Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಲಸಿ ಗ್ರಾಮದ ನೀರಿನ ಸಮಸ್ಯೆಗೆ ಸ್ಪಂದಿಸಿದ ಶಾಸಕರು

ಖಾನಾಪುರ : ಖಾನಾಪುರ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಕ್ಷೇತ್ರವಾಗಿರುವ ಹಲಸಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಬುಧವಾರ ಮಹತ್ವದ ಹೆಜ್ಜೆ ಇಡಲಾಗಿದೆ.

ಶಾಸಕ ವಿಠ್ಠಲ ಹಲಗೇಕರ ಅವರ ಆದೇಶದ ಮೇರೆಗೆ ಗ್ರಾಮದಲ್ಲಿ ಹೊಸ ಬೋರ್ ವೆಲ್ ತೋಡುವ ಕಾಮಗಾರಿ ಯಶಸ್ವಿಯಾಗಿ ಆರಂಭಗೊಂಡಿದ್ದು, ಗಂಗಾ ತಾಯಿಯ ಕೃಪೆಯಿಂದ ನೀರು ಲಭ್ಯವಾಗಿರುವುದು ಗ್ರಾಮಸ್ಥರಲ್ಲಿ ಅಪಾರ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ಎದುರಾಗುತ್ತಿದ್ದ ಕುಡಿಯುವ ನೀರಿನ ತೀವ್ರ ಸಮಸ್ಯೆಗೆ ಇದೀಗ ಶಾಶ್ವತ ಪರಿಹಾರ ದೊರಕುವ ವಿಶ್ವಾಸ ವ್ಯಕ್ತವಾಗಿದೆ.

ಹಲಸಿ ಗ್ರಾಮವು ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿದ ಪ್ರದೇಶವಾಗಿದ್ದು, ವರ್ಷಪೂರ್ತಿ ಭಕ್ತರು ಮತ್ತು ಪ್ರವಾಸಿಗರು ಭೇಟಿ ನೀಡುತ್ತಾರೆ. ವಿಶೇಷವಾಗಿ ಬೇಸಿಗೆ ಸಮಯದಲ್ಲಿ ಉಂಟಾಗುತ್ತಿದ್ದ ನೀರಿನ ಕೊರತೆ ಗ್ರಾಮಸ್ಥರಿಗೆ ಮಾತ್ರವಲ್ಲದೆ, ಆಗಮಿಸುವ ಭಕ್ತರಿಗೂ ತೊಂದರೆ ಉಂಟುಮಾಡುತ್ತಿತ್ತು. ಈ ಪರಿಸ್ಥಿತಿಯನ್ನು ಮನಗಂಡ ಶಾಸಕರು ತಕ್ಷಣ ಕ್ರಮ ಕೈಗೊಂಡು ಬೋರ್ ವೆಲ್ ವ್ಯವಸ್ಥೆ ಒದಗಿಸಿರುವುದು ಶ್ಲಾಘನೀಯವಾಗಿದೆ.

ಹಲಸಿ ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಒತ್ತು ನೀಡುತ್ತಿದ್ದು, ರಸ್ತೆ ಅಭಿವೃದ್ಧಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳ ಸುಧಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಮುಖ ಕಾಮಗಾರಿಗಳು ಇದೀಗ ಹಂತಹಂತವಾಗಿ ಕಾರ್ಯರೂಪಕ್ಕೆ ಬರುತ್ತಿರುವುದು ಗ್ರಾಮಸ್ಥರಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ.

ಗ್ರಾಮದ ಅಭಿವೃದ್ಧಿಗೆ ಈ ರೀತಿಯ ಬದ್ಧತೆ ಮುಂದುವರಿದರೆ, ಹಲಸಿ ಗ್ರಾಮವು ಮುಂದಿನ ದಿನಗಳಲ್ಲಿ ಮಾದರಿ ಗ್ರಾಮವಾಗಿ ಹೊರಹೊಮ್ಮುವುದು ಖಚಿತ ಎಂದು ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ