ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಕೃಷಿ ಮಾರುಕಟ್ಟೆಯೊಂದಿಗೆ ಸಹಕಾರ ಖಾತೆ ಒಲಿದು ಬಂದಿದೆ.
ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವರು ಅಪಾರ ಅನುಭವ ಹೊಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ತಜ್ಞರು ಎಂದೇ ಕರೆಯಲ್ಪಡುವ ಅವರು ಈ ಮೊದಲು ಸಹಕಾರ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಲಕ್ಷ್ಮಣ ಸವದಿ ಅವರಿಗೆ ಸಹಕಾರಿ ಖಾತೆಯನ್ನೇ ಮತ್ತೆ ನೀಡಿದ್ದಾರೆ. ಜೊತೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಅವರನ್ನು ನೇಮಕ ಮಾಡುವ ಸಂಭವ ಇದೆ. ಈಗಾಗಲೇ ಅವರು ಉತ್ತರ ಕನ್ನಡ ಜಿಲ್ಲೆಯ ಬರ ಉಸ್ತುವಾರಿಯನ್ನು ನಿಭಾಯಿಸಿದ್ದರು.