Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆಯಿಂದ ರಾಮಾಯಣ ಪ್ರಸಾರ

 

ನವದೆಹಲಿ:
ಮೂರು ದಶಕಗಳ ಹಿಂದೆ ರಮನಂದ ಸಾಗರ್‌ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರವರಿ 5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ.

ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ.

ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ... ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ 'ರಾಮಾಯಣ' ಬರಲಿದೆ ಎಂದು ಡಿಡಿ ನ್ಯಾಷನಲ್‌ ಎಕ್ಸ್‌ನಲ್ಲಿ ತಿಳಿಸಿದೆ.

80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನು ಈ ಧಾರಾವಾಹಿ ಗಳಿಸಿತ್ತು.

ಕೊರೊನಾ ಲಾಕ್‌ಡೌನ್‌ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದುಕೊಂಡಿತ್ತು.

1987ರ ಜೂನ್ 25ರಿಂದ 1988ರ ಜುಲೈ 31ರವರೆಗೆ ಪ್ರತೀ ರವಿವಾರ ಮುಂಜಾನೆ ಪ್ರಸಾರವಾಗುತ್ತಿದ್ದ ರಮಾನಂದ ಸಾಗರ್ ಅವರ ಮೆಗಾ ಧಾರಾವಾಹಿ‌ ʻರಾಮಾಯಣʼ ಭಾರತದಲ್ಲಿ ಹೊಸ ಸಂಚಲನ ಹುಟ್ಟು ಹಾಕಿತ್ತು. ಇದೀಗ ಮತ್ತೆ ‘ರಾಮಾಯಣ’ ಮರು-ಪ್ರಸಾರವನ್ನು ಪ್ರಾರಂಭಿಸಲಿದೆ. ʻರಾಮಾಯಣʼವನ್ನು ಡಿಡಿ ನ್ಯಾಷನಲ್‌ ಫ.5ರಿಂದ ಮರು ಪ್ರಸಾರ ಮಾಡುತ್ತಿದೆ.

1987-88ರ ಅವಧಿಯಲ್ಲಿ ಪ್ರತೀ ಆದಿತ್ಯವಾರ ಮುಂಜಾನೆ ಈ ಧಾರಾವಾಹಿಯನ್ನು ದೂರದರ್ಶನದ ಮೂಲಕ ಪ್ರಸಾರ ಆದಾಗ ಅದು ಜಾಗತಿಕ ದಾಖಲೆಯನ್ನು ಮಾಡಿತ್ತು. ಇದೀಗ ಡಿಡಿ ನ್ಯಾಷನಲ್‌ ಫ.5ರಿಂದ ಪ್ರತಿದಿನ ಸಂಜೆ 6ಗಂಟೆ ಹಾಗೂ ಮರುದಿನ ಮಧ್ಯಾಹ್ನ 12ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿಕೊಂಡಿದೆ.

ಕೊರೊನಾ ಲಾಕ್‌ಡೌನ್‌ ವೇಳೆಯೂ ʻರಾಮಾಯಣʼ ಧಾರಾವಾಹಿ ಪ್ರಸಾರ ಕಂಡಿತ್ತು. ಲಕ್ಷಾಂತರ ಜನರನ್ನು ವೀಕ್ಷಿಸಿದ್ದರು. ʻಮತ್ತೆ ರಾಮಾಯಣ ಕಾರ್ಯಕ್ರಮವನ್ನು ಪ್ರಸಾರ ಮಾಡಿ ಎಂದು ಸಾರ್ವಜನಿಕರು ಬೇಡಿಕೆ ಇಟ್ಟಿದ್ದಾರೆ. ಪ್ರೇಕ್ಷಕರಿಗೆ ಆಕರ್ಷಕ ಮನರಂಜನೆಯನ್ನು ಒದಗಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆʼ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆ ನೀಡಿದೆ.

ಸಂಜಯ್ ಜೋಗ್ ಅವರು ಭರತ, ಅಂಜಲಿ ವ್ಯಾಸ್ ಅವರು ಊರ್ಮಿಳಾ, ಅರವಿಂದ ತ್ರಿವೇದಿ ಅವರು ರಾವಣ, ಲಲಿತಾ ಪವಾರ್ ಅವರು ಮಂಥರೆ ಪಾತ್ರದಲ್ಲಿ ನಟಿಸಿದ್ದರು. ಆಗಿನ ಕಾಲಕ್ಕೆ ಒಂದು ಸಂಚಿಕೆಗೆ (ಅವಧಿ 45 ನಿಮಿಷ) ಒಂಬತ್ತು ಲಕ್ಷ ಖರ್ಚು ಮಾಡಿದ್ದ ಈ ಧಾರಾವಾಹಿ ಅದ್ಧೂರಿಯ ಸೆಟ್ ಮತ್ತು ಮೇಕಿಂಗ್ ಮೂಲಕ ಜನಪ್ರಿಯತೆ ಪಡೆಯಿತು. ಪ್ರತೀ ಕಂತನ್ನು ಅಂದಾಜು 77 ಮಿಲಿಯನ್ ಮಂದಿ ವೀಕ್ಷಣೆ ಮಾಡಿದ್ದರು ಎಂದು ವರದಿಯಾಗಿದೆ. ಐದು ಖಂಡಗಳ 17 ದೇಶಗಳು ಈ ಧಾರಾವಾಹಿಯನ್ನು ಪ್ರಸಾರ ಮಾಡಿದವು.

ಈ ಧಾರಾವಾಹಿಯ ಜನಪ್ರಿಯತೆಯಿಂದ ಪ್ರಭಾವಿತವಾಗಿ ರಮಾನಂದ್ ಸಾಗರ್ ಅವರು ಅದರ ಎರಡನೇ ಭಾಗವಾದ ರಾಮಾಯಣದ ಉತ್ತರ ಕಾಂಡದ ಲವ ಕುಶರ ಕತೆಯನ್ನು ಧಾರಾವಾಹಿ ಮಾಡಿದರು.‌ ಅದೂ ಪ್ರಸಾರವಾಗಿ ಜನಪ್ರಿಯವಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ