Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RLS ವಿಶ್ರಾಂತ ಪ್ರಾಧ್ಯಾಪಕ ಅಪ್ಪಣ್ಣ ಪೂಜಾರ ನಿಧನ

ಬೆಳಗಾವಿ: ಬೆಳಗಾವಿ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಅಪ್ಪಣ್ಣ ಪೂಜಾರ (61)ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಗೋಕಾಕ ತಾಲೂಕು ಮಸರಗುಪ್ಪಿ ಗ್ರಾಮದವರಾದ ಅಪ್ಪಣ್ಣ ಪೂಜಾರ ಅವರು ಕಳೆದ 32 ವರ್ಷಗಳಿಂದ ಆರ್‌ಎಲ್ಎಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸರಳ ಸಜ್ಜನಿಕೆ, ನಯ-ವಿನಯ ವ್ಯಕ್ತಿತ್ವದ ಅವರು ಅಪಾರ ಸ್ನೇಹಿತ ಬಳಗದ ಜೊತೆಗೆ ಒಡನಾಟ ಹೊಂದಿದ್ದರು.

ಅಪ್ಪಣ್ಣ ಪೂಜಾರ್ ಅವರ ನಿಧನಕ್ಕೆ ಆರ್ ಎ ಲ್ಎಸ್ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

ಎಸ್.ವಿ.ದಳವಾಯಿ ಸಂತಾಪ: ನನ್ನ ಸಹೋದ್ಯೋಗಿ ಮಿತ್ರ ಪ್ರೊ.ಅಪ್ಪಣ್ಣ ಪೂಜಾರ್ ನಮ್ಮನ್ನು ಅಗಲಿದ ಸುದ್ದಿ ತಿಳಿಸಲು ವಿಷಾದವೆನಿಸುತ್ತಿದೆ. ಸ್ಫುರದ್ರೂಪಿ ಹಾಗೂ ಸ್ನೇಹಮಯಿ ಸ್ವಭಾವದ ಅಪ್ಪಣ್ಣ ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ಒಪ್ಪಿಕೊಳ್ಳುತ್ತಿದ್ದರು ಮತ್ತು ಅಪ್ಪಿಕೊಳ್ಳುತ್ತಿದ್ದರು. ಪರರನ್ನು ನಿಂದಿಸುವ, ದ್ವೇಷಿಸುವ ಮಾತುಗಳನ್ನು ಅವರಿಂದ ನಾವೆಂದೂ ಕೇಳಲಿಲ್ಲ. ಸದಾ ಹಸನ್ಮುಖಿ. ಯಾರಿಗೂ ಕೇಡನ್ನು ಬಯಸದವ. RLS
ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಎಲ್ಲರೂ ಮೆಚ್ಚುವಂತೆ ಸೇವೆ ಸಲ್ಲಿಸಿ ವರ್ಷದ ಹಿಂದಷ್ಟೇ ನಿವೃತ್ತಿ ಪಡೆದ ಅಪ್ಪಣ್ಣ ಪೂಜಾರ್ ಇಷ್ಟು ಬೇಗ ನಮ್ಮನ್ನು ಅಗಲಿದ್ದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅವರ ಆಪ್ತ ಸ್ನೇಹಿತರು ಹಾಗೂ ಆರ್ ಎಲ್ ಎಸ್ ಭೌತಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಎಸ್.ವಿ. ದಳವಾಯಿ ಅವರು ಕಂಬನಿ ಮಿಡಿದಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ