Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬಯಲಿಗೆ ಕಂಪನಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ಶಿವಾನಂದ ನೀಲಣ್ಣವರ ಆಯ್ತು : ಈಗ  ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಹಗರಣದ ತನಿಖೆ ಪ್ರಗತಿಯಲ್ಲಿದೆ. ಈ ನಡುವೆ ಬೆಳಗಾವಿ ನಗರದಲ್ಲಿ ಮತ್ತೊಂದು ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಾಗ್ಯ ನಗರದಲ್ಲಿರುವ ‘ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಚೇರಿ ಮೇಲೆ ಎಸಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ಕಂಪನಿಯ ಆಡಳಿತ ಮಂಡಳಿ, ತಕ್ಷಣವೇ ತನ್ನ ಅಧಿಕೃತ ವೆಬ್‌ಸೈಟ್ ಅನ್ನು ಸ್ಥಗಿತಗೊಳಿಸಿದೆ. 

ಮಹಾರಾಷ್ಟ್ರ ಮೂಲದ ಬಲರಾಮ ಮಾನೆ ಎಂಬಾತ ಈ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸೂತ್ರಧಾರ. ರಾಜ್ಯದ ವಿವಿಧೆಡೆ ಒಟ್ಟು 7 ಬ್ರಾಂಚ್‌ಗಳನ್ನು ತೆರೆದು ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಕಳೆದ 8 ವರ್ಷಗಳಿಂದ ಬೆಳಗಾವಿಯಲ್ಲಿ ಯಾರಿಗೂ ಸಂಶಯ ಬಾರದಂತೆ ವ್ಯವಹಾರ ನಡೆಸುತ್ತಿದ್ದ ಈ ಸಂಸ್ಥೆ ಅಧಿಕಾರಿಗಳ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ನಿರ್ವಹಣೆ ನೆಪ ಹೂಡಿ ತನ್ನ ಸರ್ವರ್ ಅನ್ನು ಕಂಪ್ಲೇಟ್ ಆಗಿ ಡೌನ್ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದಾಳಿ ವೇಳೆ ಆನ್‌ಲೈನ್ ಮೂಲಕ ನೂರಾರು ಕೋಟಿ ರೂಪಾಯಿಗಳ ಬೃಹತ್ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಸಾರ್ವಜನಿಕರಿಗೆ ಒಂದು ಲಕ್ಷ ರೂಪಾಯಿ ಹೂಡಿಕೆಗೆ ತಿಂಗಳಿಗೆ 3 ಸಾವಿರ ರೂಪಾಯಿಗಳ ಭಾರಿ ಬಡ್ಡಿ ಕೊಡುವುದಾಗಿ ಆಮಿಷ ಒಡ್ಡಲಾಗಿತ್ತು. 

ಈ ಆಸೆಗೆ ಬಿದ್ದ ಸಾವಿರಾರು ಜನರು ಹಣವನ್ನು ಇಲ್ಲಿ ಠೇವಣಿ ಇಟ್ಟಿದ್ದಾರೆ. ಸದ್ಯ ಕಚೇರಿಯಲ್ಲಿದ್ದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಹಣದ ಮೂಲದ ತಪಾಸಣೆಗೆ ಮುಂದಾಗಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫಿಫಾ ವಿಶ್ವಕಪ್ ಫೈನಲ್: ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ ಕೇರಳಂ ಸರ್ಕಾರಬೆಳಗಾವಿ ಪಾಲಿಕೆಯಲ್ಲಿ ನಿರ್ಣಯ ಅಂಗೀಕಾರಕ್ಕೆ ಯಾವುದೇ ಕಾನೂನು ತೊಡಕಿಲ್ಲಫಹೀಮ್ ಕೋತ್ವಾಲ್ ಗಡಿಪಾರು ಮೊದಲು ಹಾಲಿನಲ್ಲಿ ನಿದ್ದೆ ಮಾತ್ರೆ…ನಂತರ ಹಾಸಿಗೆ ಮೇಲೆ ವಿಷದ ಹಾವು ! ಗಂಡನ ಕೊಲೆಗೆ ಪತ್ನಿಯ ಭಯಾನಕ ಸಂಚು…!ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ: ಇನ್ನುಂದೆ ಆನ್‌ಲೈನ್ ಮೂಲಕವೇ ಪ್ರಮಾಣ ಪತ್ರತಾನೇ ಕದ್ದು ಅಂಗಡಿ ಕಳ್ಳತನವಾದ ಬಗ್ಗೆ ದೂರು ದಾಖಲಿಸಿದ ಆರೋಪಿ ಬಂಧನ ಒಟ್ಟು 65,95,000/- ರೂ ಮೌಲ್ಯದ ಬಂಗಾರ ಬೆಳ್ಳಿ ವಶಮತದಾರರ ಪಟ್ಟಿ ಪರಿಷ್ಕರಣೆ : ಸಂಸದರೊಂದಿಗೆ ಚರ್ಚೆ ನಡೆಸಿದ ಕಿರಣ ಜಾಧವಮೊಬೈಲ್ ವಿಷಯಕ್ಕೆ ದೇವಸ್ಥಾನದಲ್ಲೇ ಭೀಕರ ಕೊಲೆಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ