Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳಿಗೆ ಸೂಚನೆ : ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಬೇಸಿಗೆ ಶಿಬಿರ

 

ಬೆಳಗಾವಿ :
ಇಲ್ಲಿಯ ಕೋಟೆ ಆವರಣದ ರಾಮಕೃಷ್ಣ ಮಿಷನ್ ವತಿಯಿಂದ ವಸಂತ ವಿಹಾರ- 2023 ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ.

ಏಪ್ರಿಲ್ 15 ರಿಂದ 30 ರವರೆಗೆ 13-16 ವರ್ಷದ ಬಾಲಕರಿಗೆ ಹಾಗೂ ಮೇ 3 ರಿಂದ 17 ರವರೆಗೆ ಪ್ರತಿದಿನ ಬೆಳಗ್ಗೆ 7:30 ರಿಂದ 12:30 ರವರೆಗೆ ಬಾಲಕರಿಗೆ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ.

ಮೇ 1 ರಿಂದ 15 ರವರೆಗೆ 6 ನೇ ತರಗತಿಯಿಂದ 10 ನೇ ತರಗತಿವರೆಗಿನ ಬಾಲಕಿಯರಿಗೆ ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ರವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಬೆಳಗಾವಿ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ತಮ್ಮ ಹೆಸರು ನೋಂದಾಯಿಸುವಂತೆ ಕೋರಲಾಗಿದೆ. ಶೀಲ ನಿರ್ಮಾಣ, ವಿದ್ಯಾರ್ಥಿ ಜೀವನದಲ್ಲಿ ಮೌಲ್ಯಗಳು, ಏಕಾಗ್ರತೆ ಮತ್ತು ಸ್ವಯಂಶಿಸ್ತು, ಇತರರಿಗೆ ಸೇವೆ, ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ದೇಶಭಕ್ತಿ, ಗುರುವಿನ ಮಹತ್ವ, ಸಂತರ ಮತ್ತು ಅವತಾರಗಳ ಜೀವನ, ದೈಹಿಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ಅಭಿವೃದ್ಧಿ, ದೇವಾಲಯ ಭೇಟಿ, ಪ್ರಾರ್ಥನೆ, ವೇದ ಪಠಣ ಮತ್ತು ಭಜನೆ, ಧ್ಯಾನ, ಭಗವದ್ಗೀತೆ ಮತ್ತು ಸುಭಾಷಿತ ಶ್ಲೋಕಗಳು, ಯೋಗಾಸನ ಕೈಂಕರ್ಯ, ಶ್ರಮದಾನ ಮೌಲ್ಯ ಮತ್ತು ನೈತಿಕ ಪಾಠಗಳು, ಗುಂಪು ಚಟುವಟಿಕೆ, ವಿನೋದ ಮತ್ತು ಸ್ಮರಣೆ ಆಟಗಳು ಹೀಗೆ ಬೇಸಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆ ನಡೆಯಲಿವೆ ಎಂದು ರಾಮಕೃಷ್ಣ ಮಿಷನ್ ಆಶ್ರಮದ ಪ್ರಕಟಣೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ