Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಸ ವಿಮಾನ ನಿಲ್ದಾಣ: ತಲೆಕೆಳಗಾಯ್ತು ಲೆಕ್ಕಾಚಾರ !

ಬೆಂಗಳೂರು : ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಟಕ್ಕರ್ ಕೊಡುವ ಉದ್ದೇಶದಿಂದ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಮುಂಚೆಯೇ ಇದರ ಪ್ಲಾನ್‌ಗಳು ಬಹುತೇಕ ಫೈನಲ್‌ ಆಗಿವೆ. ಇನ್ನು ತಮಿಳುನಾಡಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಪ್ರಾರಂಭದಲ್ಲೇ ಸಂಕಷ್ಟ ಎದುರಾಗಿದೆ. ಈ ಮೂಲಕ ತಮಿಳುನಾಡಿನ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಹೌದು ತಮಿಳುನಾಡಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಉತ್ಸುಕವಾಗಿದ್ದರೂ. ಅಲ್ಲಿನ ಜನ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕರ್ನಾಟಕಕ್ಕೆ ಟಕ್ಕರ್ ಕೊಡುವುದಕ್ಕೆ ಮುಂದಾಗಿದ್ದ ತಮಿಳುನಾಡಿಗೆ ಅಲ್ಲಿನ ಜನರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮುಂದಿನ ದಿನಗಳಲ್ಲಿ ಒತ್ತಡ ಹೆಚ್ಚಾಗಲಿದೆ. ಇದೇ ಕಾರಣಕ್ಕಾಗಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಇದರ ನಡುವೆ ತಮಿಳುನಾಡು ಸಹ ಬೆಂಗಳೂರಿನ ಗಡಿಯಿಂದ ಕೆಲವೇ ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಪ್ಲಾನ್ ಮಾಡಿದೆ. ಇದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಎರಡನೇ ವಿಮಾನ ನಿಲ್ದಾಣಕ್ಕೆ ಹೊಡೆತ ಬೀಳಲಿದೆ ಎಂದು ಅಂದಾಜಿಸಲಾಗಿತ್ತು.

ರೈತರಿಂದ ವಿರೋಧ: ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಹೊಸೂರಿನ ಸುತ್ತಮುತ್ತಲಿನ ಹಳ್ಳಿಗಳ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೊಸೂರಿನ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದರಿಂದ ತಮಿಳುನಾಡಿನ ಡೆಂಕಣಿಕೊಟ್ಟೈ ಮತ್ತು ಹೊಸೂರು ತಾಲ್ಲೂಕುಗಳ ಏಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಕಷ್ಟ ಎದುರಾಗಲಿದೆ. ವಿಮಾನ ನಿಲ್ದಾಣದಿಂದ ಕೃಷಿಭೂಮಿಗಳ ಮೇಲೆ ಪರಿಣಾಮ ಬೀರಲಿದೆ. ಕೃಷಿ ಹಾಗೂ ಇಲ್ಲಿನ ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎನ್ನುವ ಆತಂಕವನ್ನು ತಮಿಳುನಾಡಿನವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಮಿಳುನಾಡಿನ ಹೊಸೂರಲ್ಲಿ ವಿಮಾನ ನಿಲ್ದಾಣ ಮಾಡುವುದರಿಂದ ಹೊಸಪುರಂ, ಕಲುಕೊಂಡಪಲ್ಲಿ ಹಾಗೂ ಗೋಬನಪಲ್ಲಿ ಎನ್ನುವ ಭಾಗದ ಜನರಿಗೆ ಕಷ್ಟವಾಗಲಿದೆ. ಡ್ರೋನ್‌ ಸರ್ವೆಗಳು ನಡೆದಿದ್ದು. ಡ್ರೋನ್‌ ಸರ್ವೆಗೆ ಸಹ ಸ್ಥಳೀಯರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಇದರ ನಡುವೆ ತಮಿಳುನಾಡು ಸರ್ಕಾರವು ಕೃಷ್ಣಗಿರಿ ಜಿಲ್ಲೆಯಲ್ಲಿ ಎರಡು ಜಾಗಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿದೆ ಎಂದು ಹೇಳಲಾಗಿದೆ.

ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಉತ್ಸಾಹ: ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಅತ್ಯಂತ ಉತ್ಸುಕವಾಗಿದೆ. ಇದಕ್ಕೆ ಮುಖ್ಯ ಕಾರಣ ತಮಿಳುನಾಡಿನ ಕೈಗಾರಿಕಾ ಪ್ರದೇಶಗಳಲ್ಲಿ ಹೊಸೂರು ಪ್ರಮುಖ ಪ್ರದೇಶವಾಗಿದೆ. ಅಲ್ಲದೆ ಬೆಂಗಳೂರಿನಿಂದ ಕೆಲವೇ ಕಿ.ಮೀ ಅಂತರದಲ್ಲಿ ಇದೆ. ಹೀಗಾಗಿ, ಇಲ್ಲಿ ಎರಡು ಪ್ರದೇಶಗಳನ್ನು ತಮಿಳುನಾಡು ಸರ್ಕಾರ ಅಂತಿಮ ಮಾಡಿದೆ. ವಿಮಾನ ನಿಲ್ದಾಣದ ವಿಚಾರದಲ್ಲಿ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕಿಂತ ಮುಂಚೂಣಿಯಲ್ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ