Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಸಭೆ ಚುನಾವಣೆ ರಣತಂತ್ರ : ಅಧಿವೇಶನ ಮತ್ತೊಂದು ದಿನ ವಿಸ್ತರಣೆ

 

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಉದ್ಯಮಿ ಮತ್ತು ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರಕಾರ ಇದೀಗ ವಿಧಾನ ಮಂಡಲದ ಅಧಿವೇಶನವನ್ನು ಮತ್ತೊಂದು ದಿನಕ್ಕೆ ವಿಸ್ತರಿಸಲು ಮುಂದಾಗಿದೆ.

ಶುಕ್ರವಾರ ಅಂತ್ಯವಾಗಬೇಕಿದ್ದ ವಿಧಾನಮಂಡಲ ಬಜೆಟ್‌ ಅಧಿವೇಶನದ ಅವಧಿಯನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲಾಗಿದೆ. ಸೋಮವಾರವೂ ಉಭಯ ಸದನಗಳಲ್ಲಿ ಕಲಾಪ ನಡೆಯಲಿದೆ.

ಮಂಗಳವಾರ ರಾಜ್ಯಸಭೆಯ ಚುನಾವಣೆ ನಡೆಯುವುದರಿಂದ ಶಾಸಕರನ್ನು ಹಿಡಿದಿಡಲು ಅನುಕೂಲವಾಗುತ್ತದೆ ಎಂಬ ಉದ್ದೇಶವೂ ಅಡಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇದೀಗ ಸೋಮವಾರವು ಅಧಿವೇಶನ ಮುಂದುವರಿಸಲು ತೀರ್ಮಾನಿಸಿದೆ.

ಶುಕ್ರವಾರ ಬೆಳಿಗ್ಗೆ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಯು.ಟಿ.ಖಾದರ್‌ ಈ ವಿಷಯ ಪ್ರಕಟಿಸಿದರು.ಶುಕ್ರವಾರ ಬೆಳಗ್ಗೆ ನಡೆದ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಅಧಿವೇಶನವನ್ನು ಫೆ.26ರವರೆಗೆ ವಿಸ್ತರಿಸಲಾಗಿದೆ. ಸಿಎಂ ಬಜೆಟ್ ಮೇಲಿನ ಚರ್ಚೆಗೆ ಸೋಮವಾರ ಉತ್ತರ ನೀಡಲಿದ್ದಾರೆ ಎಂದು ಪ್ರಕಟಿಸಿದರು.
ಪೂರ್ವ ನಿಗದಿಯಂತೆ ಅಧಿವೇಶನ ಶುಕ್ರವಾರ ಮುಗಿಯಬೇಕಾಗಿತ್ತು. ಅಧಿವೇಶನ ವಿಸ್ತರಣೆ ನಿರ್ಣಯದ ಹಿನ್ನೆಲೆಯಲ್ಲಿ ಕಾರ್ಯ ಸೂಚಿ ಪ್ರಕಾರ ಅಧಿವೇಶನ ನಡೆಸಲು ಶಾಸಕರು ಸಹಕರಿಸಬೇಕು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ