Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಸರ್ಕಾರದ ವಿರುದ್ದ ಗುಡುಗಿ,ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ-ನಿಂಗಪ್ಪ ಪಿರೋಜಿ

ಮೂಡಲಗಿ : ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಂದ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆ ನೂರಾರು ಪಂಚಮಸಾಲಿ ಸಮಾಜದ ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯನ್ನು ಗುರ್ಲಾಪೂರ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜದ ಸಂಘಟನೆಯ ಬೆಳಗಾವಿ ಜಿಲ್ಲಾಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ, ಪಂಚಮಸಾಲಿ ಸಮಾಜದ ಮೂಡಲಗಿ ತಾಲೂಕಾಧ್ಯಕ್ಷ ಬಸವರಾಜ ಪಾಟೀಲ ಹಾಗೂ ರಾಜ್ಯ ಪಂಚಮಸಾಲಿ ಮಾಜಿ ಸೈನಿಕರ ಸಂಘಟನೆಯ ಅಧ್ಯಕ್ಷ ಬಾಳೇಶ ಶಿವಾಪೂರ ಮಾತನಾಡಿ, ಸಿಎಂ ಬೊಮ್ಮಾಯಿಯವರು ನಮ್ಮ ನಾಯಕರ ಮುಂದೆ 6 ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ತಾಯಿ ಮೇಲೆ ಆಣೆ ಮಾಡಿ ನಮ್ಮ ಹೋರಾಟ ಹತ್ತಿಕ್ಕಿದರು. ನಮ್ಮ ನಾಯಕರು ಅವರ ಮಾತಿನ್ನು ನಂಬಿದರು ಆದರೆ 2ಎ ಮೀಸಲಾತಿ ನೀಡುವ ಬದಲು 2ಡಿ ಅಂತ ಕೊಟ್ಟಿದ್ದು ನಮ್ಮ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲಸಂಗಮ ಶ್ರೀಗಳು ಬೆಂಗಳೂರಿನ ಸ್ವಾತಂತ್ರö್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ4ಕ್ಕೆ 50 ದಿನಗಳು ಪೂರೈಸಿದ್ದು, ಸರ್ಕಾರ ಮಾತ್ರ ನಮ್ಮ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ ಎಂದರು.

ಇದೇ ತಿಂಗಳು ಮಾರ್ಚ 15ರಂದು ಶ್ರೀಗಳು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೊ ಆ ನಿರ್ಧಾರಕ್ಕೆ ಇಡೀ ರಾಜ್ಯ ಪಂಚಮಸಾಲಿಗಳು ಬದ್ದರಾಗಿರುತ್ತೆವೆ. ಪಂಚಮಸಾಲಿಗಳಿಗೆ ಬೊಮ್ಮಾಯಿ ಸರ್ಕಾರ ಮಾಡುತ್ತಿರು ನವನಂಗಿ ನಾಟಕ ಎಲ್ಲವೂ ಗೋತ್ತಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಇಡೀ ರಾಜ್ಯದ ಪಂಚಮಸಾಲಿಗಳು ನಾಟಕ ಮಾಡಿತ್ತಿರು ಈಗಿನ ಬೊಮ್ಮಾಯಿ ಸರ್ಕಾರ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ತಕ್ಕ ಉತ್ತರ ನೀಡುತ್ತವೆ ಎಂದು ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಉಪ್ಪಾರ ಸಮಾಜ ಮುಖಂಡ ಭೀಮಪ್ಪ ಹಂದಿಗುoದ, ಗಾಣಿಗೇರ ಸಮಾಜದ ಮುಖಂಡ ಮಲ್ಲಪ್ಪ ಮದಗುಣಕಿ, ರಡ್ಡಿ ಸಮಾಜದ ಮುಖಂಡ ಪುಲ್ಕೇಶ ಸೋನವಾಲ್ಕರ, ಬಣಜಿಗಿ ಸಮಾಜದ ಮುಖಂಡ ಈರಣ್ಣ ಕೂಣ್ಣರು, ಮಾಳಿ ಸಮಾಜದ ಮುಖಂಡ ಚನ್ನಬಸು ಬಡ್ಡಿ, ಮುಸ್ಲಿಂ ಸಮಾಜದ ಅಜೀಜ ಡಾಂಗೆ, ಪರಿಶಿಷ್ಟ ಸಮಾಜದ ಮುಖಂಡ ಶಿವು ಸಣ್ಣಕ್ಕಿ, ಹಾಲುಮತ ಸಮಾಜದ ಮುಖಂಡ ಲಖನ್ ಸವಸುದ್ದಿ ಮಾತನಾಡಿ, ಪಂಚಮಸಾಲಿಗಳ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲ ನೀಡುವುದರ ಜೊತೆಗೆ ನಾವು ಕೂಡಾ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.



ಈ ಸಂದರ್ಭದಲ್ಲಿ ಪಂಚಮಸಾಲಿ ಮುಖಂಡರಾದ ಸಂಗಮೇಶ ಕೌಲಜಗಿ, ಬಸವಣಿ ಮುಗಳಖೋಡ, ಕಲ್ಮೇಶ ಗೋಕಾಕ, ಡಾ. ಕಲ್ಲಪ್ಪ ನಾಗರಾಳ, ಡಿ ಎಸ್ ಗೌಡಿಗೋಡರ, ಮಲ್ಲು ಢವೇಳಶ್ವರ, ಶಿವು ಚಂಡಕಿ, ಸುರೇಶ ಸಕ್ಕರೆಪ್ಪಗೋಳ, ಶಿವನಗೌಡ ಪಾಟೀಲ, ಕೆಂಪ್ಪಣ್ಣ ಮುಧೋಳ, ಹಣಮಂತ ಪಾರ್ಶಿ, ರಾಮಣ್ಣ ಪಾಟೀಲ, ಚನ್ನಗೌಡ ಪಾಟೀಲ, ಶಿವಪ್ಪ ಭುಜನ್ನವರ, ಶ್ರೀಶೈಲ ಜುಟನಟ್ಟಿ, ಶಿವಾನಂದ ಎಡತ್ತಿ, ಶಿವಬಸು ತುಪ್ಪದ, ಸುಭಾಷ ಭಾಗೋಜಿ, ಮಹಾದೇವ ಗೋಕಾಕ, ಪ್ರವೀಣ ಕುರಬಗಟ್ಟಿ, ಉಮೇಶ ಶೆಕ್ಕಿ,ರವಿ ಮಹಾಲಿಂಗಪೂರ,ಸಂತೋಷ ಪಟ್ಟಣಶೆಟ್ಟಿ ಹಾಗೂ ವಿವಿಧ ಹಳ್ಳಿಗಳಿಂದ ನೂರಾರು ಪಂಚಮಸಾಲಿಗಳು ಉಪಸ್ಥಿತರಿದ್ದರು.

ಗುರ್ಲಾಪೂರ ಕ್ರಾಸ್ ಬಳಿ ಒಂದು ಗಂಟೆಗಳ ಕಾಲ ನಡೆದ ಪ್ರತಿಭಟನೆಯಲ್ಲಿ 2ಕಿಮೀ ದೂರದಷ್ಟು ವಾಹನಗಳು ನಿಂತು ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಓರ್ವ ಪಿಎಸ್‌ಐ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ