Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಚಿತ್ರರಂಗದ ಪ್ರಸಿದ್ದ ಹಿರಿಯ ನಿರ್ದೇಶಕ ಎಸ್ .ಕೆ. ಭಗವಾನ್ (95) ನಿಧನರಾಗಿದ್ದಾರೆ

 

ಸುಮಾರು 20 ವರ್ಷದಿಂದ ಹೃದಯದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ, ಸೋಮವಾರ ಬೆಳಗ್ಗೆ 6.10ರಲ್ಲಿ ಅವರು ಇಹಲೋಕ ತ್ಯಜಿಸಿದರು. ಮಧ್ಯಾಹ್ನ 12.30ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಭಗವಾನ್‌ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮೈಸೂರಿನಲ್ಲಿ ಜನಿಸಿದ್ದ ಎಸ್‌.ಕೆ.ಭಗವಾನ್‌ ಬೆಂಗಳೂರಿನಲ್ಲಿ ಶಿಕ್ಷಣ ಪಡೆದರು. ಹಿರಣ್ಣಯ್ಯ ಮಿತ್ರ ಮಂಡಳಿ ನಾಟಕಗಳ ಮೂಲಕ ಬಣ್ಣದ ಬದುಕನ್ನು ಆರಂಭಿಸಿದ್ದ ಭಗವಾನ್‌, ‘ಭಾಗ್ಯೋದಯ’ ಸಿನಿಮಾ ಮೂಲಕ ನಟನಾಗಿ ಚಿತ್ರರಂಗಕ್ಕೆ ಹೆಜ್ಜೆ ಇಟ್ಟರು. ಕ್ಯಾಮೆರಾಮೆನ್‌ ಆಗಿದ್ದ ದೊರೆರಾಜ್‌ ಜೊತೆಗೆ ಮದ್ರಾಸ್‌ ನಲ್ಲಿದ್ದುಕೊಂಡು, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ, ವರನಟ ಡಾ.ರಾಜ್‌ಕುಮಾರ್‌ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.ದೊರೆ–ಭಗವಾನ್‌ ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿತ್ತು. ‘ಜೇಡರ ಬಲೆ’ ದೊರೆ–ಭಗವಾನ್‌ ಜೋಡಿಯ ನಿರ್ದೇಶನದ ಮೊದಲ ಸಿನಿಮಾ. ‘ಗೋವಾದಲ್ಲಿ ಸಿ.ಐ.ಡಿ 99’, ‘ಆಪರೇಷನ್‌ ಡೈಮಂಡ್‌ ರಾಕೆಟ್‌’,‘ಆಪರೇಷನ್‌ ಜಾಕ್‌ಪಾಟ್‌ನಲ್ಲಿ ಸಿ.ಐ.ಡಿ 999’, ‘ಗಿರಿಕನ್ಯೆ’, ‘ಎರಡು ಕನಸು’, ‘ನಾನೊಬ್ಬ ಕಳ್ಳ’ ಹೀಗೆ ರಾಜ್‌ಕುಮಾರ್‌ ಅವರ 32 ಚಿತ್ರಗಳಿಗೆ ನಿರ್ದೇಶಕರಾಗಿ ಭಗವಾನ್‌ ಕಾರ್ಯನಿರ್ವಹಿಸಿದ್ದರು.

‘ಚಂದನದ ಗೊಂಬೆ’, ‘ಮುನಿಯನ ಮಾದರಿ’, ‘ಗಾಳಿ ಮಾತು’, ‘ಕಸ್ತೂರಿ ನಿವಾಸ’, ಹೊಸ ಬೆಳಕು ಮುಂತಾದುವುಗಳು ಅವರ ಇತರೆ ಸಿನಿಮಾಗಳು.

ಭಗವಾನ್‌ ಅವರ ಪಾರ್ಥಿವ ಶರೀರವನ್ನು ಸಹಕಾರ ನಗರದಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ