Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೇವಾ ನ್ಯೂನ್ಯತೆಗೈದ ಹರ್ಷ ಟೂರಿಸ್ಸ್ ಸಂಸ್ಥೆಗೆ ಪರಿಹಾರ, ದಂಡ ಪಾವತಿಗೆ ಆದೇಶ

 


ದಾವಣಗೆರೆ :ದಾವಣಗೆರೆ ನಗರದ ಹರ್ಷ ಟೂರಿಸ್ಟ್ ಸಂಸ್ಥೆಯವರು ಮಾಡಿದ ಸೇವಾ ನ್ಯೂನ್ಯತೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ಅಯೋಗ ಒಟ್ಟು ರೂ.24,500/- ಗಳ ಪರಿಹಾರವನ್ನು ದೂರುದಾರರಿಗೆ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಾಂತೇಶ ಈರಪ್ಪ ಶಿಗ್ಲಿ ಹಾಗೂ ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಬಿ.ಯು. ಗೀತಾ ಇವರು ಆದೇಶಿಸಿದ್ದಾರೆ.
ದಾವಣಗೆರೆ ನಿವಾಸಿ ಸತೀಶ್ ಕುಮಾರ್ ಇವರು ಹರ್ಷ ಟೂರಿಸ್ಟ್ ಸಂಸ್ಥೆಯ ಮೂಲಕ ಸೆಪ್ಟೆಂಬರ್-2023 ರಲ್ಲಿ ಪ್ರವಾಸ ಕೈಗೊಂಡಿದ್ದು ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದರ್ಶನದ ಜೊತೆಗೆ ತ್ರಯಂಬಕೇಶ್ವರ ಮತ್ತು ಶನಿ ಶಿಂಗಾಪುರಕ್ಕೆ, ಸೆ.6 ರಿಂದ 10 ರವರೆಗೆ ಈ ಅವಧಿಯಲ್ಲಿ ಪ್ರವಾಸ ಕೈಗೊಂಡಿದ್ದು, ಹರ್ಷ ಟೂರಿಸ್ಟ್ ಸಂಸ್ಥೆಯವರು, ಈ ಪ್ರವಾಸವನ್ನು ಏರ್ಪಡಿಸಿದ್ದರು. ತಲಾ ರೂ.10,000 ಮತ್ತು ಜಿ.ಎಸ್.ಟಿ.ಯೊಂದಿಗೆ ಸಖಾಸಿನ ಮತ್ತು ಆರಾಮದಾಯಕ ಪ್ರವಾಸ ನೀಡುವುದಾಗಿ ವಿವರಿಸಿದ್ದರ ಹಿನ್ನಲೆಯಲ್ಲಿ ಎಸ್.ಎನ್.ಸತೀಶ ಕುಮಾರ್ ಇವರು ಈ ಸಂಸ್ಥೆಯೊಂದಿಗೆ ಪ್ರವಾಸವನ್ನು ಕೈಗೊಂಡಿದ್ದರು.
ಆದರೆ, ಪ್ರವಾಸದಲ್ಲಿ ಟೂರಿಸ್ಟ್ ಸಂಸ್ಥೆಯವರು ನೀಡಿದ ಭರವಸೆಯಂತೆ ಯಾವುದೇ ಆರಾಮದಾಯಕ ಪ್ರವಾಸದ ಸೇವೆಯನ್ನು ನೀಡದೇ ಸೇವಾನ್ಯೂನ್ಯತೆಯನ್ನು ಎಸಗಿದ್ದಾರೆಂದು ಸತೀಶ್ ಕುಮಾರ್ ಇವರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿದರು. ಹರ್ಷ ಟೂರಿಸ್ಟ್ ಸಂಸ್ಥೆಯವರು ಯಾವುದೇ ನಿಗಧಿತ ವೇಳೆಗೆ ಪ್ರವಾಸವನ್ನು ನೀಡದೇ ಅತ್ಯಂತ ಕಳಪೆ ಮಟ್ಟದ ಸೇವೆಯನ್ನು ನೀಡಿದ್ದು, ಪ್ರವಾಸದ ಅವಧಿಯಲ್ಲಿ ದೂರುದಾರರಿಗೆ ಅತ್ಯಂತ ಹೀನಾಯವಾದ ಸೇವೆಯನ್ನು ನೀಡಿದ್ದಲ್ಲದೇ ಮಾನಸಿಕವಾಗಿ ಮತ್ತು ದೈಹಿಕವಾಗಿ ತೊಂದರೆ ಉಂಟು ಮಾಡಿದ್ದರಿಂದ, ದೂರುದಾರರು ಸದರಿ ಸಂಸ್ಥೆಗೆ ಕೊಡಮಾಡಿದ ಪ್ರಯಾಣದ ಮೊತ್ತವನ್ನು ಮರಳಿ ನೀಡುವಂತೆ ಆದೇಶಿಸಬೇಕೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದರು.
ಈ ದೂರನ್ನು ಪರಿಗಣಿಸಿ, ಎದುರುದಾರರ ಸಂಸ್ಥೆಗೆ ನೋಟಿಸ್ ನೀಡಲಾಗಿ ಸಂಸ್ಥೆಯವರು ಗ್ರಾಹಕರ ಆಯೋಗದ ಮುಂದೆ ತಮ್ಮ ಯಾವುದೇ ಪ್ರತಿರೋಧವನ್ನು ನಿವೇದಿಸಿಕೊಳ್ಳದೇ ಇರುವುದರಿಂದ ವಸ್ತುಸ್ಥಿತಿಗಳ ಮತ್ತು ದೂರುದಾರರ ಅಹವಾಲನ್ನು ಮತ್ತು ಪ್ರಕರಣದ ವಿಷಯಗಳನ್ನು ಪರಿಶೀಲಿಸಿ ಜಿಲ್ಲಾ ಗ್ರಾಹಕರ ಆಯೋಗ ಎದುರುದಾರ ಸಂಸ್ಥೆಯವರು ದೂರುದಾರರಿಂದ ಪಡೆದುಕೊಂಡ ರೂ.18900 ಗಳಲ್ಲಿ ಅರ್ಧ ಮೊತ್ತವನ್ನು ಅಂದರೆ ರೂ.9500 ಮರು ಸಂದಾಯ ಮಾಡಬೇಕೆಂದು ಆದೇಶಿಸಿದೆ. ಮತ್ತು ದೂರುದಾರರಿಗೆ ನೀಡಿದ ಸೇವಾನ್ಯೂನ್ಯತೆಗೆ ಪರಿಹಾರವಾಗಿ ರೂ.10000 ನಷ್ಟ ಪರಿಹಾರ ಮತ್ತು ಪ್ರಕರಣದ ಖರ್ಚಿನ ಮರು ಸಂದಾಯಕ್ಕೆ ರೂ.5,000 ಗಳನ್ನು ಆದೇಶವಾದ 30 ದಿನಗಳ ಒಳಗಾಗಿ ನೀಡಬೇಕು. ಇದನ್ನು ತಪ್ಪಿದಲ್ಲಿ ಶೇ.6ರ ಬಡ್ಡಿ ಸೇರಿಸಿ ಮರು ಸಂದಾಯ ಮಾಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ