Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಹಲ್ಗಾಮ್‌ ದಾಳಿ | ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್

ನವದೆಹಲಿ : ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದೆ. ಅದಿ ಪ್ರತಿಯಾಗಿ ಪಾಕಿಸ್ತಾನವು ಕ್ರಮ ಕೈಗೊಂಡಿದೆ. ಪಾಕಿಸ್ತಾನವು ತನ್ನ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳ ಸಂಚಾರವನ್ನು ಮುಚ್ಚಿದ್ದು, ಈಗ ಭಾರತವು ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು (Airspace) ಮುಚ್ಚಿದೆ.

ಕಳೆದ ವಾರ ಎಲ್ಲ ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರಕ್ಕೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿತ್ತು. ಇದೀಗ ಭಾರತವು ಪಾಕಿಸ್ತಾನದ ವಾಣಿಜ್ಯ ವಿಮಾನಯಾನ ಸಂಸ್ಥೆಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನದಿಂದ ನೋಂದಾಯಿಸಲ್ಪಟ್ಟ, ನಿರ್ವಹಿಸಲ್ಪಡುವ ಅಥವಾ ಗುತ್ತಿಗೆ ಪಡೆದ ಎಲ್ಲ ವಿಮಾನಗಳಿಗೆ ತನ್ನ ವಾಯು ಪ್ರದೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಇದು ಏಪ್ರಿಲ್ 30ರಿಂದ 2025ರ ಮೇ 23ರವರೆಗೆ ಜಾರಿಯಲ್ಲಿರಲಿದೆ.

ಈ ಮೂಲಕ ಭಾರತ ಮತ್ತು ಪಾಕಿಸ್ತಾನ ಎರಡೂ ಮೇ 23ರ ರಾತ್ರಿ 11:59ರವರೆಗೆ ತಮ್ಮ ವಾಯುಪ್ರದೇಶದಲ್ಲಿ ಪರಸ್ಪರ ವಿಮಾನಯಾನ ಸಂಸ್ಥೆಗಳನ್ನು ನಿರ್ಬಂಧಿಸಿವೆ. ʼʼಪಾಕಿಸ್ತಾನ ನೋಂದಾಯಿತ ವಿಮಾನಗಳು ಮತ್ತು ಪಾಕಿಸ್ತಾನ ವಿಮಾನಯಾನ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಅಥವಾ ಗುತ್ತಿಗೆ ಪಡೆದ ವಿಮಾನಗಳಿಗೆ ಭಾರತೀಯ ವಾಯುಪ್ರದೇಶದಲ್ಲಿ ಪ್ರವೇಶವಿಲ್ಲʼʼ ಎಂದು ಭಾರತ ನೋಟಿಸ್‌ ಟು ಏರ್‌ಮನ್‌ (NOTAM) ಹೊರಡಿಸಿದೆ.
ಈ ನಡೆಯಿಂದ ಎರಡೂ ದೇಶಗಳ ವಿಮಾನಗಳು ಸುತ್ತು ಬಳಸಿ ವಿವಿಧ ದೇಶಗಳಿಗೆ ತೆರಳಬೇಕಿದ್ದು, ಪ್ರಯಾಣದ ಸಮಯವನ್ನು ಹೆಚ್ಚಿಸಲಿದೆ. ಜತೆಗೆ ವಿಮಾನ ಸಂಸ್ಥೆಗಳ ವೆಚ್ಚ ಹೆಚ್ಚಾಗಲಿದೆ. ಇದಕ್ಕೂ ಮೊದಲು ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದು, ತಾತ್ಕಾಲಿಕ ವೀಸಾ ಹೊಂದಿರುವ ಪಾಕಿಸ್ತಾನದ ಪ್ರಜೆಗಳು ಭಾರತ ಬಿಟ್ಟು ತೆರಳುವಂತೆ ಆದೇಶಿಸಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ