Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶೀಘ್ರವೇ ಕಿತ್ತೂರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಮನವಿ

 

ಬೆಳಗಾವಿ :
ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣವಾಗಿ
ಎರಡು ವರ್ಷಗಳಾದರೂ ಇನ್ನೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೆಂದೇ
ಕರೆಯಲಾಗುತ್ತಿದೆ. ಸಾರಿಗೆ ಸಂಸ್ಥೆಗೆ ಕಿತ್ತೂರು
ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇಂದು ರಾಜ್ಯ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಅವರನ್ನು ಆಗ್ರಹಿಸಿದೆ.

ಸುವರ್ಣ ವಿಧಾನ ಸೌಧದಲ್ಲಿ ಕ್ರಿಯಾ ಸಮಿತಿ ಅಧ್ಯಕ್ಷ
ಅಶೋಕ ಚಂದರಗಿ ನೇತೃತ್ವದ ನಿಯೋಗ, 2019 ರ ಸಪ್ಟೆಂಬರ್ 7 ರಂದು ಹೈದ್ರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಎಂದು ಮರುನಾಮಕರಣ ಮಾಡಿದ
ಕೂಡಲೇ ಅಲ್ಲಿಯ ಸಾರಿಗೆ ಸಂಸ್ಥೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯೆಂದು
ಮರುನಾಮಕರಣ ಮಾಡಲಾಯಿತೆಂದು
ಸಚಿವರ ಗಮನಕ್ಕೆ ತಂದರಲ್ಲದೇ
2021 ರ ಅಕ್ಟೋಬರ 23 ರಂದು ಮುಂಬಯಿ ಕರ್ನಾಟಕಕ್ಕೆ ಕಿತ್ತೂರು
ಕರ್ನಾಟಕ ಎಂದು ಮರುನಾಮಕರಣ
ಮಾಡಿದ್ದರೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಸರನ್ನೇ
ಮುಂದುವರಿಸಲಾಗಿದೆ ಎಂದರು.

ಶೀಘ್ರವೇ ಕಿತ್ತೂರು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಕ್ರಮ ಕೈಕೊಳ್ಳಲಾಗುವದೆಂದು ಸಾರಿಗೆ ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.

ನಿಯೋಗದಲ್ಲಿ ರಮೇಶ ಸೊಂಟಕ್ಕಿ,ಮೈನುದ್ದೀನ್.ಮಕಾನದಾರ,ಶಂಕರ ಬಾಗೇವಾಡಿ, ವಿರೇಂದ್ರ ಗೋಬರಿ ಮುಂತಾದವರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ