Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಷಿಪ್ರ ಬೆಳವಣಿಗೆ : ಹೊಸ ಸಿಎಂ ಆಯ್ಕೆ

ಶಿಮ್ಲಾ : ಹರಿಯಾನದಲ್ಲಿ ಬಿಜೆಪಿ- ಜೆಜೆಪಿ ಮೈತ್ರಿ ಮುರಿದು ಬಿದ್ದ ಬಳಿಕ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದು, ಇದೀಗ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಗಿದೆ.

ಮಂಗಳವಾರ ಸಂಜೆ 5 ಗಂಟೆಗೆ ನಯಾಬ್ ಸಿಂಗ್ ಸೈನಿ ಅವರು ಹರ್ಯಾಣದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಇಡೀ ಕ್ಯಾಬಿನೆಟ್ ಹರ್ಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಈ ನೇಮಕ ನಡೆದಿದೆ.
ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧೆ ನಡೆಸಲಿದ್ದಾರೆ ಎನ್ನಲಾಗಿದೆ.

ಕುರುಕ್ಷೇತ್ರ ಸಂಸದ ಮತ್ತು ಒಬಿಸಿ ಸಮುದಾಯದ ನಾಯಕ ನಯಾಬ್ ಸಿಂಗ್ ಸೈನಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

1996 ರಲ್ಲಿ ಬಿಜೆಪಿಯೊಂದಿಗೆ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, ಹರಿಯಾಣ ಬಿಜೆಪಿಯ ಸಾಂಸ್ಥಿಕ ರಚನೆಯಲ್ಲಿ ಪ್ರಾರಂಭಿಸಿ ಕ್ರಮೇಣ ಮೇಲೇರಿದವರು. ಸೈನಿ ಅವರು 2002 ರಲ್ಲಿ ಅಂಬಾಲಾದಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ನಂತರ 2005 ರಲ್ಲಿ ಅಂಬಾಲಾದಲ್ಲಿ ಜಿಲ್ಲಾ ಅಧ್ಯಕ್ಷರಾದರು.
ಅವರು 2014 ರಲ್ಲಿ ನಾರಾಯಣಗಢ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು ಮತ್ತು ನಂತರ 2016 ರಲ್ಲಿ ಹರಿಯಾಣ ಸರ್ಕಾರದಲ್ಲಿ ಸಚಿವರಾಗಿ ನೇಮಕಗೊಂಡರು. 2019 ರ ಲೋಕಸಭಾ ಚುನಾವಣೆಯಲ್ಲಿ, ಸೈನಿ ಕುರುಕ್ಷೇತ್ರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ