Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯೋತ್ಸವ ಸಂಭ್ರಮ

 

ಬೆಳಗಾವಿ :
ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 67 ನೇ ಕರ್ನಾಟಕ ರಾಜ್ಯೋತ್ಸವ ಮಂಗಳವಾರ ಸಂಭ್ರಮದಿಂದ ನೆರವೇರಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ.ಪಿ.ಜಿ. ಕೆಂಪಣ್ಣವರ ಮಾತನಾಡಿ, ಕನ್ನಡ ಭಾಷೆ ಸಾಹಿತ್ಯಕ್ಕೆ ಬಹಳ ಪ್ರಾಚೀನ ಇತಿಹಾಸ ಇದೆ. ಎರಡು ಸಾವಿರ ವರ್ಷಗಳ ಭವ್ಯ ಪರಂಪರೆ ಸದ್ಯಕ್ಕೆ ಕಾಣಸಿಗುತ್ತದೆ. ಕನ್ನಡದಲ್ಲಿ ಲಭಿಸಿರುವ ಹಲ್ಮಿಡಿ ಶಾಸನ ಅತ್ಯಂತ ಪುರಾತನ ಶಾಸನ ಎಂದೆನಿಸಿದರೂ ತಾಳಗುಂದ ಸೇರಿದಂತೆ ಹಲವು ಶಾಸನಗಳು ಅತ್ಯಂತ ಪ್ರಾಚೀನವಾಗಿದ್ದು ಕನ್ನಡ ಭಾಷೆಗೆ ಇರುವ ಭವ್ಯತೆಯನ್ನು ಸಾಕ್ಷೀಕರಿಸುತ್ತವೆ. ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು 1956 ರಲ್ಲಿ ಭಾಷಾ ಪ್ರಾಂತ್ಯವಾಗಿ ಮೊದಲಿಗೆ ಮೈಸೂರು ಹೆಸರಿನಲ್ಲಿ ಅಸ್ತಿತ್ವಕ್ಕೆ ತರಲಾಯಿತು. ನಂತರ ಕರ್ನಾಟಕ ಎಂಬ ಹೆಸರಿನಲ್ಲಿ ಮರುನಾಮಕರಣ ಮಾಡಲಾಯಿತು ಎಂದು ಹೇಳಿದರು.

ಉಜ್ವಲ ಭಾಷಾ ಇತಿಹಾಸ, ಪರಂಪರೆ ಹೊಂದಿರುವ ಕನ್ನಡವನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಇಂದಿನ ತಾಂತ್ರಿಕ ಯುಗದಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹಲವು ಸವಾಲು ಎದುರಾಗಿದ್ದರೂ ಅವುಗಳನ್ನು ಎದುರಿಸಿ ಭಾಷೆಯನ್ನು ಪ್ರಬಲವಾಗಿ ಕಟ್ಟುವ ಕೆಲಸಕ್ಕೆ ನಾವೆಲ್ಲ ಮುಂದಾಗಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಶಿಲ್ಪಾ ರಾಯ್ಕರ್ ಕಾರ್ಯಕ್ರಮ ಆಯೋಜಿಸಿದ್ದರು. ಸ್ನೇಹಾ ಕುಲಕರ್ಣಿ ಪ್ರಾರ್ಥಿಸಿದರು. ಪ್ರೊ.ಅಶ್ವಿನಿ ಪರಬ್ ಸ್ವಾಗತ ಹಾಗೂ ಪರಿಚಯಿಸಿದರು. ಪ್ರೊ. ಎಸ್. ಎಸ್. ಹೆಗ್ಡೆ, ಪ್ರೊ.ಎಂ. ಎಸ್. ಕುಲಕರ್ಣಿ ಕನ್ನಡ ಗೀತೆ ಹಾಡಿದರು. ಪ್ರೊ. ಚೇತನ ಕುಮಾರ್ ವಂದಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ