Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನಧಿಕೃತವಾಗಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ

 

ಬೆಳಗಾವಿ :
ಆರೈಕೆ ಮತ್ತು ರಕ್ಷಣೆಗೆ ಅವಶ್ಯಕತೆ ಇರುವ ಯಾವುದೇ ವ್ಯಕ್ತಿ ಸಂಘ ಸಂಸ್ಥೆಗಳಲ್ಲಿ ಮಕ್ಕಳನ್ನು ಇರಿಸಿಕೊಳ್ಳಲು ಬಾಲನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆ 2015 ನಿಯಮಗಳು 2016 ಹಾಗೂ ತಿದ್ದುಪಡಿ 2022 ರಡಿಯಲ್ಲಿ ಸೆಕ್ಷನ್ 41 ರ ಅನ್ವಯ ಕಡ್ಡಾಯವಾಗಿ ನೋಂದಣಿ ಮಾಡುವದು ಅವಶ್ಯವಿರುತ್ತದೆ.

ನೋಂದಣಿ ಇಲ್ಲದೇ ಮಕ್ಕಳನ್ನು ಅಭಿರಕ್ಷಣೆಯಲ್ಲಿ ಇಟ್ಟುಕೊಂಡಿದ್ದೇ ಆದರೆ ಕಾನೂನು ಬಾಹಿರ ಅಭಿರಕ್ಷಣೆ ಎಂದು ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು/ಸಂಘ ಸಂಸ್ಥೆಗಳು ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆದು ಬಾಲನ್ಯಾಯ ಕಾಯ್ದೆ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಮಕ್ಕಳನ್ನು ತಮ್ಮ ಸಂಸ್ಥೆಯಲ್ಲಿ ಅನಧಿಕೃತವಾಗಿ ಇಟ್ಟುಕೊಂಡಿರುವದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ಬಂದಿರುತ್ತದೆ.

ಹಾಗಾಗಿ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ, ಸಂಘ-ಸಂಸ್ಥೆಗಳು, ಮಠಗಳು, ಚರ್ಚಗಳು, ಮಸೀದಿಗಳು ಅದರಂತೆ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸದೇ ಮಕ್ಕಳನ್ನು ಮೂಲಭೂತ ಹಕ್ಕುಗಳಿಂದ ವಂಚನೆಗೊಳಪಡಿಸುವುದು ಕಂಡು ಬಂದಿರುತ್ತದೆ. ಅದರಂತೆ ಯಾರಾದರೂ ಮಕ್ಕಳ ಪಾಲನಾ ಸಂಸ್ಥೆ, ಮಕ್ಕಳ ಕುಠೀರ, ಅನಾಥ ಆಶ್ರಮ, ದೇವರ ಮನೆ, ಮಕ್ಕಳ ತಂಗುಧಾಮ ತೆರೆದು ಮಕ್ಕಳನ್ನು ಆರೈಕೆ ಮಾಡುತ್ತೇವೆ ಎಂಬ ಆಸಕ್ತಿಯನ್ನು ಹೊಂದಿದ್ದರೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಿ (ರೂಂ ನಂ-೨೦೪, ೨ನೆ ಮಹಡಿ, ಸುವರ್ಣ ವಿಧಾನಸೌಧ, ಬೆಳಗಾವಿ- ೮೦೭೩೯೭೨೯೨೯) ಮಾಹಿತಿಯನ್ನು ಪಡೆದು ಬಾಲನ್ಯಾಯ ಕಾಯ್ದೆಯಡಿಯಲ್ಲಿ ಪ್ರಸ್ತಾವನೆ ಸಲ್ಲಿಸಬೇಕು.

ಸದರಿ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಸ್ಥಳಕ್ಕೆ ಭೇಟಿ ಮಾಡಿ ಮಕ್ಕಳ ಮೂಲಭೂತ ಸೌಕರ್ಯಗಳ ಕುರಿತು ಖಾತರಿ ಪಡಿಸಿಕೊಂಡ ನಂತರವೇ ಕಾನೂನಿನ ಪ್ರಕಾರ ಸದರಿ ಸಂಸ್ಥೆಯನ್ನು ನೋಂದಾಯಿಸಿ ಪ್ರಮಾಣಪತ್ರ ನೀಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಹೆಚ್ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ