Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಸಕ ಶಿವಣ್ಣನವರಿಗೆ ಕೈ ತಪ್ಪಿದ ಸಚಿವ ಸ್ಥಾನ: ಮತದಾರರಿಂದ 'ಗೋವಿಂದ' ಸ್ಟೇಟಸ್‌..!

ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಿದೆ. ಇದೇ ವಿಚಾರವಾಗಿ ಕ್ಷೇತ್ರದ ಕೆಲ ಮತದಾರರು, 'ಸಚಿವ ಸ್ಥಾನ ಗೋವಿಂದ' ಎಂದು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕುರುಬ ಸಮುದಾಯದ ಕೋಟಾದಲ್ಲಿ ಶಿವಣ್ಣನವರ ಬದಲು ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕುರುಬ ಸಮುದಾಯದ ಕೋಟಾದಲ್ಲಿ ಶಿವಣ್ಣನವರ ಬದಲು ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಕ್ಕಿದೆ. ಹೀಗಾಗಿ, ಬಸವರಾಜ ಶಿವಣ್ಣನವರ ಅವರಿಗೆ ಸಚಿವ ಸ್ಥಾನ ನೀಡಿಲ್ಲವೆಂದು ಪಕ್ಷದ ಮುಖಂಡರು ಹೇಳುತ್ತಿದ್ದಾರೆ.

ಕಾಂಗ್ರೆಸ್‌ ಸಚಿವ ಸಂಪುಟದ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಬ್ಯಾಡಗಿಯ ಕೆಲ ಮತದಾರರು, 'ಸಚಿವ ಸ್ಥಾನ ಗೋವಿಂದ' ಸ್ಟೇಟಸ್ ಹಾಕಿಕೊಂಡಿದ್ದಾರೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಕ್ಷೇತ್ರದ ದೇವರಗುಡ್ಡದ ಕೆಲ ಮತದಾರರು, 'ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸದ ಶಾಸಕ ಶಿವಣ್ಣನವರ ಅವರು ಸಚಿವರಾಗಲು ಪ್ರಯತ್ನಿಸುತ್ತಿದ್ದರು. ಕುರುಬ ಸಮುದಾಯದ ಹೆಸರು ಹೇಳಿಕೊಂಡು ಬೆಳೆದರೂ, ಸಮಾಜಕ್ಕೆ ಏನು ಮಾಡಿಲ್ಲ. ಹೀಗಾಗಿ, ಈ ರೀತಿ ಸ್ಟೇಟಸ್ ಹಾಕಿಕೊಂಡಿದ್ದೇವೆ' ಎಂದರು.

ಸಚಿವ ಸ್ಥಾನ ಕೈತಪ್ಪಿದ್ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಿವಣ್ಣನವರ, 'ನನಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು' ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿಯೇ ಮೊಕ್ಕಾಂ ಹೂಡಿರುವ ಶಿವಣ್ಣನವರ, ಸಚಿವ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊನೆ ಕ್ಷಣದಲ್ಲಿ ಗಾಯತ್ರಿಗೆ ಕೈತಪ್ಪಿದ ಮಂತ್ರಿಗಿರಿ!ಬಿಜೆಪಿಗೆ ಬಿಗ್ ಶಾಕ್‌ ; ಉಪಚುನಾವಣೆಯಲ್ಲಿ ಪಕ್ಷದ ಅಧ್ಯಕ್ಷರ ತವರು ಕ್ಷೇತ್ರದಲ್ಲೇ ಬಿಜೆಪಿಗೆ ಸೋಲು ; ಪ್ರಶಾಂತ ಕಿಶೋರಗೆ ಗೆಲುವುಶಾಸಕ ಶಿವಣ್ಣನವರಿಗೆ ಕೈ ತಪ್ಪಿದ ಸಚಿವ ಸ್ಥಾನ: ಮತದಾರರಿಂದ 'ಗೋವಿಂದ' ಸ್ಟೇಟಸ್‌..!ನಕಲಿ ಅಂಕಪಟ್ಟಿ ಸಲ್ಲಿಸಿ ವಿಲೇಜ್ ಅಕೌಂಟೆಂಟ್ ಹುದ್ದೆ ಪಡೆದಿದ್ದ ನಾಲ್ವರಿಗೆ ಬಿಗ್ ಶಾಕ್ ನೀಡಿದ ಬೆಳಗಾವಿ ನ್ಯಾಯಾಲಯಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ ಇಬ್ಬರು ಶಾಸಕರುಜಿ.ಎಸ್ ಪಾಟೀಲ ಸ್ಪೀಕರ್, ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್ಸಚಿವರಾಗುವವರ ಪಟ್ಟಿ ಇಲ್ಲಿದೆ : ಕೊನೆಗೂ ಲಕ್ಷ್ಮಣ ಸವದಿ ಅವರಿಗೆ ಸಚಿವ ಹುದ್ದೆದೇವಸ್ಥಾನದ ಹಿಂಭಾಗದಲ್ಲಿ ಎರಡು ತಿಂಗಳ ಹೆಣ್ಣು ಶಿಶು ಪತ್ತೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ