Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇವರ ಮತ್ತು ಭಕ್ತನ ನಡುವಿನ ನಾದ ಸೇತುವೆ ಕಂಸಾಳೆ: ಪ್ರೊ. ಎಸ್ ಸಿ ಪಾಟೀಲ

Advertisement
ಬೆಳಗಾವಿ : ಇದು ಭಕ್ತಿ, ಸೌಂದರ್ಯ ಪ್ರಧಾನವಾದ ಕಲೆ. ದೇವರ ಮತ್ತು ಭಕ್ತನ ನಡುವಿನ ನಾದ ಸೇತುವೆ ಕಂಸಾಳೆ ಎಂದು ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅಭಿಪ್ರಾಯಪಟ್ಟರು.

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯವು ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯ ನಿಮಿತ್ತ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂಸಾಳೆ ಗಾಯನ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕಂಸಾಳೆ ಗಾಯನವು ನಮ್ಮ ನೆಲದ ಸೊಬಗು. ಅದು ಜಾನಪದ ಸಂಪತ್ತು. ನಾಡಿನ ಪರಂಪರೆ, ಇತಿಹಾಸ , ಸಂಸ್ಕೃತಿಯ ಸತ್ವ ಎಲ್ಲವೂ ಜಾನಪದದಲ್ಲಿ ಹುದುಗಿದೆ. ಸಾವಿರಾರು ವರ್ಷಗಳಿಂದ ನಮ್ಮ ಜನಜೀವನವನ್ನು ರಸಪೂರ್ಣವೂ, ಜೀವಂತವೂ ಆಗಿ ಉಳಿಸಿಕೊಂಡು ಬಂದಿದೆ ಈ ಕಲೆ. ಈ ಕಲೆಯು ಶ್ರೋತೃಗಳನ್ನು ಭಕ್ತಿ ಪರಾಕಾಷ್ಠೆಗೆ ಒಯ್ಯುತ್ತದೆ. ಇಂತಹ ಅಮೋಘವಾದ ಕಲೆಯನ್ನು ಜಾಗತೀಕರಣೋತ್ತರ ಸಂದರ್ಭದಲ್ಲಿ ಅದನ್ನು ಆರಾಧಿಸಿ, ಆಸ್ವಾದಿಸಿ ಅದರ ಪರಂಪರೆಯನ್ನು ನಾವೆಲ್ಲ ಉಳಿಸಬೇಕು ಎಂದರು.

ನಾಡಿನ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಒಂಬತ್ತು ಜನರ ತಂಡವು ವಿಶೇಷವಾದ ಪ್ರದರ್ಶನ ನೀಡಿತು. ಮಲೆಮಾದೇಶ್ವರ ಚಾರಿತ್ರಿಕ ಅಂಶಗಳನ್ನು ತಮ್ಮ ಹಾಡುಗಳಲ್ಲಿ ತಂದು ಹಾಡಿದ ಸಂದರ್ಭದಲ್ಲಿ ಪ್ರೇಕ್ಷಕರು ಮಂತ್ರ ಮುಗ್ಧರಾದರು. ಮಲೆಮಾದೇಶ್ವರ ಜೀವಂತಿಕೆಯನ್ನು ಅವರ ಹಾಡುಗಳಲ್ಲಿ ಇತ್ತು. ಸಂಗೀತ, ಸಾಹಿತ್ಯ, ನೃತ್ಯಗಳಿಂದ ನೆರೆದವರನ್ನು ರಂಜಿಸಿದರು.
ಉಪಪ್ರಾಚಾರ್ಯ ಅರ್ಜುನ ಜಂಬಗಿ ಸ್ವಾಗತಿಸಿದರು. ಉಪನ್ಯಾಸಕಿ ಲಾವಣ್ಯ ಗುಂಜಾಳ ನಿರೂಪಿಸಿ, ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ