Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ.

“ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಹಿಂತಿರುಗಿಸುವಿಕೆ. ಇದನ್ನು ಹೊರತುಪಡಿಸಿ ಮಾತನಾಡಲು ನಮಗೆ ಏನೂ ಇಲ್ಲ. ಪಾಕಿಸ್ತಾನದವರು ಭಯೋತ್ಪಾದಕರನ್ನು ನಮಗೆ ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ ನಾವು ಮಾತನಾಡಬಹುದು. ನಮಗೆಯಾರ ಮಧ್ಯಸ್ಥಿಕೆಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ನಾವು ಹೊಸ ಸಾಮಾನ್ಯ ಸ್ಥಿತಿಯಲ್ಲಿದ್ದೇವೆ. ಅದಕ್ಕಾಗಿಯೇ ನಾವು ‘ಅರ್ಥಮಾಡಿಕೊಳ್ಳುವುದು’ ಮತ್ತು ಗುಂಡಿನ ದಾಳಿಯನ್ನು ನಿಲ್ಲಿಸುವಂತಹ ಪದಗಳನ್ನು ಬಳಸುತ್ತಿದ್ದೇವೆ. ಜಗತ್ತು ಇದನ್ನು ಒಪ್ಪಿಕೊಳ್ಳಬೇಕು. ಪಾಕಿಸ್ತಾನ ಇದನ್ನು ಒಪ್ಪಿಕೊಳ್ಳಬೇಕು, ಅದು ಈ ಮೊದಲಿನಂತೆ ಮುಂದುವರಿಯಲು ಸಾಧ್ಯವಿಲ್ಲ” ಎಂದು ತಿಳಿಸಿದೆ.
ಮೇ 7ರಂದು ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ಸೇನೆ ದಾಳಿ ನಡೆಸಿದ ನಂತರ, ಭಾರತವು ಈ ದಾಳಿಗಳನ್ನು ನಾವು ನಡೆಸಿದ್ದೇವೆ ಎಂದು ಪಾಕಿಸ್ತಾನದ ಡಿಜಿಎಂಒಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದವರು ಮಾತನಾಡಲು ಬಯಸಿದರೆ ಅವರು ಮಾತನಾಡಬಹುದಿತ್ತು. ಆದರೆ ಪಾಕಿಸ್ತಾನ ಮಾತನಾಡಲಿಲ್ಲ, ಬದಲಿಗೆ ಭಾರತದ ಕೆಲ ಸ್ಥಳಗಳ ಮೇಲೆ ದಾಳಿಗಳನ್ನು ಪ್ರಾರಂಭಿಸಿತು. ಪ್ರತೀಕಾರವಾಗಿ ಮೇ 10ರಂದು ಭಾರತ ಪಾಕಿಸ್ತಾನದ ಎಂಟು ವಾಯುನೆಲೆಗಳನ್ನು ನಾಶಪಡಿಸಿದ ಬಳಿಕ ಪಾಕಿಸ್ತಾನದ ಡಿಜಿಎಂಒ ಅವರಿಂದ ಕರೆ ಬಂದು ಅವರು ಕದನ ವಿರಾಮದ ಬಗ್ಗೆ ಮಾತನಾಡಿದರು ಎಂದು ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ