Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿ ರಾಮನಗೌಡ ಕನ್ನೊಳ್ಳಿ ನೇಮಕ

ಬೆಳಗಾವಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿ ರಾಮನಗೌಡ ಕನ್ನೊಳ್ಳಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಜಂಟಿ ನಿರ್ದೇಶಕರಾಗಿದ್ದ ಪ್ರವೀಣ ಶಿಂತ್ರಿ ಅವರನ್ನು ರಾಜ್ಯ ಸರ್ಕಾರ ಇದೀಗ ಎತ್ತಂಗಡಿ ಮಾಡಿದೆ. ಅವರು ಬೆಳಗಾವಿಯಲ್ಲಿ ಜಂಟಿ ನಿರ್ದೇಶನರಾಗಿ ಕೇವಲ ಐದು ತಿಂಗಳು ಮಾತ್ರ ಕಾರ್ಯನಿರ್ವಹಿಸಿದ್ದರು. ಅವರು ಪ್ರಾಮಾಣಿಕ, ದಕ್ಷ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳ ಪಾಲಿನ ದೇವರು ಎನಿಸಿಕೊಂಡಿದ್ದರು. ಆದರೆ, ಬೆಳಗಾವಿ ಜಿಲ್ಲೆಯ ರಾಜಕೀಯ ಒತ್ತಡದ ಕಾರಣದಿಂದ ಅವರನ್ನು ಅಷ್ಟರಲ್ಲೇ ವರ್ಗಾವಣೆ ಮಾಡಲಾಗಿದೆ.



ಆದರೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಮೂರು ವರ್ಷಗಳ ಅವಧಿಯಲ್ಲಿ ಬೆಳಗಾವಿಯಲ್ಲಿ ಕೆಲಸ ಮಾಡಿದ್ದ ರಾಮನಗೌಡ ಕನ್ನೊಳಿ ಅವರು ಸಹಾ ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಜನ ಮೆಚ್ಚುಗೆ ಗಳಿಸಿದ್ದರು. ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳ ಅತ್ಯಂತ ಪ್ರೀತಿ ಪಾತ್ರ ಅಧಿಕಾರಿ ಎನಿಸಿಕೊಂಡಿದ್ದರು. ಜೊತೆಗೆ ತಮ್ಮ ಇಲಾಖೆಯಲ್ಲಿ ಇರುವ ಎಲ್ಲಾ ಸಿಬ್ಬಂದಿಗಳನ್ನು ತಮ್ಮ ಮನೆಯವರು ಎಂಬಂತೆ ನೋಡಿಕೊಂಡು ಪ್ರತಿಯೊಬ್ಬರ ಪ್ರೀತ್ಯಾಧಾರಗಳಿಗೆ ಕಾರಣವಾಗಿದ್ದರು. ಈ ಹಿಂದೆ ಅವರ ಬಿಳ್ಕೊಡುಗೆ ಸಮಾರಂಭದಲ್ಲಿ ಎಲ್ಲರೂ ಕಣ್ಣೀರು ಹಾಕಿದ್ದೆ ಅವರ ಸೇವಾಗುಣಕ್ಕೆ ಸಾಕ್ಷಿ. ಇದೀಗ ಅವರು ಮತ್ತೆ ಬೆಳಗಾವಿಗೆ ಆಗಮಿಸಿದ್ದು ಜಿಲ್ಲೆಯ ಜನತೆಗೆ ಅವರ ಸೇವೆ ಲಭ್ಯವಾಗುತ್ತಿದೆ. ಆದರೆ, ಅವರು ಜಿಲ್ಲೆಯ ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯದಿರಲಿ, ತಮ್ಮ ಪ್ರಾಮಾಣಿಕ ಹಾಗೂ ದಕ್ಷಸೇವೆಯನ್ನು ಮತ್ತೆ ಮುಂದುವರಿಸುವಂತಾಗಲಿ ಎನ್ನುವುದು ಜನತೆಯ ಆಗ್ರಹವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿಯಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಕಾರ್ಯಕರ್ತರನ್ನು ಮಧ್ಯದಲ್ಲೇ  ತಡೆದ ಪೊಲೀಸರು ಪುರಾಣ ಪ್ರಸಿದ್ಧ ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ   ಗಣೇಶನ ಮೂರ್ತಿ ರಕ್ಷಣೆಗೆ ಈ ಕ್ರಮನೀಟ್‌ ಪೇಪರ್ ಲೀಕ್ ವಿವಾದ ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವಿನೀತ್ ಜೋಶಿ ಎತ್ತಂಗಡಿ, ಇಬ್ಬರು ಕಾರ್ಯದರ್ಶಿಗಳ ನೇಮಕಕೇಂದ್ರದ ಭರವಸೆ: ಸೊನಮ್ ವಾಂಗ್ಚೂಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್‌ಗೆ  ಬೆಳಗಾವಿ ಮಾರ್ಗದ ಕೂಗು: ಏನಿದು ಹೊಸ ತಿರುವು?ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಇಂದುಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು ?ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರರಾಜಕೀಯ ಪ್ರಚೋದನೆಗೆ ವಿದ್ಯಾರ್ಥಿಗಳು ಬಲಿಯಾಗಬೇಡಿ: ಬಿಜೆಪಿ ಮುಖಂಡ ಕಿರಣ ಜಾಧವನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ