Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ ಪ್ರೇಮಚಂದ್ ಜಯಂತಿ

ಬೆಳಗಾವಿ:  ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಿಂದಿ ಸಾಹಿತ್ಯದ ಮಹಾನ್ ಕಾದಂಬರಿಕಾರ ಹಾಗೂ ವಾಸ್ತವವಾದಿ ಲೇಖಕ ಮುಂಶಿ ಪ್ರೇಮಚಂದ್ ಅವರ ಜಯಂತಿಯನ್ನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಸಿ. ಪಾಟೀಲ ಅವರು ಮುಂಶಿ ಪ್ರೇಮಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದರು.  ಅವರು, ಪ್ರೇಮಚಂದ್ ಅವರ ಸಾಹಿತ್ಯವು ಸಮಾಜದ ನೈಜ ಚಿತ್ರಣವನ್ನು ಬಿಂಬಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು, ಸಾಮಾಜಿಕ ಸಮಾನತೆ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಸಾರುತ್ತದೆ. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. 
ಶಿಕ್ಷಣವು ಕೇವಲ ಪದವಿಗಳಿಸುವ ಸಾಧನವಲ್ಲ; ಉತ್ತಮ ನಡತೆ, ಸಂಸ್ಕಾರ ಹಾಗೂ ವ್ಯಕ್ತಿತ್ವವನ್ನು ರೂಪಿಸುವ ಮಹತ್ತರ ಸಾಧನವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಹಿಂದಿ ವಿಭಾಗದ ಮುಖ್ಯಸ್ಥ ಡಾ. ಎಂ. ಎಂ. ಮುತವಳ್ಳಿ ಮಾತನಾಡಿ, ಮುಂಶಿ ಪ್ರೇಮಚಂದ್ ಅವರ ಜೀವನ, ಸಾಹಿತ್ಯಿಕ ಸಾಧನೆ ಹಾಗೂ ವಾಸ್ತವವಾದಿ ಬರವಣಿಗೆಯ ವೈಶಿಷ್ಟ್ಯವನ್ನು ವಿವರಿಸಿದರು.

ಹಿಂದಿ ವಿಭಾಗದ ವಿದ್ಯಾರ್ಥಿಗಳು ಪ್ರೇಮಚಂದ್ ಅವರ ಕಾದಂಬರಿಗಳು, ಕಥೆಗಳು, ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. 

 ಹಿಂದಿ ವಿಭಾಗದ ಉಪನ್ಯಾಸಕಿ ಡಾ. ದೀಪಾ ಅಂಟಿನ್ ಅವರು  ಪರಿಚಯಿಸಿ, ಸ್ವಾಗತಿಸಿದರು.  ಹಿಂದಿ ವಿಭಾಗದ ಉಪನ್ಯಾಸಕಿ ಉಜ್ವಲಾ ಪಾಟೀಲ ಅವರು ವಂದಿಸಿದರು. ವಿದ್ಯಾರ್ಥಿನಿ ನೇತ್ರಾ ನಿರೂಪಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ ಪ್ರೇಮಚಂದ್ ಜಯಂತಿಇದು ನನ್ನ ಮೊದಲ ಮತ್ತು ಕೊನೆಯ ತಪ್ಪು’ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ 15 ವರ್ಷದ ಬಾಲಕಿಯ ಕ್ಷಮೆಯಾಚನೆಬೆಳಗಾವಿ : ಟಿಳಕರ ತತ್ವ ಪಾಲನೆಗೆ ಕಿರಣ ಜಾಧವ ಕರೆವಾಣಿಜ್ಯ ಬಳಕೆ ಎಲ್‌ಪಿಜಿ ದರ ಮತ್ತೆ ಇಳಿಕೆಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !150 ವರ್ಷಗಳ ನಂತರ ಗ್ರಂಥಾಲಯಕ್ಕೆ ವಾಪಸ್ ಬಂದ ಅಪರೂಪದ ಪುಸ್ತಕ ; ಈಗ ಅದರ ದಂಡದ ಮೊತ್ತವೇ ₹19 ಲಕ್ಷ…!ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆಕಾರು ಹರಿದು 48 ಕುರಿಗಳ ಸಾವುಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ ಕೆ ಶಿವಕುಮಾರ್ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌