Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತೀಶ ಜಾರಕಿಹೊಳಿಗೆ ಒಲಿಯುತ್ತ ಕೆಪಿಸಿಸಿ ಸಾರಥ್ಯ ?

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆ ಮುಗಿದು, ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಒಬ್ಬರಿಗೆ ಒಬ್ಬ ಹುದ್ದೆ ಎನ್ನುವ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ಡಿ.ಕೆ.ಶಿವಕುಮಾರ್ ಕೆಳಗೆ ಇಳಿಯಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಬೇರೆ ಬೇರೆ ಕಾರಣದಿಂದ ಆ ಪ್ರಕ್ರಿಯೆ ಮುಂದಕ್ಕೆ ಹೋಗುತ್ತಲೇ ಇತ್ತು. ಈಗ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆಯ ಸುದ್ದಿ ಮತ್ತೆ ಮುನ್ನಲೆಗೆ ಬರುತ್ತಿದೆ.

ಸದ್ಯದಲ್ಲೇ ಅಂದರೆ ಮುಂಬರುವ ಸಂಕ್ರಾಂತಿಯ ಒಳಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ಸಿಗೆ ಹೊಸ ಅಧ್ಯಕ್ಷರು ಬರುವುದು ಖಾತ್ರಿ ಎಂದು ಹೇಳಲಾಗುತ್ತಿದೆ. ಹೆಚ್ಚುವರಿ ಡಿಸಿಎಂ ಸೃಷ್ಟಿಯ ವಿಚಾರ ರಾಜ್ಯ ರಾಜಕೀಯದಲ್ಲಿ ಜೋರಾಗಿ ಸದ್ದು ಮಾಡುತ್ತಿದ್ದ ವೇಳೆ, ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷರಿಗೆ ಕೌಂಟರ್ ಕೊಡಬೇಕು ಎನ್ನುವ ಆಯಾಮದಲ್ಲಿ ನಾನೂ ಆಕಾಂಕ್ಷಿ ಎಂದು ಹೇಳಿದ್ದರು. ಅದರಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕೂಡಾ ಒಬ್ಬರು. ನನಗೆ ಅಧ್ಯಕ್ಷ ಹುದ್ದೆ ಕೊಡುವುದಾದರೆ, ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದ ಎನ್ನುವ ಮಾತನ್ನು ರಾಜಣ್ಣ ಆಡಿದ್ದರು. ಸಿಎಂ ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ರಾಜಣ್ಣ ಅವರ ಹೆಸರು, ಸದ್ಯ ರೇಸಿನಲ್ಲಿರುವ ಇಬ್ಬರ ಪೈಕಿ ಇಲ್ಲ ಎನ್ನುವುದು ಖಾತ್ರಿಯಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲಾ ಕೆಲವು ತಿಂಗಳ ಹಿಂದೆ ರಾಜ್ಯದ ಎಲ್ಲಾ ಸಚಿವರಿಗೆ ತಮ್ಮತಮ್ಮ ಕಾರ್ಯಾಲಯದ ಕೆಲಸ ಮತ್ತು ಒಟ್ಟಾರೆ ಅಭಿಪ್ರಾಯದ ಬಗ್ಗೆ ವಿವರಣೆಯನ್ನು ಕೇಳಿದ್ದರು. ಆದರೆ, ಕೆಲವರು ಹೊರತಾಗಿ ಯಾರೂ ಇದನ್ನು ಸೀರಿಯಸ್ಸಾಗಿ ತೆಗೆದುಕೊಂಡಿರಲಿಲ್ಲ. ಈಗ, ಉಪ ಚುನಾವಣೆ ಮುಗಿದಿರುವುದರಿಂದ ಅಧ್ಯಕ್ಷ ಹುದ್ದೆಯ ಪ್ರಕ್ರಿಯೆಯನ್ನು ಮುಗಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳಿಂದ ಪಕ್ಷನಿಷ್ಠೆ ತೋರಿರುವರು ಮತ್ತು ಜಾತಿ ಆಧಾರಿತವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.

ಅರಣ್ಯ ಸಚಿವ ಮತ್ತು ಲಿಂಗಾಯತ ಸಮುದಾಯದ ಈಶ್ವರ ಖಂಡ್ರೆ ಮತ್ತು ಲೋಕೊಪಯೋಗಿ ಇಲಾಖೆಯ ಸಚಿವ ಮತ್ತು ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ, ಇಬ್ಬರೂ ನಾಯಕರು ಕೆಲವು ದಿನಗಳ ಮಟ್ಟಿಗೆ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಜೊತೆಗೆ, ಸಚಿವ ಸ್ಥಾನದಲ್ಲೂ ಮುಂದುವರಿಯುವ ಇರಾದೆಯನ್ನು ವ್ಯಕ್ತ ಪಡಿಸುತ್ತಿರುವುದು ಹೈಕಮಾಂಡ್ ಈ ವಿಚಾರದಲ್ಲಿ ಮತ್ತೆ ಚಿಂತನೆ ನಡೆಸುವಂತೆ ಮಾಡಿದೆ. ಡಿ.ಕೆ.ಶಿವಕುಮಾರ್ ಅವರು ಸುಮಾರು ಒಂದೂವರೆ ವರ್ಷದಿಂದ ಎರಡೂ ಹುದ್ದೆಯನ್ನು ನಿಭಾಯಿಸುತ್ತಿಲ್ಲವೇ ಎನ್ನುವುದು ಇವರ ವಾದ ಎಂದು ಹೇಳಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ