Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯೋಧ್ಯೆ ರಾಮ ಮಂದಿರ : ಅರ್ಚಕರಿಗೆ ಹೊಸ ಸಮವಸ್ತ್ರ

ಲಕ್ನೋ: ಅಯೋಧ್ಯೆ ರಾಮ ಮಂದಿರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಗರ್ಭಗುಡಿಯ ಪುರೋಹಿತರು ಕೇಸರಿ ಬಟ್ಟೆಗಳನ್ನು ಅಂದರೆ ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಧೋತಿ ಧರಿಸುತ್ತಿದ್ದರು. ಇದೀಗ ಪುರೋಹಿತರು ಹಳದಿ (ಪಿತಾಂಬರಿ) ಬಣ್ಣದ ಧೋತಿ, ಅದೇ ಬಣ್ಣದ ಕುರ್ತಾ ಮತ್ತು ಪೇಟ ಧರಿಸುತ್ತಿದ್ದಾರೆ.

ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪುರೋಹಿತರಿಗೆ ಹಳದಿ ಪೇಟ ಕಟ್ಟಲು ತರಬೇತಿ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹೇಗಿದೆ ಹೊಸ ಸಮವಸ್ತ್ರ?
‘ಚೌಬಂದಿ’ ಎಂದು ಕರೆಯಲ್ಪಡುವ ಹೊಸ ಕುರ್ತಾದಲ್ಲಿ ಯಾವುದೇ ಬಟನ್‌ ಇರುವುದಿಲ್ಲ ಮತ್ತು ಅದನ್ನು ಕಟ್ಟಲು ದಾರವನ್ನು ಬಳಸಲಾಗುತ್ತದೆ. ಹಳದಿ ಬಣ್ಣದ ‘ಧೋತಿ’ಯನ್ನು ಹತ್ತಿ ಬಟ್ಟೆಯಿಂದ ತಯಾರಿಸಲಾಗುತ್ತದೆ. ಇದು ಪಾದವನ್ನೂ ಮುಚ್ಚಲಿದೆ. ದೇವಾಲಯದಲ್ಲಿ ಮುಖ್ಯ ಅರ್ಚಕರು ಮತ್ತು ನಾಲ್ವರು ಸಹಾಯಕ ಅರ್ಚಕರು ಇದ್ದಾರೆ. ಈಗ ಪ್ರತಿ ಸಹಾಯಕ ಪುರೋಹಿತರೊಂದಿಗೆ ಐವರು ಪುರೋಹಿತರು ತರಬೇತಿ ಪಡೆಯುತ್ತಿದ್ದಾರೆ.

ಪುರೋಹಿತರ ಪ್ರತಿ ತಂಡವು ಮುಂಜಾನೆ 3.30ರಿಂದ ರಾತ್ರಿ 11ರವರೆಗೆ ಪಾಳಿಯಲ್ಲಿ ಐದು ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿದೆ. ʼʼರಾಮ ಮಂದಿರದಲ್ಲಿ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಈಗ ಮುಖ್ಯ ಅರ್ಚಕರು, ನಾಲ್ವರು ಸಹಾಯಕ ಪುರೋಹಿತರು ಮತ್ತು 20 ತರಬೇತಿ ಪುರೋಹಿತರು ಸೇರಿದಂತೆ ಎಲ್ಲ ಪುರೋಹಿತರು ಹಳದಿ ಬಣ್ಣದ ತಲೆಯ ಸಫಾ, ಚೌಬಂದಿ ಮತ್ತು ಧೋತಿ ಧರಿಸಲಿದ್ದಾರೆ” ಎಂದು ರಾಮ ಮಂದಿರದ ಸಹಾಯಕ ಅರ್ಚಕ ಸಂತೋಷ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಕಾರಣವೇನು?
ಏಕರೂಪತೆಯನ್ನು ಕಾಪಾಡಿಕೊಳ್ಳಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರ್ಚಕರು ತಮ್ಮ ಫೋನ್‌ಗಳನ್ನು ದೇವಾಲಯಗಳಿಗೆ ಕೊಂಡೊಯ್ಯುವುದನ್ನು ನಿಷೇಧಿಸಿದ್ದು ಕೂಡ ಭದ್ರತಾ ಕ್ರಮದ ಒಂದು ಭಾಗ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ ದೇವಾಲಯದ ಚಿತ್ರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಯಮ ಜಾರಿಗೊಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ