Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿದ್ದರಾಮಯ್ಯ

 

ಬೆಂಗಳೂರು :
ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

*ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ*
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.

*ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ*
ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ