Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಮರಿಗಳ ರಕ್ಷಣೆ

ಪುತ್ತೂರು : ಹಾವು ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪಗಳು ಎಂದರೆ ಹೆದರದೆ ಇರುವವರೇ ವಿರಳ ಎನ್ನಬಹುದು. ಆದರೆ ತಂತ್ರಜ್ಞಾನ ಮುಂದುವರಿದಂತೆ ಹಾವುಗಳ ಬಗ್ಗೆ ಇರುವ ಭಯ ಕಡಿಮೆಯಾಗುತ್ತಿದೆ.

ಇಲ್ಲೊಂದು ಅಂತಹ ಅಪರೂಪದ ಘಟನೆ ನಮ್ಮ ಮುಂದಿದೆ. ಅನಾಥವಾಗಿದ್ದ ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಸುಮಾರು 25 ಕ್ಕೂ ಅಧಿಕ ಮರಿಗಳನ್ನು ಮಾಡಿ ಅವುಗಳನ್ನು ಸುರಕ್ಷಿತವಾಗಿ ರಕ್ಷಿತಾರಣ್ಯದೊಳಗೆ ಬಿಟ್ಟು ಬಿಡುವ ಮೂಲಕ ಯುವ ಉರಗ ಪ್ರೇಮಿ ಪುತ್ತೂರು ತಾಲೂಕಿನ ಸ್ನೇಕ್ ತೇಜಸ್ ಬನ್ನೂರು ಅವರು ಮಾನವೀಯತೆ ಮೆರೆದಿದ್ದಾರೆ.

ತಾಯಿ ಹಾವುಗಳಿಲ್ಲದೆ ಅನಾಥವಾಗಿರುವ ಮೊಟ್ಟೆಗಳನ್ನು ಶ್ರೇಯಸ್‌ ಅರಣ್ಯ ಇಲಾಖೆಯ ಅನುಮತಿಯೊಂದಿಗೆ ತಮ್ಮ ಮನೆಗೆ ಕೊಂಡೊಯ್ದು ಅವುಗಳಿಗೆ ಕೃತಕ ಕಾವನ್ನು ನೀಡುವ ವ್ಯವಸ್ಥೆ ಮಾಡುತ್ತಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿಂದ ಸಂಗ್ರಹಿಸಿದ 12 ಮೊಟ್ಟೆ ಹಾಗೂ ಕನ್ಯಾನ ಎಂಬಲ್ಲಿಂದ ಸಂಗ್ರಹಿಸಿದ 13 ಮೊಟ್ಟೆಗಳಿಗೆ ಕೃತಕ ಕಾವು ನೀಡಿ ಮರಿ ಮಾಡುವ ಮೂಲಕ ವಿವಿಧ ಅರಣ್ಯ ಪ್ರದೇಶಗಳಲ್ಲಿ ಬಿಟ್ಟಿದ್ದಾರೆ.
ತೇಜಸ್ ಬನ್ನೂರು 25 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ರಕ್ಷಿಸಿ ಬೇರೆ ಬೇರೆ ಅರಣ್ಯಕ್ಕೆ ಬಿಡುವ ಮೂಲಕ ತನ್ನ ಉರಗಪ್ರೇಮವನ್ನು ತೋರಿಸಿಕೊಟ್ಟಿದ್ದಾರೆ.

ಅವರೇ ಹೇಳುವಂತೆ ಇದುವರೆಗೆ ಸುಮಾರು 100 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ಕಾಡಿಗೆ ಬಿಟ್ಟು ಹೆಬ್ಬಾವುಗಳ ಸಂತತಿಯನ್ನು ಸಂರಕ್ಷಣೆ ಮಾಡಿದ್ದಾರೆ. ಹೆಚ್ಚಾಗಿ ಮರದ ಪೊಟರೆಯೊಳಗೆ, ಬಿದ್ದ ತೆಂಗಿನ ಮರದ ಟೊಳ್ಳಾದ ಭಾಗದಲ್ಲಿ ಹೆಬ್ಬಾವುಗಳು ಮೊಟ್ಟೆಗಳನ್ನು ಇಡುತ್ತವೆ. ಸುಮಾರು 60 ದಿನಗಳ ಕಾಲ ಹೆಬ್ಬಾವುಗಳು ಮರಿಗಳಿಗೆ ಕಾವು ನೀಡುತ್ತದೆ. ಹಾವುಗಳಲ್ಲಿ ಹೆಬ್ಬಾವು ಮತ್ತು ಕಾಳಿಂಗ ಸರ್ಪ ಮಾತ್ರ ತಮ್ಮ ಮೊಟ್ಟೆಗಳಿಗೆ ಕಾವು ನೀಡುವ ಮೂಲಕ ಮರಿ ಮಾಡುವ ಹಾವುಗಳು. ಮಾನವ ಅಥವಾ ಇತರ ಪ್ರಾಣಿಗಳ ತೊಂದರೆಯಾದಾಗ ಹೆಬ್ಬಾವು ಮತ್ತು ಕಾಳಿಂಗ ಸರ್ಪ ತಮ್ಮ ಮೊಟ್ಟೆಗಳನ್ನು ಬಿಟ್ಟು ಬೇರೆಡೆ ಸಾಗುತ್ತದೆ. ಹೀಗೆ ಸಾಗಿದ ಸಂದರ್ಭದಲ್ಲಿ ಮೊಟ್ಟೆಗಳು ಕಾವಿಲ್ಲದೆ ಅನಾಥವಾಗಿ ಹಾಳಾಗುವ ಸಾಧ್ಯತೆಗಳೂ ಹೆಚ್ಚಾಗಿರುತ್ತದೆ. ಅಂತಹ ಮೊಟ್ಟೆಗಳು ಕಂಡು ಬಂದಾಗ ತೇಜಸ್ ಅವರು ಅದನ್ನು ಸಂರಕ್ಷಣೆ ಮಾಡಿ ಕೃತಕ ಕಾವು ನೀಡುವ ಮೂಲಕ ಜೀವಸೃಷ್ಟಿಯನ್ನು ಮಾಡಿ ಪ್ರಕೃತಿಗೆ ಸೇರ್ಪಡೆ ಮಾಡುವ ಕಾಯಕ ಮಾಡುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ