Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಬೆಂಗಳೂರು: ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.

ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತ ಪ್ರಶ್ನೆಗೆ,
2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.

ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮೀ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ. ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದರು.

ಮಹಾರಾಷ್ಟ್ರ ಸರ್ಕಾರದ ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಸಹಾಯಕರಾಗಿದ್ದಾರೆ. ಅವರಿಗೆ ಅಲ್ಲಿನ ಸರ್ಕಾರ ಸಂಬಳ ನೀಡುತ್ತಿದೆ. ಅವರಲ್ಲೇ ತಪ್ಪು ಇಟ್ಟುಕೊಂಡು ನಮ್ಮ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ಸಚಿವರು ದೂರಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ