Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

4399 ದಿನಗಳ ಕಾಲ ಅಪ್ರತಿಮ ಜನಸೇವೆಗೈದ ಪ್ರಧಾನಿಗಳ ಕಾರ್ಯ ಶ್ಲಾಘನೀಯ : ಸಂಸದ ಜಗದೀಶ ಶೆಟ್ಟರ್

ಬೆಳಗಾವಿ : ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ 12 ವರ್ಷ ಹಾಗೂ ಇದೀಗ ದೇಶದ ಪ್ರಧಾನಿಯಾಗಿ 12 ವರ್ಷ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿ ಅವರು ಚುನಾಯಿತ ಸರ್ಕಾರಿ ಮುಖ್ಯಸ್ಥರಾಗಿ ಒಟ್ಟು ಸುಮಾರು 25 ವರ್ಷಗಳ ಸುದೀರ್ಘ ಸೇವೆಯನ್ನು ಪೂರೈಸಿದ್ದಾರೆ.

ದೇಶದ ಪ್ರಧಾನಿಯಾಗಿ ಸತತ 4,399 ದಿನಗಳನ್ನು ಪೂರೈಸುವ ಮೂಲಕ ಭಾರತದ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ ಪ್ರಧಾನಿ  ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಸಾಮಾನ್ಯ ಕಾರ್ಯಕರ್ತನಿಂದ ಜಾಗತಿಕ ನಾಯಕನವರೆಗೆ ಸಾಗಿದ ಅವರ ಪಯಣ ನಿಜಕ್ಕೂ ಅದ್ಭುತವೇ ಸರಿ. ಜವಾಹರ್ ಲಾಲ್ ನೆಹರು ಅವರ ದಾಖಲೆ ಬದಿಗೊತ್ತಿ, ಚುನಾಯಿತ ಪ್ರಧಾನಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಹೆಗ್ಗಳಿಕೆ ಇವರದ್ದು.

370 ನೇ ವಿಧಿಯನ್ನು ರದ್ದುಗೊಳಿಸಿದ್ದು, ರಾಮ ಮಂದಿರದ ಪ್ರತಿಷ್ಠಾಪನೆಯಿಂದ ಹಿಡಿದು, ಉಜ್ವಲ ಯೋಜನೆ, ಜನ ಧನ ಯೋಜನೆ, ಜಲ ಜೀವನ್ ಮಿಷನ್, ಉಡಾನ್, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ವಚ್ಛ ಭಾರತ ಮತ್ತು ಆಯುಷ್ಮಾನ್ ಭಾರತ್‌ ನಂತಹ ಪರಿವರ್ತನಾ ಉಪಕ್ರಮಗಳವರೆಗೆ ಅವರ ಆಡಳಿತದಲ್ಲಿ ಭಾರತದ ಅಭಿವೃದ್ಧಿ ಪ್ರಯಾಣವನ್ನು ಕಾಣಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತ ವಿಶ್ವದ 4 ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ.

ದೇಶದ ಪ್ರಧಾನಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಜನಕಲ್ಯಾಣಕ್ಕಾಗಿ ನಿಷ್ಠೆಯಿಂದ ದುಡಿದ ಮೋದಿಯವರು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು, ಜನರ ಜೀವನ ಮಟ್ಟ ಸುಧಾರಿಸಲು ಶ್ರಮ ವಹಿಸಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಜನರ ಏಳಿಗೆಗಾಗಿ ಕಾರ್ಯೋನ್ಮುಖವಾಗಿರುವ ಮೋದಿಯವರು ದೇಶದ ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ಹಿಂದೆ ಸರಿದಿಲ್ಲ, ದೇಶ ವಿದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಜಾಗತಿಕ ಮಟ್ಟದಲ್ಲಿಯೂ ಜನಮನ್ನಣೆ ಗಳಿಸಿದ್ದಾರೆ. ಉತ್ತಮ ಸ್ನೇಹ ಸಂಬಂಧ ಬೆಳೆಸಿಕೊಂಡು ವ್ಯಾಪಾರ ವಹಿವಾಟಿನ ಒಪ್ಪಂದಗಳನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ದೇಶವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿರುವ ಪ್ರಧಾನಿಗಳ ಸೇವೆ ಹೀಗೆ ಮುಂದುವರೆಯಲಿ, ಭಗವಂತನು ಅವರಿಗೆ ಇನ್ನೂ ಹೆಚ್ಚಿನ ಆಯುರ್ ಆರೋಗ್ಯ ನೀಡಿ ಜನಸೇವೆಯಲ್ಲಿ ತೊಡಗಿಕೊಳ್ಳುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ