Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ

Advertisement

ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ.

“ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ ಪಠ್ಯಪುಸ್ತಕದಲ್ಲಿ, ತುರ್ತು ಪರಿಸ್ಥಿತಿಯನ್ನು ಭಾರತೀಯ ಪ್ರಜಾಪ್ರಭುತ್ವ ಎದುರಿಸಿದ “ಪ್ರಮುಖ ಸವಾಲುಗಳಲ್ಲಿ ಒಂದು” ಎಂದು ಬಣ್ಣಿಸಲಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವದ ಸಾಮರ್ಥ್ಯ ಮತ್ತು ಸವಾಲುಗಳ ಕುರಿತು ಚರ್ಚಿಸುವ ಅಧ್ಯಾಯದಲ್ಲಿ ಈ ವಿಷಯವನ್ನು ಸೇರಿಸಲಾಗಿದೆ.
ಪಠ್ಯಪುಸ್ತಕದಲ್ಲಿ ಏನಿದೆ?
1975 ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ ಕಾರಣವಾದ ಘಟನೆಗಳು ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಾದ ಅದರ ಪರಿಣಾಮಗಳನ್ನು ಪಠ್ಯದಲ್ಲಿ ವಿವರಿಸಲಾಗಿದೆ. “1975-77ರ ಅವಧಿಯಲ್ಲಿ ಹೇರಲಾದ ತುರ್ತು ಪರಿಸ್ಥಿತಿಯು ಭಾರತೀಯ ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲಾಗಿತ್ತು. 1970 ರ ದಶಕದ ಆರಂಭದಲ್ಲಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರದ ವಿರುದ್ಧ ಸಾರ್ವಜನಿಕರ ಅಸಮಾಧಾನ ಹೆಚ್ಚುತ್ತಿತ್ತು. ಹೆಚ್ಚುತ್ತಿರುವ ನಿರುದ್ಯೋಗ, ಹಣದುಬ್ಬರ ಮತ್ತು ದುರಾಡಳಿತದ ಆರೋಪಗಳು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾದವು” ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.
 “ಜೂನ್ 1975 ರಲ್ಲಿ, ಆಂತರಿಕ ಅಶಾಂತಿಯ ನೆಪದಲ್ಲಿ ಸರ್ಕಾರವು ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಹೇರಿತು. ಈ ಅವಧಿಯಲ್ಲಿ ಬಹುತೇಕ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು, ಮಾಧ್ಯಮಗಳ ಮೇಲೆ ಸೆನ್ಸಾರ್‌ಶಿಪ್ ಹೇರಲಾಯಿತು ಮತ್ತು ಹಲವಾರು ರಾಜಕೀಯ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಲಾಯಿತು. ಪ್ರಜಾಪ್ರಭುತ್ವ ಸಂಸ್ಥೆಗಳು ತೀವ್ರ ಒತ್ತಡಕ್ಕೆ ಒಳಗಾದವು ಮತ್ತು ನಾಗರಿಕರ ಸ್ವಾತಂತ್ರ್ಯವನ್ನು ನಿರ್ಬಂಧಿಸಲಾಯಿತು” ಎಂದು ವಿವರಿಸಲಾಗಿದೆ.
ಲೋಕನಾಯಕ ಜಯಪ್ರಕಾಶ ನಾರಾಯಣ ಪಾತ್ರದ ಉಲ್ಲೇಖ
ತುರ್ತು ಪರಿಸ್ಥಿತಿಯ ವಿರುದ್ಧ ನಡೆದ ಹೋರಾಟದಲ್ಲಿ ಜಯಪ್ರಕಾಶ ನಾರಾಯಣ (ಜೆಪಿ) ಅವರ ಪಾತ್ರವನ್ನು ಪಠ್ಯದಲ್ಲಿ ಪ್ರಮುಖವಾಗಿ ಬಿಂಬಿಸಲಾಗಿದೆ. ಲೋಕನಾಯಕ ಎಂದೇ ಜನಪ್ರಿಯರಾಗಿದ್ದ ಸಮಾಜವಾದಿ ಚಿಂತಕ ಜಯಪ್ರಕಾಶ ನಾರಾಯಣ ನೇತೃತ್ವದ ಜನಾಂದೋಲನಗಳು, ವಿಶೇಷವಾಗಿ ವಿದ್ಯಾರ್ಥಿಗಳನ್ನು ಹಾಗೂ ನಾಗರಿಕರನ್ನು ಹೇಗೆ ಒಗ್ಗೂಡಿಸಿದವು ಎಂಬುದನ್ನು ವಿವರಿಸಲಾಗಿದೆ. “1977 ರಲ್ಲಿ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಯಿತು ಮತ್ತು ಸಾರ್ವತ್ರಿಕ ಚುನಾವಣೆಗಳು ನಡೆದವು. ಆಗಿನ ಆಡಳಿತ ಸರ್ಕಾರದ ಸೋಲು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸಿತು ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನು ಎತ್ತಿಹಿಡಿಯಿತು” ಎಂದು ಪುಸ್ತಕ ಹೇಳುತ್ತದೆ.
ಇತರ ಪ್ರಮುಖ ವಿಷಯಗಳ ಸೇರ್ಪಡೆ
ತುರ್ತು ಪರಿಸ್ಥಿತಿಯ ಜೊತೆಗೆ, ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ನಕಲಿ ಸುದ್ದಿ (Fake News), ತಪ್ಪು ಮಾಹಿತಿ (Misinformation), ಬಡತನ, ಪ್ರಾದೇಶಿಕತೆ, ಸಾಮಾಜಿಕ ತಾರತಮ್ಯ ಮತ್ತು ಲಿಂಗ ಅಸಮಾನತೆಯ ಕುರಿತು ಹೊಸ ಪಠ್ಯದಲ್ಲಿ ಚರ್ಚಿಸಲಾಗಿದೆ.
ವಿದ್ಯಾರ್ಥಿಗಳು ನಾಗರಿಕರಾಗಿ ತಮ್ಮ ಪಾತ್ರವನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಜಾಪ್ರಭುತ್ವದ ಭಾಗವಹಿಸುವಿಕೆಯನ್ನು ಉತ್ತೇಜಿಸಲು “ಡೆಮಾಕ್ರಸಿ ಆಂಡ್ ಯೂ” (Democracy and You) ಎಂಬ ಹೊಸ ವಿಭಾಗವನ್ನು ಪರಿಚಯಿಸಲಾಗಿದೆ. ಇದರೊಂದಿಗೆ ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳು, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿ ಮಾಧ್ಯಮದ ಪಾತ್ರ, ಮತದಾರರ ಭಾಗವಹಿಸುವಿಕೆ, ಮತದಾನದ ವ್ಯವಸ್ಥೆ ಹಾಗೂ ಪಂಚಾಯತ್‌ಗಳ ಉದಾಹರಣೆಯೊಂದಿಗೆ ತಳಮಟ್ಟದ ಪ್ರಜಾಪ್ರಭುತ್ವದ ಬಗ್ಗೆ ಮಾಹಿತಿ ನೀಡಲಾಗಿದೆ. ಮಹಿಳೆಯರ ಮತದಾನದ ಹಕ್ಕುಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯ ಕುರಿತಾದ ವಿಭಾಗಗಳೂ ಇದರಲ್ಲಿ ಸೇರಿವೆ.


6ನೇ ತರಗತಿ ಕನ್ನಡ ಪಠ್ಯಪುಸ್ತಕ: 'ಕೃಷ್ಣ' ಹೆಸರಿನ ವಿವಾದಕ್ಕೆ NCERT ಸ್ಪಷ್ಟನೆ:
ಶೈಕ್ಷಣಿಕ ವರ್ಷದಲ್ಲಿ ಪರಿಚಯಿಸಲಾಗುತ್ತಿರುವ ಹೊಸ R3 ಭಾಷಾ ಪುಸ್ತಕಗಳಲ್ಲಿ ಕನ್ನಡ ಪಠ್ಯಪುಸ್ತಕವೂ ಸೇರಿದೆ.   
6ನೇ ತರಗತಿಗೆ ಹೊಸದಾಗಿ ಪರಿಚಯಿಸಿರುವ ಕನ್ನಡದ ಆರ್3 (R3) ಪಠ್ಯಪುಸ್ತಕಕ್ಕೆ 'ಕೃಷ್ಣ' ಎಂದು ಹೆಸರಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟೀಕರಣವನ್ನು ನೀಡಿದ್ದು, ಪುಸ್ತಕವು ನಿರ್ದಿಷ್ಟ ಧಾರ್ಮಿಕ ಅಥವಾ ಸಾಂಸ್ಕೃತಿಕ ಸಿದ್ಧಾಂತವನ್ನು ಉತ್ತೇಜಿಸುತ್ತದೆ ಎಂಬ ಆರೋಪಗಳನ್ನು ತಿರಸ್ಕರಿಸಿದೆ.

NCERT, ಗುರುವಾರ ತನ್ನ ಹೇಳಿಕೆ ಬಿಡುಗಡೆ ಮಾಡಿದ್ದು, ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಸಮತೋಲಿತ ಆಹಾರದ ಕುರಿತಾದ ಅಧ್ಯಾಯದ ವಿಷಯವನ್ನು ತಪ್ಪಾಗಿ ನಿರೂಪಿಸಲಾಗುತ್ತಿದೆ ಎಂದು ಹೇಳಿದೆ.

ಕರ್ನಾಟಕದ ಒಂದು ವರ್ಗದ ಶಿಕ್ಷಣ ತಜ್ಞರು ಮತ್ತು ಸಂಘಟನೆಗಳು ಪಠ್ಯಪುಸ್ತಕವನ್ನು ವಿರೋಧಿಸಿದ್ದವು. ಅದಾದ ಕೆಲವು ದಿನಗಳ ಬಳಿಕ NCERT ಈ ಸ್ಪಷ್ಟೀಕರಣ ನೀಡಿದೆ. ಪಠ್ಯಪುಸ್ತಕವು ಸಾಂಸ್ಕೃತಿಕ ಮತ್ತು ಸೈದ್ಧಾಂತಿಕ ಪಕ್ಷಪಾತವನ್ನು ಪ್ರತಿಬಿಂಬಿಸುತ್ತದೆ, ಪ್ರಾದೇಶಿಕ ವೈವಿಧ್ಯತೆಯನ್ನು ಬದಿಗಿಡುತ್ತದೆ ಮತ್ತು ಪರೋಕ್ಷವಾಗಿ ಸಸ್ಯಾಹಾರವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿತ್ತು.


'ಕೃಷ್ಣ' ಶೀರ್ಷಿಕೆಯ ಬಗ್ಗೆ NCERT ಹೇಳಿದ್ದೇನು?

ಪಠ್ಯಪುಸ್ತಕದ ಹೆಸರಿನ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಎನ್‌ಸಿಇಆರ್‌ಟಿ, ‘ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ಪ್ರಮುಖ ನದಿಗಳ ಹೆಸರಿಡಲಾಗಿದೆ. ಕನ್ನಡ ಪಠ್ಯಪುಸ್ತಕಕ್ಕೆ ಕರ್ನಾಟಕದ ಪ್ರಮುಖ ನದಿಗಳಲ್ಲಿ ಒಂದಾದ ‘ಕೃಷ್ಣ’ ನದಿಯ ಹೆಸರನ್ನು ಇಡಲಾಗಿದೆ’ ಎಂದು ತಿಳಿಸಿದೆ.

‘ಹಿಂದಿ ಪಠ್ಯಪುಸ್ತಕಕ್ಕೆ ‘ಗಂಗಾ’, ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಕಾವೇರಿ’ ಮತ್ತು ಉರ್ದು ಪಠ್ಯಪುಸ್ತಕಕ್ಕೆ ‘ಜಮುನಾ’ (ಯಮುನಾ) ಎಂದು ಹೆಸರಿಡಲಾಗಿದೆ. ಅದೇ ರೀತಿ ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲಾಗಿದೆ. ಕೃಷ್ಣಾ ನದಿಯು ಕರ್ನಾಟಕದಲ್ಲಿ ಹರಿಯುವ ಪ್ರಮುಖ ನದಿಗಳಲ್ಲಿ ಒಂದಾಗಿದೆ’ ಎಂದು ತಿಳಿಸಿದೆ.

‘ಈ ವಿಧಾನವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023ರಲ್ಲಿ ಕಲಿಯುವವರಿಗೆ ಆಳವಾದ ಜ್ಞಾನ, ಸಾಂಸ್ಕೃತಿಕ ಸಂಪರ್ಕ ಮತ್ತು ಅರ್ಥಪೂರ್ಣ ಸ್ಥಳೀಯ ವಿಚಾರಗಳ ಮೇಲೆ ಒತ್ತು ನೀಡುತ್ತದೆ’ ಎಂದು NCERT ತಿಳಿಸಿದೆ.

ಕನ್ನಡದ ಆರ್3 ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲಾಗಿದೆ. ಇದು ಕರ್ನಾಟಕದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳಿಗಿಂತ ಹೆಚ್ಚಾಗಿ ಧಾರ್ಮಿಕ ಸಂಬಂಧವನ್ನು ಪ್ರತಿಬಿಂಬಿಸುತ್ತದೆ ಎಂಬುದು ಒಂದು ವರ್ಗದ ಶಿಕ್ಷಣ ತಜ್ಞರ ವಾದವಾಗಿದೆ. ಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲು ಕಾರಣವೇನು? ಎಂದು ಅನೇಕರು ಪ್ರಶ್ನಿಸಿದ್ದರು.

ಕೃಷ್ಣ ಹೆಸರಿನ ಜೊತೆಗೆ ಸಮತೋಲಿತ ಆಹಾರ ಪದ್ಧತಿಯ ಕುರಿತಾದ ಪಾಠದ ಬಗ್ಗೆಯೂ ವಿರೋಧ ವ್ಯಕ್ತವಾಗಿತ್ತು. ಕೆಲವು ಶಿಕ್ಷಣ ತಜ್ಞರು ಅಧ್ಯಾಯದಲ್ಲಿನ ಉದಾಹರಣೆಗಳು ಮತ್ತು ವಿವರಣೆಗಳು ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಮಾನ್ಯವಾಗಿ ಸೇವಿಸುವ ಮಾಂಸಾಹಾರ ಆಹಾರವನ್ನು ಕಡೆಗಣಿಸಿದೆ ಎಂದಿದ್ದರು.

ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಮುಂತಾದ ಪ್ರದೇಶಗಳ ಜಾನಪದ, ಸಾಹಿತ್ಯ ಮತ್ತು ಸಾಮಾಜಿಕ ಜೀವನವನ್ನು ಪಠ್ಯಪುಸ್ತಕದಲ್ಲಿ ಅಸಮರ್ಪಕವಾಗಿ ಹೇಳಲಾಗಿದೆ ಎಂದು ಅನೇಕರು ಟೀಕಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯಮೋದಿ ಪ್ರಧಾನಿಯಾಗಿ 12 ವರ್ಷದ ಸಾಧನೆ : ಬೆಳಗಾವಿಯ ಸಾಹಿತಿಗಳಿಗೆ ಪುಸ್ತಕ ವಿತರಿಸಿದ ಮಾಜಿ ಸಿಎಂ ಹಿಂಡಾಲ್ಕೋ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ..!ಸಚಿವ ಸತೀಶ ಜಾರಕಿಹೊಳಿ ಸಹೋದರಿಯ ಪತಿಗೆ ಬಿಗ್ ಶಾಕ್ ನೀಡಿದ EDಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ