Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು ...! ದೇವರಿಗೆ ಪತ್ರ ಬರೆದ ಭಕ್ತ

ಬೆಳಗಾವಿ : ರಾಮದುರ್ಗ ಪಡಕೋಟಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾಣಿಕೆ ಹುಂಡಿಯಲ್ಲಿ ಪತ್ರವೊಂದು ಲಭಿಸಿದ್ದು ಅದರಲ್ಲಿ ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು ಎಂದು ಬರೆದು ಹಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

 ಇತ್ತೀಚಿಗೆ ಕಾಣಿಕೆ ಹುಂಡಿ ಎಣಿಕೆ ಮಾಡುವಾಗ ಈ ಪತ್ರ ಲಭಿಸಿದೆ. ಪತ್ರದಲ್ಲಿ ಶ್ರೀ ಗಣಪತಿಯೇ ನಮಃ, ರಾಘವೇಂದ್ರಾಯ ನಮಃ.. ರಾಯರೇ ನಮ್ಮನ್ನು ಆ ವಿಷದಿಂದ ಕಾಪಾಡು. ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು. ರಾಯರಿದ್ದಾರೆ ನಮ್ಮ ಜೊತೆ. ಹೀಗಾಗಿ ಅವರಲ್ಲಿ ನನ್ನ ಕಷ್ಟವನ್ನು ಕೇಳಿಕೊಳ್ಳುತ್ತಿದ್ದೇನೆ. ಗುರುಗಳೇ ಕಾಪಾಡು, ಧನ್ಯವಾದಗಳು ಎಂದು ಬರೆಯಲಾಗಿದೆ.

ಪತ್ರ ಬರೆದ ವ್ಯಕ್ತಿಯ ಹೆಸರು, ವಿಳಾಸ ಮುಂತಾದ ಮಾಹಿತಿ ಬರೆದಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಠದ ಉತ್ಸವ ಕಮಿಟಿ ಗೌರವಾಧ್ಯಕ್ಷ ಪವನ್ ದೇಶಪಾಂಡೆ ಅವರು, ಪ್ರತಿ ಸಲದಂತೆ ನಾವು ಕಾಣಿಕೆ ಹುಂಡಿ ತೆಗೆದು ಎಣಿಕೆ ಆರಂಭಿಸಿದ್ದೆವು. ಆಗ ಈ ಪತ್ರ ಸಿಕ್ಕಿದ್ದು ಅಚ್ಚರಿ ತಂದಿದೆ. ಸಾಮಾನ್ಯವಾಗಿ ಭಕ್ತರು ದೇವರಲ್ಲಿ ಆರೋಗ್ಯ, ಐಶ್ವರ್ಯ, ನೆಮ್ಮದಿ ಕರುಣಿಸುವಂತೆ ಪ್ರಾರ್ಥನೆ ಮಾಡುತ್ತಾರೆ. ಆದರೆ ಈ ಪತ್ರ ವಿಚಿತ್ರವಾಗಿದೆ. ನಮ್ಮ ಮಠದಲ್ಲಿ ಸಿಕ್ಕಿರುವ ಇಂಥ ಬರವಣಿಗೆಯ ಮೊದಲ ಪತ್ರ ಇದು. ಇದನ್ನು ಬರೆದವರು ಯಾರು ಎಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ