Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಸಾರ್ವಜನಿಕರಿಂದ ಕೆಲವು ಅನಾಮಧೇಯ ವ್ಯಕ್ತಿಗಳು ಹಣ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ. ಈ ಕುರಿತು ಪ್ರಸ್ತುತ ಸಾಕ್ಷ್ಯಾಧಾರಗಳು ಸಹ ಲಭ್ಯವಾಗಿವೆ. ಈ ಕುರಿತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಮೇತ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಪ್ರಸ್ತುತ ಯಾವುದೇ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲಿರುವುದಿಲ್ಲ. ಹಾಗೇನಾದರೂ ನೇಮಕಾತಿ ಇದ್ದಲ್ಲಿ ಸಕ್ಷಮ ಪ್ರಾಧಿಕಾರದ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ನೇಮಕಾತಿ ಆಮಿಷಕ್ಕೆ ಒಳಗಾಗದೇ, ಯಾವುದೇ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಯಲ್ಲಿ ದೂರನ್ನು ದಾಖಲಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಕೋರಿದ್ದಾರೆ.

ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು-ಅಂಗನವಾಡಿ ಕಾರ್ಯಕರ್ತೆಯರಿಂದ ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ ಆರೋಪ:
ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 58 ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಹಿನ್ನೆಲೆ:
ದೇವದುರ್ಗ ವಲಯದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಮಸರಕಲ್-ಬಿ ವಲಯದ ಅಂಗನವಾಡಿ ಕಾರ್ಯಕರ್ತೆಯರಿಂದ ' ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ' ಎಂಬ ಶೀರ್ಷಿಕೆಯಡಿ ಕೆಲವು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಗಳಲ್ಲಿ ಸುದ್ದಿ ಹಾಗೂ ವಿಡಿಯೋ ತುಣುಕು ಪ್ರಸಾರವಾಗಿತ್ತು. ಈ ಕುರಿತು ಸ್ಪಷ್ಟೀಕರಣ ನೀಡುವಂತೆ ಮೇಲ್ವಿಚಾರಕಿ ಕಮಲಾಕ್ಷಿ ಅವರಿಗೆ ನೋಟಿಸ್ ನೀಡಲಾಗಿತ್ತು. ಮಾರ್ಗಸೂಚಿಯನ್ವಯ ಮೊಟ್ಟೆ ಹಣವು ಬಾಲವಿಕಾಸ ಸಲಹಾ ಸಮಿತಿಯ ಜಂಟಿ ಖಾತೆಗೆ ಜಮಾವಾಗಿರುತ್ತದೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೈಯಕ್ತಿಕ ಖಾತೆಗೆ ಜಮಾ ಆಗಿರುವುದಿಲ್ಲ ಎಂದು ತಿಳಿಸಿದ್ದರು.
ಆದರೆ, ಮೊಟ್ಟೆ ಹಣವನ್ನು ಕಾರ್ಯಕರ್ತೆಯರಿಂದ ಕೇಳಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ಸೂಕ್ತ ರೀತಿಯ ಉತ್ತರವನ್ನು ನೀಡಿರಲಿಲ್ಲ. ಅಲ್ಲದೆ ಇಲಾಖೆಗೆ ಮುಜುಗರವಾಗುವಂತೆ ವರ್ತಿಸಿದ್ದರು.
ಈ ಹಿನ್ನೆಲೆಯಲ್ಲಿ ಕಮಲಾಕ್ಷಿ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ