ ಮೂಲಗಳ ಪ್ರಕಾರ ಹಲ್ಲೆ ಮಾಡಿದವರು ಹೆಬ್ಬಾಳ್ಕರ್ ಕ್ಷೇತ್ರದ ಬೆಳಗಾವಿ ತಾಲೂಕಿನ ಗೋಜಗಾ ಗ್ರಾಮದವರು ಎಂದು ತಿಳಿದು ಬಂದಿದೆ.

ಹಲ್ಲೆಗೆ ಮೈನಿಂಗ್ ಮಾಫಿಯಾ ಕಾರಣ ಎಂದು ತಿಳಿದು ಬಂದಿದ್ದು, ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಚಾಲಕ ಆತ್ಮೀಯರು ಹಾಗೂ ಸೇರಿಕೊಂಡು ವ್ಯವಹಾರ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ಹಲ್ಲೆಗೆ ಪ್ರಮುಖ ಕಾರಣ ತನಿಖೆ ನಂತರ ತಿಳಿಯಲಿದೆ.

ಕ್ಲಬ್ ರಸ್ತೆಯ ಬಿ. ಶಂಕರಾನಂದ ಅವರ ಮನೆ ಎದುರಿನ ಸ್ಥಳದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು