Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ

 

ಬೆಳಗಾವಿ :
ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 22 ರಂದು ನಾಲ್ಕನೇಯ ಶನಿವಾರ ಅಕ್ಟೋಬರ್ 23 ರಂದು ರವಿವಾರ ಅಕ್ಟೋಬರ್24 ರಂದು ಸೋಮವಾರ ನರಕಚತುರ್ದಶಿ ಅಕ್ಟೋಬರ್ 25 ಮಂಗಳವಾರ ದೀಪಾವಳಿ ಅಮವಾಸ್ಯೆ ಹಬ್ಬದ ಹಾಗೂ ಅಕ್ಟೋಬರ್ 26 ರಂದು ಬುಧವಾರ ಬಲಿಪಾಡ್ಯಮಿ ಹೀಗೆ ಸರಣಿ ರಜೆ ಇರುವುದರಿಂದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ ಗೋಕಾಕ, ಹುಕ್ಕೇರಿ,ರಾಯಬಾಗ ಮತ್ತು ಅಥಣಿ ಘಟಕಗಳಿಂದ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.

ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ ಮತ್ತು ಗೋಕಾಕ ರಾಯಬಾಗ ಘಟಕಗಳಿಂದ ಕೊಲ್ಹಾಪುರ, ಪುಣೆ, ಮುಂಬಯಿ ಹಾಗೂ ಇತರೇ ಅಂತರರಾಜ್ಯ ಮಾರ್ಗಗಳಿಗೆ ಅಕ್ಟೋಬರ್ 20 ರಿಂದ ನವೆಂಬರ್ 3 ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ ಗೋಕಾಕ, ಹುಕ್ಕೇರಿ, ರಾಯಬಾಗ ಮತ್ತು ಅಥಣಿ ಘಟಕಗಳಿಂದ ಅಕ್ಟೋಬರ್ 21 ರಿಂದ ಅಕ್ಟೋಬರ್ 23 ರವರೆಗೆ ಬೆಂಗಳೂರಿನಿಂದ ವಿಶೇಷ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.

ದೀಪಾವಳಿ ಹಬ್ಬ ಆಚರಿಸಿ ಮರಳುವ ಪ್ರಯಾಣಿಕರಿಗಾಗಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ ಗೋಕಾಕ, ಹುಕ್ಕೇರಿ, ರಾಯಬಾಗ ಮತ್ತು ಅಥಣಿ ಘಟಕಗಳಿಂದ ಅಕ್ಟೋಬರ್ 26 ರಿಂದ ನವೆಂಬರ್ 1 ರವರೆಗೆ ಬೆಂಗಳೂರಿಗೆ ವಿಶೇಷ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.

ಅಕ್ಟೋಬರ್ 26 ಮತ್ತು 27 ರಂದು ವಿಭಾಗದ ನಿಪ್ಪಾಣಿ ಘಟಕದಿಂದ ನಿಪ್ಪಾಣಿ-ಇಚಲಕರಂಜಿ, ನಿಪ್ಪಾಣಿ-ಕೋಲ್ಹಾಪುರ ಚಿಕ್ಕೋಡಿ ಘಟಕದಿಂದ ಚಿಕ್ಕೋಡಿ-ಇಚಲಕರಂಜಿ, ಚಿಕ್ಕೋಡಿ-ಮಿರಜ ಸಂಕೇಶ್ವರ ಘಟಕದಿಂದ ಸಂಕೇಶ್ವರ-ಗಡಹಿAಗ್ಲಜ. ಸಂಕೇಶ್ವರ-ಕೋಲ್ಹಾಪೂರ ಮತ್ತು ಅಥಣಿ ಘಟಕದಿಂದ ಅಥಣಿ-ಮಿರಜ ಮಾರ್ಗಗಳಲ್ಲಿ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಚಿಕ್ಕೋಡಿ ವಿಭಾಗದ ವಾಕರಸಾಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ