Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ

Advertisement

 ನವದೆಹಲಿ: ಭಾರತದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ‘ಪ್ರಸಾರ ಭಾರತಿ’ಯ ನೂತನ ಅಧ್ಯಕ್ಷರಾಗಿ ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರು ಶನಿವಾರ ನೇಮಕಗೊಂಡಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
54 ವರ್ಷದ ಪ್ರಸೂನ್ ಜೋಶಿ ಅವರು ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಸೃಜನಶೀಲ ಬರಹ ಹಾಗೂ ಸಾಂಸ್ಕೃತಿಕ ಒಳನೋಟಗಳಿಗೆ ಹೆಸರಾಗಿರುವ ಇವರು, ಭಾರತೀಯ ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಜನಪ್ರಿಯ ಚಲನಚಿತ್ರ ಗೀತೆಗಳು ಹಾಗೂ ಪ್ರಭಾವಶಾಲಿ ಜಾಹೀರಾತು ಅಭಿಯಾನಗಳ ಹಿಂದೆ ಇವರ ಪರಿಶ್ರಮವಿದೆ.
ಜೋಶಿ ಅವರ ನೇಮಕಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹರ್ಷ ವ್ಯಕ್ತಪಡಿಸಿದ್ದಾರೆ. “ಪ್ರಸೂನ್ ಜೋಶಿ ಅವರು ಜಾಹೀರಾತು, ಸಾಹಿತ್ಯ ಮತ್ತು ಕಲೆಗಳಲ್ಲಿ ಜಗತ್ತಿನಾದ್ಯಂತ ಗುರುತಿಸಿಕೊಂಡ ಅಪರೂಪದ ಸೃಜನಶೀಲ ಚೇತನ. ಅವರ ನೇತೃತ್ವದಲ್ಲಿ ಪ್ರಸಾರ ಭಾರತಿಯು ಹೊಸ ಶಕ್ತಿ, ಉದ್ದೇಶ ಮತ್ತು ತಾಜಾ ಸೃಜನಶೀಲ ಧ್ವನಿಯನ್ನು ಕಂಡುಕೊಳ್ಳಲಿದೆ ಎಂಬ ನಂಬಿಕೆ ನನಗಿದೆ,” ಎಂದು ಅವರು ತಿಳಿಸಿದ್ದಾರೆ.

ಪ್ರಸೂನ್‌  ಜೋಶಿ  ಬಗ್ಗೆ
CBFC ಅಧ್ಯಕ್ಷ: 2017 ರಿಂದ ಮುಂಬೈನ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಜಾಹೀರಾತು ರಂಗ: ಮೆಕ್ಯಾನ್ ವರ್ಲ್ಡ್ ಗ್ರೂಪ್ ಇಂಡಿಯಾದ ಸಿಇಒ ಮತ್ತು ಏಷ್ಯಾ ಪೆಸಿಫಿಕ್ ವಿಭಾಗದ ಅಧ್ಯಕ್ಷರಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸಿದ್ದಾರೆ.
2016 ರಿಂದ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸಾರ ಭಾರತಿಯ ಬಗ್ಗೆ…
1990ರ ಕಾಯ್ದೆಯಡಿ ಸ್ಥಾಪನೆಯಾಗಿ 1997 ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರಸಾರ ಭಾರತಿಯು ಭಾರತದ ಸ್ವಾಯತ್ತ ಪ್ರಸಾರ ಸಂಸ್ಥೆಯಾಗಿದೆ. ಇದು ಪ್ರಮುಖವಾಗಿ ಆಕಾಶವಾಣಿ (All India Radio) ಹಾಗೂ ದೂರದರ್ಶನ (Doordarshan) ಎಂಬ ಎರಡು ವಿಭಾಗಗಳನ್ನು ಹೊಂದಿದೆ.
ತಾಂತ್ರಿಕ ಬದಲಾವಣೆ ಹಾಗೂ ಬದಲಾಗುತ್ತಿರುವ ಪ್ರೇಕ್ಷಕರ ಬೇಡಿಕೆಗಳಿಗೆ ತಕ್ಕಂತೆ ಸಾರ್ವಜನಿಕ ಪ್ರಸಾರ ವ್ಯವಸ್ಥೆಯನ್ನು ಆಧುನೀಕರಿಸಲು ಜೋಶಿ ಅವರ ಅನುಭವವು ಪೂರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಡಿ ದಾಳಿ ವೇಳೆ ಮಂಜುನಾಥ ಮತ್ತು ಆಪ್ತರ ಬಳಿ ಸಿಕ್ಕಿದ್ದೆಷ್ಟು ಗೊತ್ತೇ ?ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯಮೋದಿ ಪ್ರಧಾನಿಯಾಗಿ 12 ವರ್ಷದ ಸಾಧನೆ : ಬೆಳಗಾವಿಯ ಸಾಹಿತಿಗಳಿಗೆ ಪುಸ್ತಕ ವಿತರಿಸಿದ ಮಾಜಿ ಸಿಎಂ ಹಿಂಡಾಲ್ಕೋ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ..!