Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟಿಳಕವಾಡಿ, ತಾನಾಜಿಗಲ್ಲಿಯಲ್ಲಿ ನಿರ್ಮಾಣವಾಗುತ್ತಾ ರೈಲ್ವೆ ಮೇಲ್ಸೇತುವೆ ?

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಮಂಗಳವಾರ ನಗರದ ವಿವಿಧ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆಗೆ ಮಹತ್ವದ ಚರ್ಚೆ ನಡೆಸಿದರು. ರೇಲ್ವೆ ಇಲಾಖೆಯ ಎಲ್ ಸಿ ನಂ: 381(ಟಿಳಕವಾಡಿ ಗೇಟ್ ನಂ:3) ಹತ್ತಿರ ನಿರ್ಮಾಣ ಹಂತದಲ್ಲಿರುವ ರಸ್ತೆ ಮೇಲು ಸೇತುವೆ ಎರಡನೇ ಲೇನ್ ಕಾಮಗಾರಿ ಹಾಲಿ ಸ್ಥಗಿತಗೊಂಡಿರುವ ಬಗ್ಗೆ ವಿಷಯ ತಿಳಿಯಲು ಸ್ಥಳಕ್ಕೆ ಭೇಟಿ ನೀಡಿ ರೇಲ್ವೆ ಇಲಾಖೆ ಅಭಿಯಂತರರೊಡನೆ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರೊಡನೆ ಚರ್ಚಿಸಿದರು. ಸದ್ಯ ಇರುವ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲು ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಸಂಸದರು ಸೂಚಿಸಿದರು.

ಅದರಂತೆ ಒಂದನೇ ಲೇನ್ ರಸ್ತೆಯಲ್ಲಿ ಈಗಾಗಲೇ ಕಾಣಿಸಿಕೋಂಡಿರುವ ಗುಂಡಿಗಳನ್ನು ದುರಸ್ತಿ ಮಾಡುವಂತೆ ಸೂಚಿಸಿದರು.

ರೇಲ್ವೆ ಇಲಾಖೆಯ ಎಲ್ ಸಿ ನಂ: 382 (ಟಿಳಕವಾಡಿ ಗೇಟ್ ನಂ:2) ಮತ್ತು 383 ( ಟಿಳಕವಾಡಿ ಗೇಟ್ ನಂ: 1 ) ಹತ್ತಿರ ನೂತನವಾಗಿ ನಿರ್ಮಾಣವಾಗ ಬೇಕಾದ ರಸ್ತೆ ಮೇಲು ಸೇತುವೆ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆದು ಈ ನಿಟ್ಟಿನಲ್ಲಿ ಸಹ ಕಾಮಗಾರಿಯನ್ನು ಪ್ರಾರಂಭಿಸುವ ಬಗ್ಗೆ ಕ್ರಮ ವಹಿಸಲು ರೇಲ್ವೆ ಇಲಾಖೆ ಅಭಿಯಂತರರಿಗೆ ಹಾಗೂ ಮಹನಗರ ಪಾಲಿಕೆ ಅಭಿಯಂತರರಿಗೆ ಸೂಚನೆ ನೀಡಿದರು.

ಅದರಂತೆ ಬೆಳಗಾವಿ ನಗರದ ತಾನಾಜಿ ಗಲ್ಲಿಯ ಎಲ್ ಸಿ ನಂ: 386 ಹತ್ತಿರ ನಿರ್ಮಾಣ ಆಗಬೇಕಾದ "ರಸ್ತೆ ಮೇಲು ಸೇತುವೆ" ಬಗ್ಗೆ ಅಲ್ಲಿನ ನಿವಾಸಿಗಳ ಅನಿಸಿಕೆಯನ್ನು ಪಡೆದು ಈ ಕುರಿತು ಸಾರ್ವಜನಿಕರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಕೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಅಭಯ ಪಾಟೀಲ, ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚವಾಣ, ಮಾಜಿ ಶಾಸಕ ಅನಿಲ ಬೆನಕೆ, ನಗರ ಸೇವಕರಾದ ವಾಣಿ ಜೋಶಿ, ರಾಜು ಭಾತಖಂಡೆ, ವಿನೋದ ಭಾಗವತ್, ರೇಲ್ವೆ, ಲೋಕೋಪಯೋಗಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಭಿಯಂತರರು, ಸಾರ್ವಜನಿಕರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ