Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಹಾ ಕೊಲೆ : ಮುನವಳ್ಳಿಯಲ್ಲಿ ಪ್ರತಿಭಟನೆ

 

ಬೆಳಗಾವಿ: ಹುಬ್ಬಳ್ಳಿಯ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಕಾಂಗ್ರೆಸ್‌ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಿದರು.
ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಸಹಪಾಠಿ ಫಯಾಜ್‌ (27) ಕಾಲೇಜು ಆವರಣದಲ್ಲೇ ಚಾಕು ಇರಿದು ಕೊಲೆ ಮಾಡಿದ್ದ. ಫಯಾಜ್‌ ಮುನವಳ್ಳಿ ಗ್ರಾಮದವನಾದ್ದರಿಂದ ಗ್ರಾಮದ ಜನ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಸ್ತೆ ಸಂಚಾರ ಬಂದ್‌ ಮಾಡಿ ಆರೋಪಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದಕ್ಕೂ ಮೊದಲು ಗ್ರಾಮದಲ್ಲಿ ಐತಿಹಾಸಿಕ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಜನ ಧರಣಿ ನಡೆಸಿದರು. ಹಿಂದೂ, ಮುಸ್ಲಿಂ, ವೀರಶೈವ ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಜನರೂ ಪಾಲ್ಗೊಂಡರು.ವಿದ್ಯಾರ್ಥಿನಿ ಕೊಲೆ ಅತ್ಯಂತ ನೋವು ತರಿಸಿದೆ. ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ಕೊಡಿಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಅಘೋಷಿತ ಬಂದ್‌: ರಾಜ್ಯ ಹೆದ್ದಾರಿಗೆ ಹೊಂದಿಕೊಂಡ, ಐತಿಹಾಸಿಕ ಮಹತ್ವದ ಪಡೆದ ಮುನವಳ್ಳಿ ಗ್ರಾಮ ಪ್ರಮುಖ ವಾಣಿಜ್ಯ ಕೇಂದ್ರವೂ ಆಗಿದೆ. ಆದರೆ, ಶುಕ್ರವಾರ ಬೆಳಿಗ್ಗೆಯಿಂದ ಇಡೀ ಗ್ರಾಮದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಎಲ್ಲ ವರ್ತಕರು ಸ್ವಯಂಪ್ರೇರಿತವಾಗಿ ಮಳಿಗೆಗಳನ್ನು ಬಂದ್‌ ಮಾಡಿದರು. ಬೀದಿಬದಿಯಲ್ಲಿ ಹಣ್ಣು, ಹೂವು, ತರಕಾರಿ ಮಾರುವವರೂ ತಮ್ಮ ವ್ಯಾಪಾರ ನಿಲ್ಲಿಸಿದರು. ಗ್ರಾಮದಲ್ಲಿ ಜನಸಂಚಾರ ವಿರಳವಾಗಿದ್ದು, ಆತಂಕದ ವಾತಾವರಣ ಮನೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ