Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಭರ್ಜರಿ ಮೆರವಣಿಗೆ

 

ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್‌ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಶಾಸಕರಾದ ರಾಜು ಸೇಠ್‌, ಬಾಬಾ ಸಾಹೇಬ್‌ ಪಾಟೀಲ, ವಿಶ್ವಾಸ ವೈದ್ಯ, ಮಹೇಂದ್ರ ತಮ್ಮಣ್ಣವರ್, ಮಾಜಿ ಶಾಸಕ ಶಾಮ್‌ ಘಾಟಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್‌ ಮುಖಂಡರು ನೂತನ ಸಚಿವರಿಗೆ ಸಾಥ್‌ ನೀಡಿದರು.

ಮುಗಿಲು ಮುಟ್ಟಿದ ಸಂಭ್ರಮ: ಕರ್ನಾಟಕ ಸರಕಾರದಲ್ಲಿ ನೂತನವಾಗಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್‌ ಮುಖಂಡರು, ಅಭಿಮಾನಿಗಳು, ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ ನಗರದ ವಿವಿಧೆಡೆ ನಡೆದ ಮೆರವಣಿಗೆಯಲ್ಲಿ ನೂತನ ಸಚಿವರನ್ನು ನೋಡಿದ ಜನರು ಕೈ ಬೀಸಿ ಶುಭ ಹಾರೈಸಿದರು.

ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು: ನಗರದ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಹೂ ಮಾಲೆ ಅರ್ಪಿಸುವ ಸಮಯದಲ್ಲಿ ಅವರ ಅಪಾರ ಅಭಿಮಾನಿಗಳು ಪಟಾಕಿ ಸಿಡಿಸಿ ಜಯಘೋಷ ಹಾಕುವುದರ ಮೂಲಕ ಸಂಭ್ರಮಿಸಿದರು. ಜಿಲ್ಲೆಯ ನಾನಾ ಕಡೆಗಳಿಂದ ಕಾಂಗ್ರೆಸ್‌ ಪಕ್ಷ ದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹೂ ಮಾಲೆಗಳನ್ನು ಸಮರ್ಪಿಸಿ ಶುಭ ಕೋರಿದರು.

ಗಮನ ಸೆಳೆದ ಸ್ವಾಗತ ಕೋರುವ ಕಟೌಟ್ ಗಳು: ನಗರದ ರಾಣಿ ಚನ್ನಮ್ಮ ವೃತ್ತ, ಗೋವಾವ್ಹೇಸ್ ನ ವಿಶ್ವಗುರು ಬಸವೇಶ್ವರ ವೃತ್ತ ಬಳಿ ಹಾಗೂ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ದೊಡ್ಡ ಗಾತ್ರದ ಕಟೌಟ್ ಗಳು ರಾರಾಜಿಸಿದವು. ಅಲ್ಲದೇ ಸಂಕಮ್ ಹೋಟೆಲ್ ರಸ್ತೆ, ಅಶೋಕ ವೃತ್ತ ಸಂಗೊಳ್ಳಿ ರಾಯಣ್ಣ ವೃತ್ತ, ಕೋರ್ಟ್ ರಸ್ತೆ, ಅಂಬೇಡ್ಕರ್ ರಸ್ತೆ ಸೇರಿ ನಗರದ ಪ್ರಮುಖ‌ ರಸ್ತೆಗಳಲ್ಲಿ ಶುಭಾಶಯ ಮತ್ತು ಸ್ವಾಗತ ಕೋರುವ ಕಟೌಟ್ ಗಳು ಎಲ್ಲರ ಗಮನ ಸೆಳೆದವು.

ಬೈಕ್ ರ್ಯಾಲಿ: ನಗರಕ್ಕೆ ಆಗಮಿಸಿದ ನೂತನ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಲು ಅವರ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ತೆರೆದ ವಾಹನದಲ್ಲಿ ನೂತನ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಮೆರವಣಿಗೆ ನಡೆಸಿದ್ದು, ಕಾಂಗ್ರೆಸ್‌ ಭವನದಿಂದ ರಾಣಿ ಚನ್ನಮ್ಮ ವೃತ್ತ , ಡಾ. ಬಿ.ಆರ್.ಅಂಬೇಡ್ಕರ್, ಧರ್ಮವೀರ ಸಂಭಾಜಿ ಮಹಾರಾಜ, ವಿಶ್ವಗುರು ಬಸವೇಶ್ವರ, ಸಂಗೊಳ್ಳಿ ರಾಯಣ್ಣ ಸೇರಿ ಮುಂತಾದ ಮಹಾಪುರುಷರ ಪುತ್ಥಳಿಗಳಿಗೆ ನೂತನ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರು ಗೌರವ ಅರ್ಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ