Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಬಾಣಂತಿ, ಹಸುಳೆ ಸಾವು ಪ್ರತಿಭಟಿಸಿ ಪ್ರತಿಭಟನೆ

 

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಣಂತಿಯರು ಹಾಗೂ ಹಸುಗೂಸುಗಳ ಸಾವಿನ ಪ್ರಕರಣ ತಡೆಗಟ್ಟಬೇಕು ಎಂದು ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ- ಕಮ್ಯುನಿಸ್ಟ್ (ಎಸ್‌ಯುಸಿಐ) ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು, ಧರಣಿ ನಡೆಸಿದರು.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು, ಹಸುಗೂಸುಗಳ ಸಾವು ದಿನೇದಿನೇ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಸಾವಿನ ಪ್ರಮಾಣ ತಡೆಗಟ್ಟಲು ಸಂಪೂರ್ಣ ವಿಫಲವಾಗಿದೆ. ಈ ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಗುಣಮಟ್ಟದ ಔಷಧೋಪಚಾರ ಇಲ್ಲದಿರುವುದೇ ಕಾರಣ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯದ ಎಲ್ಲ ಕಡೆಯೂ ಗರ್ಭಿಣಿಯರು, ಬಾಣಂತಿಯರ ಸಾವು ನಿರಂತರ ಸಂಭವಿಸುತ್ತಿವೆ. ಆದರೆ, ಸರ್ಕಾರ ಎಲ್ಲವನ್ನೂ ಮುಚ್ಚಿ ಹಾಕುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಸರ್ಕಾರಿ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇತ್ತೀಚಿನ ದಿನಗಳಲ್ಲಿ ಕಳಪೆ ಔಷಧಿಗಳು ಹಾಗೂ ವೈದ್ಯಕೀಯ ನಿರ್ಲಕ್ಷದಿಂದಾಗಿ ಬೆಳಗಾವಿ, ಬಳ್ಳಾರಿ, ಚಿಗಟೇರಿ, ಸಿದ್ದಾಪುರ ಸೇರಿ ವಿವಿಧ ಕಡೆಗಳಲ್ಲಿ ಬಾಣಂತಿಯರು, ಹಸುಗೂಸುಗಳು ಸಾವನ್ನಪ್ಪಿವೆ. ಹಲವಾರು ಆಸ್ಪತ್ರೆಗಳಲ್ಲಿ ಅಗತ್ಯ ನುರಿತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲ ಸೌಕರ್ಯಗಳೇ ಇಲ್ಲ' ಎಂದು ಎಸ್‌ಯುಸಿಐ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ಡಳ್ಳಿ ಆರೋಪಿಸಿದರು.

ರಾಜ್ಯದಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ. ಅವಶ್ಯಕತೆಯ ಶೇ 30ರಷ್ಟು ಮಾತ್ರ ಔಷಧಗಳು ಉಗ್ರಾಣದಲ್ಲಿ ಇವೆ. ಎಲ್ಲ ಗೊತ್ತಿದ್ದರೂ ಸಂಬಂಧಿಸಿದ ಸಚಿವರು ಕಣ್ಣುಮುಚ್ಚಿ ಕುಳಿತಿದ್ದಾರೆ. ಮಾತ್ರವಲ್ಲ; ಔಷಧಿಗಳ ಕೊರತೆಯಿಂದ ಸಾವು ಸಂಭವಿಸುತ್ತಿದ್ದರೂ ಬಜೆಟ್‌ನಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದೂ ದೂರಿದರು.

ಎಐಕೆಕೆಎಂಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಲಕ್ಷ್ಮಣ ಜಡಗನ್ನವರ ಮಾತನಾಡಿ, ಬೆಳಗಾವಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಆಗರಗಳಾಗಿವೆ. ವೈದ್ಯರು, ನರ್ಸ್‌, ಸಿಬ್ಬಂದಿ ಇಲ್ಲ. ಆಧುನಿಕ ಯಂತ್ರೋಪಕರಣಗಳಿಲ್ಲ. ಗುಣಮಟ್ಟದ ಔಷಧಿಗಳು ಬೇಕಾದರೆ ಖಾಸಗಿ ಆಸ್ಪತ್ರೆಗಳಿಗೆ ಬರೆದು ಕೊಡುತ್ತಿದ್ದಾರೆ.
ಆರೋಗ್ಯ ರಕ್ಷಣೆಗೆ ಬರುವ ರೋಗಿಗಳು ಮತ್ತಷ್ಟು ಅನಾರೋಗ್ಯ ಪೀಡಿತರಾಗುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಬಾಣಂತಿಯರು ಮೃತಪಡುತ್ತಿದ್ದಾರೆ ಎಂದು ಆರೋಪ ಮಾಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಕಾರ್ಯಕರ್ತರನ್ನು ಮಧ್ಯದಲ್ಲೇ  ತಡೆದ ಪೊಲೀಸರು ಪುರಾಣ ಪ್ರಸಿದ್ಧ ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ   ಗಣೇಶನ ಮೂರ್ತಿ ರಕ್ಷಣೆಗೆ ಈ ಕ್ರಮನೀಟ್‌ ಪೇಪರ್ ಲೀಕ್ ವಿವಾದ ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವಿನೀತ್ ಜೋಶಿ ಎತ್ತಂಗಡಿ, ಇಬ್ಬರು ಕಾರ್ಯದರ್ಶಿಗಳ ನೇಮಕಕೇಂದ್ರದ ಭರವಸೆ: ಸೊನಮ್ ವಾಂಗ್ಚೂಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್‌ಗೆ  ಬೆಳಗಾವಿ ಮಾರ್ಗದ ಕೂಗು: ಏನಿದು ಹೊಸ ತಿರುವು?ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಇಂದುಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು ?ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ