Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ಮೂವರು ಸೇರಿ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಜೂನ್ 4) ತನ್ನ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕದಿಂದ ಮತ್ತೊಮ್ಮೆ ಕಣಕ್ಕಿಳಿಸಲಾಗಿದ್ದು, ಅವರೊಂದಿಗೆ ಪಕ್ಷದ ಪ್ರಮುಖ ನಾಯಕರಾದ ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಅವರಿಗೂ ಕರ್ನಾಟಕದಿಂದಲೇ ಟಿಕೆಟ್ ನೀಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ ಈ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಜೂನ್ 18 ರಂದು ದೇಶದ ವಿವಿಧ ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್
ತಲಾ 4 ಸ್ಥಾನಗಳು, ಮಧ್ಯಪ್ರದೇಶ, ರಾಜಸ್ಥಾನತಲಾ 3 ಸ್ಥಾನಗಳು, ಜಾರ್ಖಂಡ್2 ಸ್ಥಾನಗಳು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಕರ್ನಾಟಕದ ಮೂವರು ನಾಯಕರ ಜೊತೆಗೆ ಇತರ ರಾಜ್ಯಗಳಿಗೂ ಪ್ರಮುಖ ಮುಖಗಳನ್ನು ಆಯ್ಕೆ ಮಾಡಲಾಗಿದೆ:
ಕರ್ನಾಟಕ: ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್
ಮಧ್ಯಪ್ರದೇಶ: ಮೀನಾಕ್ಷಿ ನಟರಾಜನ್ (ಮಾಜಿ ಸಂಸದೆ)
ತಮಿಳುನಾಡು: ಪ್ರವೀಣ ಚಕ್ರವರ್ತಿ (ಕಾಂಗ್ರೆಸ್‌ನ ದತ್ತಾಂಶ ವಿಶ್ಲೇಷಣೆ ಮತ್ತು ವೃತ್ತಿಪರರ ವಿಭಾಗದ ಮುಖ್ಯಸ್ಥ)
ರಾಜಸ್ಥಾನ: ನೀರಜ್ ಡಾಂಗಿ
ಜಾರ್ಖಂಡ್: ಪ್ರಣವ್ ಝಾ ಅವರಿಗೆ ಟಿಕೆಟ್‌ ನೀಡಲಾಗಿದೆ.
ರಾಜ್ಯಸಭಾ ಚುನಾವಣೆ 2026: ಸಂಪೂರ್ಣ ಚಿತ್ರಣ
ಹಾಲಿ ಸಂಸದರ ನಿವೃತ್ತಿಯಿಂದ ತೆರವಾಗುತ್ತಿರುವ 24 ಸ್ಥಾನಗಳ ಭರ್ತಿಗಾಗಿ ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ. ಹಾಲಿ ಸದಸ್ಯರ ನಿವೃತ್ತಿ ಅವಧಿಯು ಜೂನ್ 21 ರಿಂದ ಜುಲೈ 19 ರ ನಡುವೆ ವಿವಿಧ ದಿನಾಂಕಗಳಲ್ಲಿದ್ದು, ಒಟ್ಟು 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಮತ್ತು ದಿಗ್ವಿಜಯ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರ ಅವಧಿ ಮುಕ್ತಾಯಗೊಳ್ಳುತ್ತಿದೆ.
ರಾಜ್ಯಸಭೆಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು,  ನಾಮಪತ್ರ ಸಲ್ಲಿಕೆಗೆ ಕೊನೆಯ ಜೂನ್ 8  ಕೊನೆಯ ದಿನವಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ