Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಹಿರಂಗದಲ್ಲಿ ಭಗವಂತನ ಹುಡುಕಾಟ ಬೇಡ : ಗುರುಸಿದ್ದ ಪಟ್ಟದಾರ್ಯ ಮಹಾಸ್ವಾಮಿಗಳು

ಬೆಳಗಾವಿ:ಹಸುವಿನ ಹಾಲಿನೊಳಗೆ ತುಪ್ಪ ಅಡಗಿರುವಂತೆ, ಕಲ್ಲು‌ಮಣ್ಣಿನೊಳಗೆ ಬಂಗಾರ ಇರುವಂತೆ ಭಗವಂತ ನಮ್ಮ ಅಂತರಾತ್ಮದೊಳಗೆ ಇದ್ದು, ಬಹಿರಂಗದಲ್ಲಿ ಅವನ ಹುಡುಕಾಟ ಮಾಡಬಾರದು ಎಂದು ಗುಳೇದಗುಡ್ಡ ಗುರುಸಿದ್ದೇಶ್ವರ ಬ್ರಹನ್ಮಠದ ಜಗದ್ಗುರು ಗುರುಸಿದ್ಧ ಪಟ್ಟದಾರ್ಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಶನಿವಾರ ಇಲ್ಲಿನ ಶಿವಬಸವ ನಗರದ ಆರ್‌.ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಡಾ. ಶಿವಬಸವ ಮಹಾಸ್ವಾಮಿಗಳವರ 136 ನೇ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ವಚನದರ್ಶನ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ನಾಗನೂರು ಗ್ರಾಮದಲ್ಲಿದ್ದ ಡಾ. ಶಿವಬಸವ ಮಹಾಸ್ವಾಮಿಗಳು ಬೆಳಗಾವಿಗೆ ಬಂದು ಉಚಿತ ಪ್ರಸಾದ ನಿಲಯ ತೆರೆಯದೆ ಇದ್ದಿದ್ದರೆ ಇಂದು ಲಕ್ಷಾಂತರ ಜನ ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಬಡ ಮಕ್ಕಳಿಗೆ ಅಣ್ಣ, ಅರಿವು, ಆಶ್ರಯ ಹಾಗೂ ಶಿಕ್ಷಣ ನೀಡಿದ್ದಲ್ಲದೆ ಸ್ವಾತಂತ್ರ ಹೋರಾಟ, ಕನ್ನಡ ಚಳುವಳಿಗಳಲ್ಲೂ ಡಾ. ಶಿವಬಸವ ಮಹಾಸ್ವಾಮಿಗಳು ಸಕ್ರಿಯರಾಗಿದ್ದರು ಎಂದರು.

ಸಮಾರಂಭದಲ್ಲಿ ಪ್ರವಚನ ನೀಡಿದ ಮುಮ್ಮಿಗಟ್ಟಿ ಬಸವ ಯೋಗಾಶ್ರಮದ ಬಸವಾನಂದ ಮಹಾಸ್ವಾಮಿಗಳು ಮಾತನಾಡಿ ಅನುಭಾವದ ಮೇರು ಪರ್ವತ ವಾಗಿರುವ ವಚನಗಳಲ್ಲಿ ಜ್ಞಾನದ ಬೆಳಕಿದೆ. ಬದಕಲು ದಾರಿಯಿದೆ ಹಾಗೂ ಸಮಾಜದ ಜಟಿಲ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವಿದೆ. ಕಾರಣ ವಚನಗಳನ್ನು ನೈಜ ರೂಪದಲ್ಲಿ ಅರ್ಥೈಸಿಕೊಂಡು ಜೀವನ ಸಾಗಿಸಬೇಕು ಎಂದರು.

ಚೆನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಕೌಲಗಾದ ವೀರಸಿದ್ದ ದೇವರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಚಂದ್ರಗಿರಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ. ಎಲ್. ಪಾಟೀಲ ಸ್ವಾಗತಿಸಿದರು. ವಿಜ್ಞಾನ ಕೇಂದ್ರದ ರಾಜಶೇಖರ ಪಾಟೀಲ ನಿರೂಪಿಸಿದರು.ಕೊನೆಗೆ ಪ್ರಾಧ್ಯಾಪಕ ಎ.ಕೆ. ಪಾಟೀಲ ವಂದಿಸಿದರು.

ವಚನ ಕಟ್ಟುಗಳ ಮೆರವಣಿಗೆ :
ಸಮಾರಂಭಕ್ಕೂ ಮುಂಚೆ ಡಾ. ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀನಗರ ಉದ್ಯಾನವನದಿಂದ ಭವ್ಯ ಮೆರವಣಿಗೆಗೆ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಚಾಲನೆ ನೀಡಿದರು. ಬಸವಾದಿ ಶರಣರ ವಚನಕಟ್ಟುಗಳು ಮೆರವಣಿಗೆಯ ಮೆರಗು ಹೆಚ್ಚಿಸಿದರೆ, ಡೊಳ್ಳು ಸೇರಿದಂತೆ ಜಾನಪದ ಕಲಾ ತಂಡಗಳ ಪ್ರದರ್ಶನಗಳು ಜನರ ಗಮನ ಸೆಳೆದವು. ಮೆರವಣಿಗೆಯಲ್ಲಿ 20 ಕ್ಕೂ ಹೆಚ್ಚು ಸ್ವಾಮೀಜಿಗಳು, ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಮಾತೃ ಮಂಡಳಿ ಹಾಗೂ ಮಹಿಳಾ ಮಂಡಳಿಗಳ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ