Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೊಲೀಸ್ ಕಾನ್‌ಸ್ಟೇಬಲ್‌ ಗಳಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌

ಬೆಂಗಳೂರು : ಕರ್ನಾಟಕದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್ ಕಾನ್‌ಸ್ಟೇಬಲ್‌ಗಳು ಇನ್ನು ಮುಂದೆ ಸ್ಲೋಚ್ ಟೋಪಿಗಳ ಬದಲಿಗೆ ನೇವಿ ಬ್ಲೂ ಪೀಕ್ ಕ್ಯಾಪ್‌ಗಳನ್ನು ಧರಿಸಲಿದ್ದಾರೆ. ಈ ಮೂಲಕ ಈಗ ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ಗೆ ರಾಜ್ಯ ಸರ್ಕಾರ ಗುಡ್​ ಬೈ ಹೇಳಿದೆ.
ಈ ಹೊಸ ಮಾದರಿಯ ಕ್ಯಾಪ್​ಗಳು ತೆಲಂಗಾಣ ಪೊಲೀಸ್​ ಯೂನಿಫಾರಂನಿಂದ ಪ್ರೇರಿತವಾಗಿದ್ದು, ನಾಲ್ಕು ದಶಕಗಳಿಂದ ಕರ್ನಾಟಕದಲ್ಲಿ ಪೊಲೀಸ್​ ಕಾನ್ಸ್‌ಟೇಬಲ್‌ಗಳು ಧರಿಸುತ್ತಿದ್ದ ಸ್ಲೌಚ್ ಹ್ಯಾಟ್​ ಈಗ ಇತಿಹಾಸದ ಪುಟ ಸೇರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಈ ಹೊಸ ಕ್ಯಾಪ್‌ಗಳನ್ನುಪೊಲೀಸ್ ಕಾನ್‌ಸ್ಟೇಬಲ್‌ಗಳಿಗೆ ವಿತರಣೆ ಮಾಡಿದ್ದಾರೆ.
ವಿವಿಧ ರಾಜ್ಯಗಳ ಪೋಲಿಸ್ ಕ್ಯಾಪ್ ಮಾದರಿಗಳನ್ನು ಪರಿಶೀಲಿಸಿ, ಅಂತಿಮವಾಗಿ ತೆಲಂಗಾಣ ಮಾದರಿಯ ಕ್ಯಾಪ್​ಗಳನ್ನು ಕರ್ನಾಟಕದ ಕಾನ್ಸ್‌ಟೇಬಲ್‌ಗಳಿಗೆ ಒದಗಿಸಲು ತೀರ್ಮಾನಿಸಿದ್ದರು. ತೆಲಂಗಾಣ ಮಾದರಿಯ ನೇವಿ ಬ್ಲೂ ಕ್ಯಾಪ್‌ಗಳು ಸೂಕ್ತ ವಿನ್ಯಾಸ, ಉತ್ತಮ ಫಿಟ್ ಮತ್ತು ವೃತ್ತಿಪರ ಆಕರ್ಷಣೆ ಹೊಂದಿರುವ ಕಾರಣ ಇದೇ ಮಾದರಿ ಬಗ್ಗೆ ಕರ್ನಾಟಕ ಸರ್ಕಾರ ಸಹಮತ ವ್ಯಕ್ತಪಡಿಸಿತ್ತು.

ಸ್ಲೌಚ್ ಹ್ಯಾಟ್​ಗಳ ಬಳಕೆ ಉಸಿರಾಟದ ತೊಂದರೆಗೆ ಕಾರಣವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ವರದಿಗಳು ಹೇಳಿದ್ದವು. ಮೆರವಣಿಗೆಗಳು, ಸಾರ್ವಜನಿಕ ಬಂದೋಬಸ್ತ್​ನಂತಹ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ಈ ಮಾದರಿಯ ಹ್ಯಾಟ್​ಗಳು ಅನುಕೂಲಕರವಾಗಿಲ್ಲ. ಅದರ ಗಾತ್ರ ಮತ್ತು ಆಕಾರದಿಂದ ಅದು ಬಿದ್ದುಹೋಗುವ ಅಥವಾ ಜಾರುವ ಸಾಧ್ಯತೆ ಹೆಚ್ಚಿದೆ ಎಂದು ದೂರು ಬಂದಿತ್ತು. ಹೀಗಾಗಿ ಹಳೆ ಮಾದರಿಯ ಸ್ಲೌಚ್ ಹ್ಯಾಟ್​ಗಳನ್ನ ರಾಜ್ಯ ಸರ್ಕಾರ ಬದಲಾಯಿಸಿದೆ.
ರಾಜ್ಯದ ಕಾನ್ಸ್ಟೇಬಲ್‌ಗಳು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಸುಮಾರು ನಾಲ್ಕು ದಶಕಗಳ ಇತಿಹಾಸವಿದ್ದು, 1980–83ರ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಕಾಲದಲ್ಲಿ ಇವು ಪರಿಚಯಿಸಲ್ಪಟ್ಟವು. ಅಂದಿನ ನೀಲಿ ಮತ್ತು ಕೆಂಪು ಪಟ್ಟಿಯ ಪೇಟದ ಬದಲಿಗೆ ಈ ಕ್ಯಾಪ್‌ಗಳನ್ನು ದಿನನಿತ್ಯದ ಕರ್ತವ್ಯಕ್ಕಾಗಿ ಅಳವಡಿಸಿಕೊಳ್ಳಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ