Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಧಕರಿಗೆ ಶಿರಬಾಗಿ ನಮಿಸಿದ ಮೋದಿ

 

ಅಂಕೋಲಾ :
ಬಿಜೆಪಿ ಪ್ರಚಾರಾರ್ಥ ಅಂಕೋಲಾಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಡಕಟ್ಟು ಹಾಲಕ್ಕಿ ಸಮುದಾಯದ ಪದ್ಮಪ್ರಶಸ್ತಿ ಪುರಸ್ಕೃತರಾದ ಸುಕ್ರಿ ಗೌಡ ಮತ್ತು ತುಳಸಿ ಗೌಡ ಅವರನ್ನು ಭೇಟಿಯಾದರು, ನಂತರ ಅವರಿಗೆ ಶಿರಬಾಗಿ ನಮಸ್ಕರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯ ಟೋಲ್ ಗೇಟ್ ಬಳಿಯ ಗೌರಿಕೆರೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜಿಲ್ಲೆಯ ಆರು ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬುಧವಾರ ಬೃಹತ್‌ ಸಮಾವೇಶದಲ್ಲಿ ಚುನಾವಣಾ ಭಾಷಣ ಮಾಡುವ ಮೊದಲು ಪದ್ಮಶ್ರೀ ಪುರಸ್ಕೃತರಾದ ಸಾರಾಯಿ ವಿರೋಧಿ ಹೋರಾಟಗಾರ್ತಿ ಹಾಗೂ ಜನಪದ ಹಾಡುಗಳ ಭಂಡಾರ ಸುಕ್ರಿ ಗೌಡ ಹಾಗೂ ವೃಕ್ಷ ಮಾತೆ ತುಳಸಿ ಗೌಡ ಅವರನ್ನು ಭೇಟಿ ಮಾಡಿದರು. ಉಭಯ ಕುಶಲೋಪರಿ ಮಾತನಾಡಿದ ನಂತರ ಅವರ ನಮಸ್ಕಾರಕ್ಕೆ ಪ್ರತಿಯಾಗಿ ಅವರಿಬ್ಬರಿಗೆ ಶಿರಬಾಗಿ ನಮಸ್ಕರಿಸಿದರು. ಪದ್ಮಪುರಸ್ಕೃತರಿಬ್ಬರು ಮೋದಿಯನ್ನು ಆಶೀರ್ವದಿಸಿದರು.
ನಂತರ ಸಮಾರಂಭದಲ್ಲೂ ಈ ಇಬ್ಬರ ಬಗ್ಗೆ ಪ್ರಸ್ತಾಪ ಮಾಡಿದ ಮೋದಿ, ಬಿಜೆಪಿ ಸರ್ಕಾರ ಅಂಕೋಲೆಯ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ, ಪರಿಸರ ತಜ್ಞೆ ತುಳಸಿ ಗೌಡರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.
ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಮೋದಿ, ನನಗೆ ಯಾರೂ ರಿಮೋಟ್ ಕಂಟ್ರೋಲ್ ಇಲ್ಲ. ನಮ್ಮ ರಿಮೋಟ್ ಕಂಟ್ರೋಲ್ 140 ಕೋಟಿ ಭಾರತೀಯರು, ನನ್ನ ರಿಮೋಟ್ ಕಂಟ್ರೋಲ್ ನೀವೇ. ನಾನು ಹಿಂದಿಯಲ್ಲಿ ಮಾತನಾಡಬಹುದೇ ಎಂದಾಗ ಸಭೆಯಲ್ಲಿ ಜಯಕಾರದ ಮೂಲಕ ಸಮ್ಮತಿಸಲಾಯಿತು.

ರಾಷ್ಟ್ರ ಮೊದಲು, ದೇಶದ ನಾಗರಿಕ ಮೊದಲು ಎನ್ನುವುದು ಬಿಜೆಪಿಯ ಸಂಕಲ್ಪವಾಗಿದೆ. ಕರಪ್ಷನ್ (ಭ್ರಷ್ಟಾಚಾರ) ಫಸ್ಟ್ ಎನ್ನುವುದು ಕಾಂಗ್ರೆಸ್ಸಿನ ಸಂಕಲ್ಪವಾಗಿದೆ. ದೆಹಲಿಯಲ್ಲಿ ಕುಳಿತಿರುವ ಕಾಂಗ್ರೆಸ್ ಕುಟುಂಬವೊಂದು ಅನೇಕ ವರ್ಷಗಳ ಕಾಲ ದೇಶ ಆಡಳಿತ ನಡೆಸಿ ದೇಶವನ್ನು ಲೂಟಿ ಮಾಡಿದೆ ಎಂದು ಹೇಳಿದರು.
ದೇಶದ ವಿಕಾಸದ ಬದಲು ಆ ಕುಟುಂಬ ತಮ್ಮ ವಿಕಾಸಕ್ಕೇ ಒತ್ತು ನೀಡಿತು. ಕಪ್ಪುಹಣದಿಂದಲೇ ತಮ್ಮ ಖಜಾನೆ ತುಂಬಿರಬೇಕು ಎಂದು ಕಾಂಗ್ರೆಸ್ ಕೋಟಿಗಟ್ಟಲೇ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ಕಾಗದ ಪತ್ರಗಳನ್ನು ಸಿದ್ಧಪಡಿಸುವ ವ್ಯವಸ್ಥೆ ಜಾರಿಗೆ ತಂದಿತು ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಕಲಿ ಸೌಲಭ್ಯ ಪಡೆದುಕೊಂಡವರ ಸಂಖ್ಯೆ ಕರ್ನಾಟಕದ ಜನಸಂಖ್ಯೆಗಿಂತ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 4.20 ಲಕ್ಷ ಕೋಟಿ ನಕಲಿ ಪಡಿತರದಾರರಿಗೆ ಪಡಿತರ ನೀಡಲಾಗಿದೆ. 4 ಕೋಟಿ ನಕಲಿ ಹೆಸರಿಗೆ ಗ್ಯಾಸ್ ಸಬ್ಸಿಡಿ ನೀಡಲಾಗಿದೆ. 1 ಕೋಟಿ ನಕಲಿ ಹೆಸರಿಗೆ ಮಹಿಳಾ ಕಲ್ಯಾಣ ಹಣ ನೀಡಲಾಗಿದೆ. 30 ಲಕ್ಷ ನಕಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಒಟ್ಟೂ ಹತ್ತು ಕೋಟಿ ನಕಲಿ ಹೆಸರನ್ನು ಕಾಂಗ್ರೆಸ್ ಸರ್ಕಾರಿ ಕಾಗದ ಪತ್ರಗಳಲ್ಲಿ ಸೇರಿಸಿತು. ವಿಶೇಷವೆಂದರೆ ಹತ್ತು ಕೋಟಿ ನಕಲಿ ಹೆಸರು ಹೊಂದಿದವರ ಜನ್ಮವೇ ಆಗಿರಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಈ ನಕಲಿ ಖಾತೆಗಳ ಮೂಲಕ ಹಣವೆಲ್ಲ ಬುಡದಿಂದ ತುದಿಯವರೆಗೆ ಇರುವ ಕಾಂಗ್ರೆಸ್ ನಾಯಕ ಕಿಸೆಗೆ ಹೋಗುತ್ತಿತ್ತು. ಈ ನಕಲಿ ಹಗರಣವನ್ನು ಬಯಲಿಗೆಳೆದಿದ್ದೇನೆ. ಅದಕ್ಕಾಗಿ ಕಾಂಗ್ರೆಸ್ಸಿನವರು ನನ್ನ ಮೇಲೆ ಮುಗಿಬೀಳುತ್ತಾರೆ. ನನ್ನನ್ನು ನಿಂದಿಸುತ್ತಾರೆ. ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದ ನಕಲಿ ಹೆಸರುಗಳನ್ನು ರದ್ದು ಮಾಡಿ ಬಡವರಿಗೆ ಸೌಕರ್ಯ ಸಿಗುವಂತೆ ಬಿಜೆಪಿ ಸರ್ಕಾರ ಮಾಡಿದೆ. ಹೀಗೆ ಮಾಡುವ ಮೂಲಕ 3.15 ಲಕ್ಷ ಕೋಟಿ ಹಣ ದುಷ್ಟರ ಕೈ ಸೇರುವುದನ್ನು ಬಿಜೆಪಿ ತಡೆದಿದೆ ಎಂದು ಅವರು ಪ್ರತಿಪಾದಿಸಿದರು.
ಬಿಜೆಪಿ ಸರ್ಕಾರ ಬಡವರ ಭಾವನೆಯನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದೆ. ಬಡವನ ಜೀವನ ನಿರಾಯಾಸವಾಗಿ ನಡೆಯಲಿದೆ. ಅವರಿಗೆ ಹೊಸ ಅವಕಾಶ ಸಿಗಲಿ ಎನ್ನುವುದು ನಮ್ಮ ಧೈರ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀನಿವಾಸ ಪೂಜಾರಿ, ಶಿವರಾಮ ಹೆಬ್ಬಾರ್, ರೂಪಾಲಿ ನಾಯ್ಕ, ದಿನಕರ ಶೆಟ್ಟಿ, ಸುನಿಲ್ ನಾಯ್ಕ, ಸುನಿಲ ಹೆಗಡೆ, ವಿಧಾನ ಪರಿಷತ್‌ ಸದಸ್ಯರಾದ ಗಣಪತಿ ಉಳ್ವೇಕರ, ಶಾಂತಾರಾಮ್ ಸಿದ್ದಿ ಮೊದಲಾದವರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ