Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಐಎಎಸ್ ವರ್ಗಾವರ್ಗಿ ; ಬೆಳಗಾವಿಯಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ರವಿಕುಮಾರ್ ಈಗ ಜಿಲ್ಲಾಧಿಕಾರಿ !

 

ಬೆಂಗಳೂರು :
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿ ಬಹು ಜನಪ್ರಿಯರಾಗಿದ್ದ ರವಿಕುಮಾರ್ ಅವರಿಗೆ ಇದೀಗ ಜಿಲ್ಲಾಧಿಕಾರಿ ಹುದ್ದೆ ಒಲಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರವಿಕುಮಾರ್ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದಾಗ ಇಲ್ಲಿಯ ರಸ್ತೆ ಅಗಲೀಕರಣಕ್ಕೆ ಒತ್ತು ನೀಡಿದ್ದರು. ಯಾವುದೇ ಒತ್ತಡ ಬಂದರೂ ಅವುಗಳಿಗೆ ಮಣಿಯದೆ ದಶಕಗಳಿಂದ ಕೊಳೆಯುತ್ತಾ ಬಿದ್ದಿದ್ದ ರಸ್ತೆ ಅಗಲೀಕರಣಗೊಳಿಸಿ ಜನಮಾನಸದಲ್ಲಿ ನೆಲೆಯಾಗಿದ್ದರು. ಖಡಕ್ ಅಧಿಕಾರಿ ಎಂದೇ ಜನಪ್ರಿಯರಾಗಿದ್ದ ರವಿಕುಮಾರ್ ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಇತರ ಅಧಿಕಾರಿಗಳ ವರ್ಗಾವರ್ಗಿ :
ರಾಜ್ಯ ಸರ್ಕಾರವು ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಐಎಎಸ್ ಅಧಿಕಾರಿ ಶೆಟ್ಟೆಣ್ಣನವರ್ ಎಸ್. ಬಿ. ಅವರನ್ನು ಹಟ್ಟಿ ಗೋಲ್ಡ್ ಮೈನಿಂಗ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಂಜುನಾಥ್ ಜೆ ಅವರನ್ನು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಅನ್ನೀಸ್ ಕಣ್ಮಣಿ ಜೋಯ್ ಅವರನ್ನು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್‌ನ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದೆ. ಚಾರುಲತಾ ಸೋಮಲ್ ಅವರನ್ನು ನವದೆಹಲಿಯ ಕರ್ನಾಟಕ ಭವನದ ಎಆರ್‌ಸಿ ಆಗಿ ನೇಮಿಸಿದೆ.

ಐಎಎಸ್ ಅಧಿಕಾರಿ ಬಸವರಾಜೇಂದ್ರ ಹೆಚ್ ಅವರನ್ನು ಸ್ಕಿಲ್ ಡೆಲವೆಲಪ್‌ಮೆಂಟ್, ಎಂಟರ್ ಪ್ರೈನರ್ ಮತ್ತು ಲೈವ್ಲಿ ಹುಡ್ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಕವಿತಾ ಎಸ್‌ ಮನ್ನಿಕೇರಿ ಅವರನ್ನು ಬೆಂಗಳೂರಿನ ಕರ್ನಾಟಕ ಹೌಸಿಂಗ್‌ ಬೋರ್ಡ್‌ ಆಯುಕ್ತರನ್ನಾಗಿ ನೇಮಿಸಲಾಗಿದೆ.
ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಆಗಿದ್ದ ರವಿಕುಮಾರ ಎಂ.ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಡಾ.ವಾಸಂತಿ ಅಮರ ಬಿ.ವಿ. ಅವರನ್ನು ಕೆಎಸ್‌ಎಂಸಿಎಲ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುದ್ದೆಯಿಂದ ಬೆಂಗಳೂರು ನಗರ ಉತ್ತರ ವಿಭಾಗದ ವಿಶೇಷ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ